Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

ಜಿಲ್ಲಾಧಿಕಾರಿ, ಎಸ್ ಪಿ ಮುಂದೆ ಆಕ್ರೋಶದ ಮಾತಾಡಿದ ಜೆಡಿಎಸ್ ಶಾಸಕ

Team Udayavani, Jul 4, 2024, 7:04 PM IST

1-asdsad

ಯಾದಗಿರಿ: ಗುರುಮಠಕಲ್ ತಾಲೂಕಿನಲ್ಲಿ ಪೊಲೀಸರಿಂದ ನಡೆಯುವ ಭ್ರಷ್ಟಾಚಾರದಿಂದ ನಿಜಕ್ಕೂ ಬೇಸರಗೊಂಡಿದ್ದೇನೆ. ತಮ್ಮ ವೈಯಕ್ತಿಕ ಕೆಲಸ ಹಾಗೂ ಅಕ್ರಮ ದಂಧೆಗೆ ಶಾಮೀಲಾಗಿರುವುದು ನೋವು ತರಿಸುತ್ತದೆ. ಸ್ವತಃ ಶಾಸಕನಾಗಿ ನಾನೇ ಕರೆ ಮಾಡಿದರೂ ತಾಲೂಕಿನ ಪೊಲೀಸರು ಸರಿಯಾದ ಉತ್ತರ ನೀಡುವುದಿಲ್ಲ, ಪೊಲೀಸರ ನಡೆಯಿಂದಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಬೇಸರ ವ್ಯಕ್ತಪಡಿಸಿದರು.

ಗುರುಮಠಕಲ್ ನಗರದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಹಾಗೂ ಎಸ್ಪಿ ಸಂಗೀತಾ ಜಿ. ಅವರ ಮುಂದೆ ತಾಲೂಕಿನ ಪೊಲೀಸರ ಬಗ್ಗೆ ಆರೋಪಿಸಿ, ನೋವಿನ ಮಾತುಗಳಾಡಿದ ಅವರು, ತಾಲೂಕಿನ ತುಂಬೆಲ್ಲಾ ಪೊಲೀಸರು ಕಾನೂನು ಪ್ರಕಾರ ಕರ್ತವ್ಯ ನಿರ್ವಹಿಸಬೇಕೆ ಹೊರತು, ಕಾನೂನು ಬಾಹೀರಕ್ಕೆ ಎಂದಿಗೂ ಕುಮ್ಮಕ್ಕು ನೀಡಬಾರದು. ಒಬ್ಬ ಶಾಸಕನ ಕಣ್ಣು ತಪ್ಪಿಸಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದರೆ, ರಕ್ಷಣೆ ಮಾಡುವ ಪೊಲೀಸರು ಕಣ್ಣು ಮುಚ್ಚಿಕೊಂಡಿದ್ದಾರಾ ಎಂದು ಕೋಪಗೊಂಡರು.

ಬಡವರು ಪೊಲೀಸ್ ಠಾಣೆಗೆ ಹೋದರೆ ಸರಿಯಾದ ಸ್ಪಂದನೆ ನೀಡುವುದಿಲ್ಲ ಎಂದು ಅನೇಕರು ದೂರಿದ್ದಾರೆ. ಠಾಣೆಯಲ್ಲಿ ನ್ಯಾಯ ಸಿಗದೆ ಜನರು ಯಾರ ಹತ್ತಿರ ಕಾನೂನು ಪರಿಹಾರಕ್ಕೆ ಹೋಗಬೇಕು ನೀವೇ ಹೇಳಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಜಿ. ಅವರಿಗೆ ಶಾಸಕ ಶರಣಗೌಡ ಕಂದಕೂರು ಪ್ರಶ್ನೆ ಮಾಡಿದರು.

ಪೊಲೀಸರ ಮೇಲೆ ಮೇಲಾಧಿಕಾರಿಗಳು ದಯವಿಟ್ಟು ಹಿಡಿತ ಸಾಧಿಸಿ, ಕ್ರಮ ವಹಿಸುವಂತೆ ಈ ಕಾರ್ಯಕ್ರಮದ ಮೂಲಕ, ತಾಲೂಕಿನ ನೊಂದ ಜನರ ಪರವಾಗಿ ಜಿಲ್ಲಾಡಳಿತಕ್ಕೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಇಟ್ಟಿದ್ದೇನೆ, ಸರಿ ಮಾಡುವುದು ನಿಮ್ಮ ಮೇಲಿದೆ, ಇಲ್ಲವಾದಲ್ಲಿ ಯಾನಾಗುಂದಿ ಮಾತಾ ಮಾಣಿಕೇಶ್ವರಿ ಗದ್ದುಗೆಗೆ ರಾಜೀನಾಮೆ ಪತ್ರ ನೀಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.