ಜೈವಿಕ ಇಂಧನ ಪಾರ್ಕ್‌ಗೆ ಸಿಕ್ಕಿಲ್ಲ ಉದ್ಘಾಟನೆ ಭಾಗ್ಯ


Team Udayavani, Nov 26, 2019, 1:47 PM IST

yg-tdy-1

ಕಕ್ಕೇರಾ: ತಿಂಥಣಿ ಗ್ರಾಮದ ಬಳಿ ಇರುವ ರಾಜ್ಯದ ಎರಡನೇ ಜೈವಿಕ ಇಂಧನ ಪಾರ್ಕ್ ಗೆ ಇನ್ನೂ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.

10ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆದಂದು ಉದ್ಘಾಟನೆಯಾಗಲಿದೆ ಎಂದು ಸಂಬಂಧಿಸಿದ ಅಧಿಕಾರಿಗಳೇ ಹೇಳಿದ್ದರು. ಆದರೂ ಈಗ ನಾಲ್ಕು ತಿಂಗಳಾದರೂ ಇನ್ನೂ ಉದ್ಘಾಟನೆಯಾಗದೇ ದಿನ ದೂಡಲಾಗುತ್ತಿದೆ.

ತಿಂಥಣಿ ಗ್ರಾಮದ ಬಳಿ 2016-17ನೇ ಸಾಲಿನಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ಅನುದಾನದಲ್ಲಿ ಪಾರ್ಕ್‌ ನಿರ್ಮಿಸಲಾಗಿದೆ. ಬಹುತೇಕ ಕಟ್ಟಡ ಕಾಮಗಾರಿ ಪೂರ್ಣಗೊಂಡು ವರ್ಷಗಳೇ ಗತಿಸಿವೆ. ಈ ಬಗ್ಗೆ ಸಕ್ತ ಕಾಳಜಿ ಇಲ್ಲದಂತಾಗಿದೆ ಎಂಬ ಮಾತು ಕೇಳಿ ಬಂದಿದೆ. ಅಧಿಕಾರಿಗಳು ಜೈವಿಕ ಇಂಧನ ಪಾರ್ಕ್‌ ಕಚೇರಿಯಲ್ಲಿಯೇ ಉಳಿದುಕೊಂಡು ಅಭಿವೃದ್ಧಿಗೊಳಿಸಲು ಹಾಗೂ ವಿವಿಧ ಜಾತಿ ಮರಗಳನ್ನು ನಾಶವಾಗದಂತೆ ಪಾಲನೆ-ಪೋಷಣೆ ಮಾಡಿಕೊಂಡು ಹೋಗಬೇಕು. ಇಲ್ಲಿ ಖಾಯಂ ಅಧಿಕಾರಿಗಳೇ ಇಲ್ಲ. ಶಹಾಪುರ ಭೀಮರಾಯನ ಗುಡಿ ಪ್ರಧಾನ ಅನ್ವೇಷಕರೇ ಇದರ ಉಸ್ತುವಾರಿ ವಹಿಸಿಕೊಂಡು ಹೋಗುತ್ತಿದ್ದಾರೆ. ಈ ಭಾಗದ ರಾಯಚೂರು ಮತ್ತು ಯಾದಗಿರಿ ಜಿಲ್ಲಾ ಪ್ರದೇಶವನ್ನೊಳಗೊಂಡ ರೈತರಿಗೆ ಜೈವಿಕ ಇಂಧನದ ಬಗ್ಗೆ ತರಬೇತಿ ನೀಡಿ ಪ್ರೋತ್ಸಾಯಿಸಲು ಉಪಯುಕ್ತವಾಗಲು ಕಚೇರಿ ಸ್ಥಾಪಿಸಲಾಗಿದೆ. ಅದು ಈಗ ಇದ್ದೂ ಇಲ್ಲದಂತಾಗಿದೆ.

ಕಚೇರಿಯಲ್ಲಿ ಜೈವಿಕ ಸಸ್ಯಗಳ ಬಗ್ಗೆ ರೈತರಿಗೆ ತರಬೇತಿ ನೀಡಲು ದೊಡ್ಡ ಹಾಲ್‌ ಕೂಡ ಇದೆ. ಇಲ್ಲಿಯೇ ಕಾರ್ಯಕ್ರಮ ನಡೆಸಿ ಪ್ರತಿಯೊಬ್ಬ ರೈತರಿಗೆ ತರಬೇತಿ ನೀಡುವುದರ ಜತೆಗೆ ಪ್ರೋತ್ಸಾಯಿಸಿ ಬಂಜರು ಭೂಮಿಯಲ್ಲಿ ಜೈವಿಕ ಸಸಿ ನೆಡುವಂತೆ ಪ್ರೇರಿಪಿಸುವುದಾಗಿದೆ.

ಆದರೆ ಇನ್ನೂ ಉದ್ಘಾಟನೆ ಇಲ್ಲದೆ ಈ ಒಂದು ಕಚೇರಿ ಯಾರಿಗೂ ಅಷ್ಟೊಂದು ಉಪಯುಕ್ತವಾಗಿಲ್ಲದಿರುವುದು ಬೇಸರ ತರಿಸಿದೆ. ಸುತ್ತಲಿನ ಶಾಲಾ ವಿದ್ಯಾರ್ಥಿಗಳಿಗೂ ಜೈವಿಕ್‌ ಇಂಧನ ಹಾಗೂ ಸಸ್ಯಗಳ ಕುರಿತು ಅರಿವು ಮೂಡಿಸಬೇಕು. ಜೈವಿಕ್‌ ಇಂಧನ ಪಾರ್ಕ್‌ಗೆ ಭೇಟಿ ನೀಡಿದಾಗ ಆಡಳಿತಾತ್ಮಕ ಅಧಿಕಾರಿಗಳು ಶಾಲಾ ಮಕ್ಕಳಿಗೆ ಸಂಪೂರ್ಣ ಮಾಹಿತಿ ನೀಡಬೇಕು. ಆದರೆ ಅಧಿಕಾರಿಗಳು ತಮಗೆ ತಿಳಿದಾಗ ಕಚೇರಿ ಬರುವುದರಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಸಿಗುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗುತ್ತಿದೆ.

ಪರಿಸರ ಸ್ನೇಹಿ ಜೈವಿಕ ಇಂಧನ ಪಾರ್ಕ್‌ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸಿದ್ಧ ಗೊಂಡಿರುವ ಆಡಳಿತ ಕಚೇರಿಯನ್ನು ಆದಷ್ಟು ಬೇಗ ಉದ್ಘಾಟಿಸಿ ಈ ಭಾಗದ ರೈತರಿಗೆ ತರಬೇತಿ ಸಿಗಬೇಕು. ಹಾಗೇ ಅಧಿಕಾರಿಗಳಿಂದ ಅಗತ್ಯ ಮಾಹಿತಿ ದೊರಕುವಂತಾಗಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

 

-ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.