ಎಲ್ಲ ಭಾಷೆಗಳ ತವರೂರು ಜನಪದ ಸಾಹಿತ್ಯ

ಯುವ ಸಮೂಹ ಜನಪದ ಸಾಹಿತ್ಯಕ್ಕೆ ಉಳಿಸಿ ಬೆಳೆಸಲು ಮುಂದಾಗಲಿ: ರಾಜುಗೌಡ

Team Udayavani, Feb 14, 2020, 6:22 PM IST

14-February-27

ಹುಣಸಗಿ: ಜನಪದ ಸಾಹಿತ್ಯ ಎಲ್ಲ ಭಾಷೆಗಳ ತವರೂರು. ಜನಪದ ಸಾಹಿತ್ಯ ಈಗ ನಶಿಸುತ್ತಿರುವುದು ಕಳವಳಕಾರಿ ವಿಷಯ ಎಂದು ಶಾಸಕ ರಾಜೂಗೌಡ ನಾಯಕ ಹೇಳಿದರು.

ತಾಲೂಕಿನ ಮುದನೂರ ದೇವರ ದಾಸಿಮಯ್ಯ ಶಾಲಾ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 2019-20ರ ಜಾನಪದ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಎಲ್ಲ ಹಳ್ಳಿಗಳಲ್ಲಿ ಜನಪದ ಸಾಹಿತ್ಯ ಕಣ್ಮರೆಯಾಗುತ್ತಿದೆ. ಜನಪದ ಸಾಹಿತ್ಯ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಜನಪದ ಸಾಹಿತ್ಯ ನಮ್ಮ ಜೀವನದ ಹಾಸು ಹೊಕ್ಕಾಗಿದೆ. ಆದರೆ ನಾವೆಲ್ಲರೂ ಜನಪದ ಸಾಹಿತ್ಯ ಮರೆಯುತ್ತಿದ್ದೇವೆ. ಬರಿ ಸರಕಾರದ ಒಂದು ಇಲಾಖೆಯಿಂದ ಜನಪದ ಸಾಹಿತ್ಯ ಉಳಿಸಲು ಸಾಧ್ಯವಿಲ್ಲ. ಜನಪದ ಸಾಹಿತ್ಯ ಉಳಿಸಿ ಬೆಳೆಸುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕಿದೆ ಎಂದು ಹೇಳಿದರು.

ಮುದನೂರನಲ್ಲಿ 19 ಕೋಟಿ ರೂ. ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಮುಗಿದಿದೆ. ಅದೇ ರೀತಿ ಕಂಠಿ ದೇವಸ್ಥಾನದಲ್ಲಿ ಯಾತ್ರಾ ನಿವಾಸ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ ಮಂಜೂರಾಗಿದೆ. ಎರಡು ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಮಾತನಾಡಿ, ಜಾತ್ರೆ ಇಲ್ಲದ ದಿನದಲ್ಲಿ ಜನರನ್ನು ಸೇರಿಸಿ ಜಾತ್ರೆ ಮಾಡುವುದೇ ಜಾನಪದ ಜಾತ್ರೆ. ಈಗ ಸ್ವಹಿತ ಹಾಗೂ ಹಣದ ವ್ಯಾಮೋಹಕ್ಕೆ ಒಳಗಾಗಿ ಎಲ್ಲವನ್ನು ಮರೆಯುತ್ತಿದ್ದೇವೆ. ಯುವ ಸಮೂಹ ಜನಪದ ಸಾಹಿತ್ಯಕ್ಕೆ ಒತ್ತು ನೀಡಿ ಉಳಿಸಿ ಬೆಳೆಸಬೇಕು ಎಂದು ಹೇಳಿದರು.

ಇಲಾಖೆಯಿಂದ ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು, ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹದ ಬಗ್ಗೆ ವಿವರಿಸಿದರು. ಅರಕೇರಾ(ಜೆ)ಜಿಪಂ ಸದಸ್ಯ ಬಸನಗೌಡ ಯಡಿಯಾಪುರ ಮಾತನಾಡಿದರು. ಶ್ರೀ ಸಿದ್ದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹಾಗೂ ಸಣ್ಣಕೆಪ್ಪ ಮುತ್ಯಾ ಬಂಡೆಪ್ಪನಹಳ್ಳಿ ಸಾನ್ನಿಧ್ಯ ವಹಿಸಿದ್ದರು.

ಜಾನಪದ, ದಾಸವಾಣಿ, ಸೋಬಾನೆ ಪದ, ಬೀಸುವ ಕಲ್ಲಿನ ಪದಗಳು, ಜಾನಪದ ಹಾಡು, ಗೀಗೀಪದ, ಭಾವಗೀತೆ, ಪಟ ಕುಣಿತ, ಕೊಂಬು ಕಹಳೆ, ಗಾರಡಿ ಗೊಂಬೆ, ಕರಗ ನೃತ್ಯ, ಹಗಲು ವೇಷ, ಕರಡಿ ಮಜಲು, ಬಂಜಾರ ನೃತ್ಯ, ಝಣಿ ಹಲಗೆ, ಡೊಳ್ಳು ಕುಣಿತ, ಜೋಗತಿ ನೃತ್ಯ, ಕೀಲು ಕುದುರೆ, ತತ್ವಪದಗಳು ಗಮನ ಸೆಳೆದವು. ಇದಕ್ಕೂ ಮೊದಲು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು ಮುದನೂರಿನ ಪ್ರಮುಖ ಬೀದಿಗಳಲ್ಲಿ ಪ್ರದರ್ಶನ ಮಾಡುತ್ತ ಮುಖ್ಯ ವೇದಿಕೆಗೆ ಆಗಮಿಸಿದವು.

ಸಿದ್ದಬಸಯ್ಯ ಗಜ್ಜಿನಮಠ, ಸಿದ್ರಾಮರಡ್ಡಿ ಯಡಹಳ್ಳಿ, ಭೀಮರಾಯ ಸಾಹು ಹೊಟ್ಟಿ, ಸಿದ್ರಾಮರೆಡ್ಡಿ ಚೌದ್ರಿ, ಸುಭಾಶ್ಚಂದ್ರರಡ್ಡಿ ಚೌದ್ರಿ, ಬಸವರಾಜಪ್ಪಗೌಡ ಮಾಲಿಪಾಟೀಲ, ಶಿವಪ್ಪಗೌಡ ಮಾಲಿಪಾಟೀಲ, ಶರಣಪ್ಪ ಸಾಹು, ಬಸವಂತಪ್ಪ ಹೊಸಮನಿ, ನಿಂಗಾರೆಡ್ಡಿ ಚೌದ್ರಿ, ಬಸಣ್ಣ ನಾಟೆಕಾರ, ಚಂದಪ್ಪಗೌಡ ಪಾಟೀಲ, ಬಸನಗೌಡ ಮಾಲಿಪಾಟೀಲ, ಪ್ರಭುಗೌಡ ಅರನಾಳ, ಮಡಿವಾಳಪ್ಪಗೌಡ ನಾಲವಾರ, ಚನ್ನಪ್ಪಗೌಡ ಬೆಕಿನಾಳ, ರಮೇಶ ಸಾಹು, ಬಸನಗೌಡ, ವಿಜಯರೆಡ್ಡಿ, ಮೇಲಪ್ಪ ಗುಳಗಿ, ಚಂದ್ರೇಖರ ಸುಬೇದಾರ ಇದ್ದರು.

ದೇವರ ದಾಸಿಮಯ್ಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಾಂತರೆಡ್ಡಿ ಚೌದ್ರಿ ಸ್ವಾಗತಿಸಿದರು. ಶಿಕ್ಷಕ ಸೇವು ಜಾಧವ ನಿರೂಪಿಸಿದರು. ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ ವಂದಿಸಿದರು.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.