ಕಲ್ಯಾಣ ಭಾಗಕ್ಕೆ ಪ್ರಾತಿನಿಧ್ಯ ನೀಡದ ಬಿಜೆಪಿ: ಈಶ್ವರ ಖಂಡ್ರೆ

ಈ ಬಾರಿಯೂ ಸಚಿವ ಸಂಪುಟದಲ್ಲಿ ಕಲ್ಯಾಣ ಭಾಗಕ್ಕೆ ಮತ್ತೆ ಅನ್ಯಾಯವೆಸಗಿದೆ.

Team Udayavani, Aug 5, 2021, 6:24 PM IST

ಕಲ್ಯಾಣ ಭಾಗಕ್ಕೆ ಪ್ರಾತಿನಿಧ್ಯ ನೀಡದ ಬಿಜೆಪಿ: ಈಶ್ವರ ಖಂಡ್ರೆ

ಶಹಾಪುರ: ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿ ಬಿಟ್ಟರೆ ಈ ಪ್ರದೇಶದ ಜನರ ಕಲ್ಯಾಣ ಆಗುವುದಿಲ್ಲ. ಆ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಆಗಬೇಕು. ಆದರೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲಿಲ್ಲ. ಕಲ್ಯಾಣ ಭಾಗಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ಮುಂದೆ ಬಿಜೆಪಿ ಇದಕ್ಕೆ ತಕ್ಕ ಬೆಲೆ ಕಟ್ಟಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ದೋರನಹಳ್ಳಿ ಗ್ರಾಮದ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ದುರಾಡಳಿತ ನಡೆಯುತ್ತಿದೆ. ಅದು ಸಮರ್ಥವಾಗಿ ಸರ್ಕಾರ ನಡೆಸುವ ಸ್ಥಿತಿಯಲ್ಲಿಲ್ಲ. ಈ ಬಾರಿಯೂ ಸಚಿವ ಸಂಪುಟದಲ್ಲಿ ಕಲ್ಯಾಣ ಭಾಗಕ್ಕೆ ಮತ್ತೆ ಅನ್ಯಾಯವೆಸಗಿದೆ. ಇದರಿಂದ ಕಲ್ಯಾಣ ಭಾಗದ ಅಭಿವೃದ್ಧಿಗೆ ಹಿನ್ನಡೆ ಆಗಲಿದೆ ಎಂದರು.

ಬಿಜೆಪಿಯಲ್ಲಿ ನಾಲ್ಕು ಹೈಕಮಾಂಡ್‌ಗಳಿವೆ: ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರೆ ಒಂದೇ ಹೈ ಕಮಾಂಡ್‌ ಆಗಿರುತ್ತಿತ್ತು. ಆದರೆ ಅದಕ್ಕೆ ಬರೋಬ್ಬರಿ 4 ಹೈಕಮಾಂಡ್‌ಗಳಿವೆ. ದೆಹಲಿ ಹೈ ಕಮಾಂಡ್‌, ಕಾವೇರಿ ಹೈ ಕಮಾಂಡ್‌, ಆರ್‌ಎಸ್‌ಎಸ್‌ ಹೈ ಕಮಾಂಡ್‌, ಬಾಂಬೆ ಟೀಮ್‌ ಹೈ ಕಮಾಂಡ್‌. ಹೀಗಾಗಿ ಅಲ್ಲಿ ಅಭಿವೃದ್ಧಿಗಿಂತಲೂ ಅಧಿಕಾರ, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.

ರೈತನ ಮೇಲೆ ಕೇಸ್‌ಗೆ ಖಂಡನೆ: ತಾಲೂಕಿನ ಕೊಳ್ಳುರು (ಎಂ) ಗ್ರಾಮಕ್ಕೆ ಜು. 24ರಂದು ಸಚಿವ ಆರ್‌. ಶಂಕರ ಭೇಟಿ ವೇಳೆ ರೈತರಿಗೆ ಕಳೆದ ಬಾರಿಯ ಪರಿಹಾರವೇ ನೀಡಿರುವುದಿಲ್ಲ. ಈ ಬಾರಿ ಪರಿಹಾರ ಯಾವಾಗ ರೈತರ ಕೈಸೇರಬೇಕೆಂದು ನೊಂದ ರೈತ ಬಸ್ಸಣ್ಣ ಭಂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆ ರೈತನ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಇದು ಬಿಜೆಪಿ ದಬ್ಟಾಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಈ ಕುರಿತು ಜಿಲ್ಲಾಡಳಿತ ಸಮಾಲೋಚಿಸಿ ರೈತನ ಮೇಲೆ ದಾಖಲಾದ ಪ್ರಕರಣ ಇತ್ಯರ್ಥ ಪಡಿಸಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್‌, ಮಾಜಿ ಎಂಲ್ಸಿ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರ್‌, ಮಾಣಿಕರೆಡ್ಡಿ ಕುರಕುಂದಿ, ಡಾ| ಭೀಮಣ್ಣ ಮೇಟಿ, ಮಂಜುಳಾ ಗೂಳಿ, ಮಾಜಿ ಕಾಡಾ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ, ಅವಿನಾಶ ಜಗನ್ನಾಥ, ಸುರೇಶ ಸಜ್ಜನ್‌, ಗಣಪತಿರಾವ ಜೋಳದ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.