ಸರ್ಕಾರಿ ಖಾತೆಯಿಂದ ಹಣ ಎಗರಿಸಿದ್ದ ಮೂವರ ಬಂಧನ

ಹಣ ಎಗರಿಸುವಲ್ಲಿ ಬ್ಯಾಂಕ್ ಅಧಿಕಾರಿ ಸಹಕಾರ !

Team Udayavani, Oct 12, 2020, 8:01 PM IST

ಸರ್ಕಾರಿ ಖಾತೆಯಿಂದ ಹಣ ಎಗರಿಸಿದ್ದ ಮೂವರ ಬಂಧನ

ಸಾಂದರ್ಭಿಕ ಚಿತ್ರ

ಯಾದಗಿರಿ: ಜಿಲ್ಲೆಯ ಸುರಪುರ ತಹಸೀಲ್ದಾರರ ನೈಸರ್ಗಿಕ ವಿಕೋಪ ವಿರ್ವಹಣೆಯ ಖಾತೆಯಿಂದ 75,59,900 ರೂಪಾಯಿ ವರ್ಗಾವಣೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಚಾಲಾಕಿ ಗ್ಯಾಂಗ್ ಸರ್ಕಾರಿ ಖಜಾನೆಯ ಮೇಲೆಯೇ ಕಣ್ಣಿರಿಸಿ ನಕಲಿ ಸೀಲ್ ಬಳಸಿ ಹಣವನ್ನು ಎಗರಿಸಿದ್ದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಸುರಪುರ ನಗರದ ಆಕ್ಸಿಸ್ ಬ್ಯಾಂಕ್‌ನಲ್ಲಿ ತಹಸೀಲ್ದಾರ ಕಚೇರಿಯ ಖಾತೆ ಸಂಖ್ಯೆ 91901008033954
ಯಲ್ಲಿದ್ದ 3.55 ಕೋಟಿ ಹಣದಲ್ಲಿ ಜೂನ್ 1 ರಂದು ಬರೋಬ್ಬರಿ 75,59,900 ರೂಪಾಯಿ ಬೇರೆ ಖಾತೆ ವರ್ಗವಾಗಿತ್ತು. ತಹಸೀಲ್ದಾರರು ಕೋವಿಡ್‌ಗೆ ತುತ್ತಾಗಿ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರಿಂದ ಈ ಬಗ್ಗೆ ಯಾರ ಗಮನಕ್ಕೂ ಬಂದಿರಲಿಲ್ಲ. ತಹಸೀಲ್ದಾರರ ಸಹಿಯಿಲ್ಲದೇ ಹಣ ತೆಗೆಯಲು ಸಾಧ್ಯವೇ ಇಲ್ಲ. ಆದರೆ ಇಲ್ಲಿ ತಾಳಿಕೋಟೆಯ ಮಹಾಲಕ್ಷ್ಮೀ ಎಂಟರ್ ಪ್ರೈಸೆಸ್‌ನ ಲಕ್ಷ್ಮೀ ಕಟ್ಟಿಮನಿ ಅವರ ಪತಿ ರಾಜು ಕಟ್ಟಿಮನಿ ಹಾಗೂ ಆಕ್ಸಿಸ್ ಬ್ಯಾಂಕ್‌ನ ಸೇಲ್ಸ್ ಅಧಿಕಾರಿ ವಿಜಯಕುಮಾರ ಚೌದ್ರಿ ಎನ್ನುವವರು ಖಾತೆಗೆ ಕನ್ನ ಹಾಕಿದ್ದರು.

ತಹಸೀಲ್ದಾರರು ಸೋಂಕಿನಿಂದ ಗುಣಮುಖಗೊಂಡು ಮರಳಿದ ವೇಳೆ ಹೆಚ್ಚುವರಿ ಹಣ ಬೇಕಿದ್ದಲ್ಲಿ ಕೋರಿಕೆ ಪತ್ರ ಸಲ್ಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೇಳಿದ್ದರಿಂದ ಸೆ.22ರಂದು ತಹಸೀಲ್ದಾರರು ತಮ್ಮ ಕಚೇರಿಯ ಶಿರಸ್ತೇದಾರ ಮತ್ತು ವಿಷಯ ನಿರ್ವಹಕರನ್ನು ವಿವರಣೆ ಕೇಳಿದ್ದರು. ಈ ವೇಳೆ ಸಿಬ್ಬಂದಿ ಬ್ಯಾಂಕ್‌ಗೆ ತೆರಳಿ ಖಾತೆಯ ಸ್ಟೇಟಮೆಂಟ್ ಪಡೆಯಲು ಹೋದ ಸಂದರ್ಭದಲ್ಲಿ 2020ರ ಜೂನ್ 1ರಂದು ಖಾತೆಯಿಂದ ಹಣ ಮಹಾಲಕ್ಷ್ಮೀ ಎಂಟರ್ ಪ್ರೈಸೆಸ್ ಹೆಸರಿಗೆ ಹಣ ವರ್ಗಾವಣೆಯಾಗಿರುವುದು ಗಮನಕ್ಕೆ ಬಂದಿತ್ತು. ತಕ್ಷಣವೇ ಎಚ್ಚೆತ್ತ ತಹಸೀಲ್ದಾರ ನಿಂಗಪ್ಪ ಬಿರಾದಾರ ಅಂದೇ ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಲಕ್ಷ್ಮೀ ಮತ್ತು ರಾಜು ಕಟ್ಟಿಮನಿಯಿಂದ 25 ಲಕ್ಷ ರೂಪಾಯಿ ಸೇರಿದಂತೆ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕ್ ಅಧಿಕಾರಿ ವಿಜಯಕುಮಾರರಿಂದ 50 ಲಕ್ಷದ 15 ಸಾವಿರ ರೂಪಾಯಿ ಸೇರಿದಂತೆ ತಹಸೀಲ್ದಾರರ ನಕಲಿ ಸೀಲ್ ಮತ್ತು ಇತರೆ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.