ಚಿಂಚನಸೂರ ಹೊಸ ರಾಜಕೀಯ ಇನ್ನಿಂಗ್ಸ್‌


Team Udayavani, Jul 31, 2022, 2:55 PM IST

10-BJp

ಯಾದಗಿರಿ: ಗಿರಿಜಿಲ್ಲೆಯ ಪ್ರಭಾವಿ ರಾಜಕಾರಣಿ, ಹಿಂದುಳಿದ ವರ್ಗಗಳ ನಾಯಕ, ಮಾಜಿ ಸಚಿವ ಬಾಬುರಾವ್‌ ಚಿಂಚನಸೂರ ಅವರಿಗೆ ಬಿಜೆಪಿ ಹೈಕಮಾಂಡ್‌ ವಿಧಾನ ಪರಿಷತ್‌ ಟಿಕೆಟ್‌ ಘೋಷಿಸುವ ಮೂಲಕ ಹೊಸ ರಾಜಕೀಯ ಇನ್ನಿಂಗ್ಸ್‌ಗೆ ಹಾದಿ ಸುಗಮಗೊಳಿಸಿದೆ.

ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರುವ ವೇಳೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಸ್ಥಾನ ಚಿಂಚನಸೂರ ಪಾಲಾಗಲಿದೆ. ಈ ಮೂಲಕ ಬಿಜೆಪಿ ನಾಯಕರು ಅಹಿಂದ ಮತ ಸೆಳೆಯಲು ತಯಾರಿ ನಡೆಸಿದಂತಿದೆ. ರಾಜ್ಯದಲ್ಲಿ ಹಿಂದುಳಿದ ಜಾತಿಗಳ ಪೈಕಿ ಕೋಲಿ-ಗಂಗಾಮತ ಸಮಾಜ ಅತ್ಯಂತ ಪ್ರಬಲ ಸಮುದಾಯವಾಗಿದೆ. ಈ ಸಮಾಜದ ಮುಖಂಡರೂ ಆದ ಚಿಂಚನಸೂರ, ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ನಾಯಕರೂ ಹೌದು. ವಿಧಾನ ಪರಿಷತ್‌ ಚುನಾವಣೆಯಲ್ಲಿ ತಮ್ಮವರಿಂದಲೇ ಸೋಲಾಗಿದೆ ಎಂದು ಅಸಮಾಧಾನಗೊಂಡು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದವರು.

ಇದನ್ನೂ ಓದಿ: ರಣಬೀರ್ ಕಪೂರ್ ‘ಶಂಶೇರಾ’ ಕಲೆಕ್ಷನ್ ಮೀರಿದ ‘ವಿಕ್ರಾಂತ್ ರೋಣ’

ಮೊದಲಿಗರು: ಮೇಲ್ಮನೆ ಚುನಾವಣೆಯಲ್ಲಿ ಸೋಲನುಭವಿಸಿದ ಅಸಮಾಧಾನದಲ್ಲಿದ್ದ ಚಿಂಚನಸೂರ ಆಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ತಮಗೆ ಉತ್ತಮ ಹುದ್ದೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಹಿರಿಯ ಮಾಜಿ ಸಚಿವನಾಗಿದ್ದ ಕಾರಣ ಹೈಕಮಾಂಡ್‌ ಈ ಬಗ್ಗೆ ಪರಿಗಣಿಸಬಹುದು ಎಂಬ ಲೆಕ್ಕಾಚಾರ ಅವರದ್ದಾಗಿತ್ತು. ಆದರೆ ಪಕ್ಷ ಡಾ|ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್‌ ಖರ್ಗೆಗೆ ಸಚಿವ ಸ್ಥಾನ ನೀಡಿ ಮಹತ್ವದ ಖಾತೆ ನೀಡಿದ್ದು ಅವರ ಕಣ್ಣು ಕೆಂಪಗೆ ಮಾಡಿತು. ಇದರಿಂದ ಮತ್ತಷ್ಟು ಕುಪಿತಗೊಂಡ ಚಿಂಚನಸೂರ ಲೋಕಸಭೆ ಚುನಾವಣೆ ವೇಳೆ ಡಾ|ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಂಡಾಯ ಸಾರಿ ಅವರ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅವರಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಚುಕ್ಕಾಣಿ ನೀಡಿ ಮತ್ತೂಮ್ಮೆ ಮುಖ್ಯವಾಹಿನಿಗೆ ತಂದು ನಿಲ್ಲಿಸಿತ್ತು. ಆದರೆ ಕಳೆದ ಹಲವು ದಿನಗಳಿಂದ ಚಿಂಚನಸೂರ ಮತ್ತು ಮಾಜಿ ಸಚಿವ ಡಾ|ಮಾಲಕರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಲಿದ್ದಾರೆ ಎನ್ನುವ ವದಂತಿ ಹರಿದಾಡುತ್ತಿತ್ತು. ಈಗ ಬಿಜೆಪಿ ಹೈಕಮಾಂಡ್‌ ಚಿಂಚನಸೂರ ಅವರಿಗೆ ವಿಧಾನ ಪರಿಷತ್‌ ಟಿಕೆಟ್‌ ನೀಡುವ ಮೂಲಕ ಅವರನ್ನು ಪಕ್ಷದಲ್ಲಿ ಗಟ್ಟಿಯಾಗಿ ಉಳಿಯುವಂತೆ ಮಾಡಿದೆ.

ಮಹೇಶ ಕಲಾಲ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.