ಗುರುಮಠಕಲ್‌ ಪುರಸಭೆ ಗದ್ದುಗೆ ಯಾರಿಗೆ?


Team Udayavani, Nov 2, 2020, 4:49 PM IST

yg-tdy-2

ಯಾದಗಿರಿ: ಕಾಂಗ್ರೆಸ್‌ ಭದ್ರಕೋಟೆಯನ್ನುಛಿದ್ರಗೊಳಿಸಿದ ಗುರುಮಠಕಲ್‌ ಮತಕ್ಷೇತ್ರವನ್ನು ತನ್ನ ತೆಕ್ಕೆಗೆ ಪಡೆದಿರುವ ಜೆಡಿಎಸ್‌ಗೆ ಗುರುಮಠಕಲ್‌ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯೂವಶವಾದಿತೇ?. ಇದೀಗ ಜೆಡಿಎಸ್‌ ಮತ್ತು ಕಾಂಗ್ರೆಸ್‌ಗೆ ಗದ್ದುಗೆ ಹಿಡಿಯುವುದು ಪ್ರತಿಷ್ಠೆಯ ಮಾತಾಗಿದೆ.

ಗುರುಮಠಕಲ್‌ ಪುರಸಭೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ನ.2ರಂದು ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್‌ನ ಮೂವರು ಸದಸ್ಯರು ಕೆಲವು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೇಅಜ್ಞಾತವಾಸದಲ್ಲಿದ್ದು, ರಾಜಕೀಯವಾಗಿ ಸಾಕಷ್ಟು ಸಂಚಲನ ಮೂಡಿಸಿದೆ.

23 ಸದಸ್ಯರ ಬಲ ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್‌ 12 ಸದಸ್ಯರ ಬಲ ಹೊಂದಿದ್ದರೆ, ಜೆಡಿಎಸ್‌ 8, ಬಿಜೆಪಿ 2 ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ.ಪ್ರಸ್ತುತ ದಳಪತಿಗಳ ಬಳಿ 8 ಸದಸ್ಯರು ಮತ್ತು ಶಾಸಕರ ಮತ ಸೇರಿ 9ಕ್ಕೆ ಏರಿಕೆಯಾಗಲಿದ್ದು, ಪ್ರಮುಖವಾಗಿ ಕಾಂಗ್ರೆಸ್‌ 12 ಸದಸ್ಯರಲ್ಲಿ ಅಶೋಕ ಕಲಾಲ್‌, ಆಶನ್ನ ಬುದ್ಧ ಹಾಗೂ ಪವಿತ್ರ ಮನ್ನೆ ಅಜ್ಞಾತ ಸ್ಥಳಕ್ಕೆ ತೆರಳಿರುವುದು ಕಾಂಗ್ರೆಸ್‌ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಈಗಾಗಲೇ ಕಾಂಗ್ರೆಸ್‌ ಎಲ್ಲಾ ಸದಸ್ಯರಿಗೆ ವಿಪ್‌ ಜಾರಿಗೊಳಿಸಿ ಪಕ್ಷದ ಅಧಿಕೃತ ಅಭ್ಯರ್ಥಿ ಪರ ಮತ ಚಲಾಯಿಸದಿದ್ದರೆ ಸೂಕ್ತ ಕ್ರಮದ ಎಚ್ಚರಿಕೆಯೂ ನೀಡಿದೆ. ರಾಜಕೀಯದಲ್ಲಿ ಯಾವಾಗ ಏನಾಗುತ್ತದೆ ಎನ್ನುವುದು ಹೇಳಲಾಗಲ್ಲ ಎನ್ನುವಂತೆ ಒಂದು ವೇಳೆ ಮೂವರು ಸದಸ್ಯರು ಜೆಡಿಎಸ್‌ಗೆ ಬೆಂಬಲಿಸಿದರೆ ಅಧ್ಯಕ್ಷ ಗಾದಿಗೆ ಬೇಕಿರುವ 12ರ ಬಲ ಸಿಕ್ಕು ಗದ್ದುಗೆ ತನ್ನದಾಗಿಸುವ ತಂತ್ರಗಾರಿಕೆ ಹೂಡಲಾಗಿದೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಸದ್ದು ಮಾಡಿದೆ.

ಪಕ್ಷೇತರ ಒಬ್ಬ ಸದಸ್ಯರು ಈಗಾಗಲೇ ತೆನೆಹೊತ್ತ ಮಹಿಳೆಯತ್ತ ವಾಲಿರುವ ಮಾಹಿತಿ ಲಭ್ಯವಾಗಿದ್ದು,ಯಾದಗಿರಿ ನಗರಸಭೆಯಲ್ಲಿ ಬಿಜೆಪಿಗೆ ಜೆಡಿಎಸ್‌ನ ಇಬ್ಬರು ಸದಸ್ಯರು ಬಾಹ್ಯ ಬೆಂಬಲ ನೀಡಿದಂತೆ ಗುರುಮಠಕಲ್‌ನಲ್ಲಿ ಬಿಜೆಪಿಯ ಇಬ್ಬರು ಸದಸ್ಯರು ಜೆಡಿಎಸ್‌ಗೆ ಬೆಂಬಲ ನೀಡಲಿದ್ದಾರೆ ಎನ್ನುವ ಅಂಶವೂ ತೀವ್ರ ಚರ್ಚೆಯಲ್ಲಿದೆ. ಹೀಗಾದಲ್ಲಿ ಜೆಡಿಎಸ್‌ ಅಧಿಕಾರಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕಾಂಗ್ರೆಸ್‌, ಜೆಡಿಎಸ್‌ ನಮ್ಮ ಸಿದ್ಧಾಂತದವಿರೋಧಿ  ಪಕ್ಷಗಳು ಹಾಗಾಗಿ ಗುರುಮಠಕಲ್‌ನಲ್ಲಿ ಪಕ್ಷದ ಇಬ್ಬರು ಸದಸ್ಯರು ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಯಾದಗಿರಿ ಜೆಡಿಎಸ್‌ನವರಿಗೆ ನಾವು ಬೆಂಬಲ ಕೇಳಿರಲಿಲ್ಲಹಾಗಾಗಿ ಗುರುಮಠಕಲ್‌ನಲ್ಲಿ ಜೆಡಿಎಸ್‌ಗೆ ಬಿಜೆಪಿಯ ಬೆಂಬಲ ನೀಡಲ್ಲ.  -ಡಾ.ಶರಣ ಭೂಪಾಲರೆಡ್ಡಿ ನಾಯ್ಕಲ್‌, ಬಿಜೆಪಿ ಜಿಲ್ಲಾಧ್ಯಕ್ಷರು, ಯಾದಗಿರಿ.

ಪಕ್ಷದ ಮೂವರು ಸದಸ್ಯರು ಸಂಪರ್ಕಕ್ಕೆ ಸಿಕ್ಕಿಲ್ಲ. ಈಗಾಗಲೇ ವಿಪ್‌ ಜಾರಿಗೊಳಿಸಲಾಗಿದೆ. ನಮ್ಮ ಅಧಿ ಕೃತ ಅಭ್ಯರ್ಥಿ ಮೈನೋದ್ದೀನ್‌ ಪರ ಮತ ಚಲಾಯಿಸಲು ಸೂಚಿಸಲಾಗಿದೆ. ಆದೇಶ ಉಲ್ಲಂಘಿಸಿ ವಿರೋಧ ಮತ ಚಲಾಯಿಸಿದಲ್ಲಿ ಅಥವಾ ದೂರ ಉಳಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. – ಮಹಿಪಾಲರೆಡ್ಡಿ ಹತ್ತಿಕುಣಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು.

 

-ಅನೀಲ ಬಸೂದೆ

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.