ಪತ್ರಕರ್ತರಿಗೆ ವೃತ್ತಿ ಬದ್ದತೆ ಅಗತ್ಯ


Team Udayavani, May 11, 2022, 2:06 PM IST

13journalist

ಯಾದಗಿರಿ: ಪತ್ರಕರ್ತರು ವೃತ್ತಿಯಲ್ಲಿ ಬದ್ಧತೆ ಮೈಗೂಡಿಸಿಕೊಂಡಾಗ ಸಮಾಜದಲ್ಲಿ ವಿಭಿನ್ನವಾಗಿ ಗುರುತಿಸಿಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು.

ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಬೋಧಿಸಿ ಅವರು ಮಾತನಾಡಿದರು.

ವೃತ್ತಿ ರಂಗದಲ್ಲಿ ಪತ್ರಕರ್ತರ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಇರುತ್ತವೆ. ಆದರೆ ಇವುಗಳನ್ನು ಮರೆತುಕೊಂಡು ಎಲ್ಲರೂ ಒಂದಾಗಿ ಸಮಾಜದಲ್ಲಿ ನಡೆಯುವ ಅಂಕುಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡುತ್ತಾರೆ. ಅವರು ಮಾಡುವಂತಹ ಸಮಾಜಮುಖೀ ಕಾರ್ಯಗಳು ಮಾದರಿಯಾಗಿವೆ ಎಂದು ತಿಳಿಸಿದರು.

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಪತ್ರಕರ್ತರು ನಿಷ್ಠುರವಾಗಿ ವರದಿಗಳನ್ನು ಬರೆಯುವ ಮೂಲಕ ಸಮಾಜದಲ್ಲಿ ಕಣ್ಣು ತೆರೆಯಿಸುವಂತಹ ಕಾರ್ಯ ಮಾಡಬೇಕಿದೆ. ನಾವು ಎಡವಿದಾಗ ನನ್ನ ವಿರುದ್ಧ ಬರೆದರು ಕೂಡ ಇದರ ಬಗ್ಗೆ ನಾನು ಚಿಂತನೆ ನಡೆಸುವುದಿಲ್ಲ. ನಿಮ್ಮ ಸೇವೆ ಅಮೋಘವಾಗಿದೆ ಎಂದು ಬಣ್ಣಿಸಿದರು.

ಕೊರೊನಾ ಬಂದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದೀರಿ. ಇದಲ್ಲದೇ ನೆರೆ ಹಾವಳಿ ಬಂದಾಗ ಕೂಡ ನೀವು ನೀಡಿರುವ ಸೇವೆ ಮರೆಯಲು ಸಾಧ್ಯವಿಲ್ಲ. ಹೀಗಾಗಿಯೇ ಮಾಧ್ಯಮಗಳ ಮೇಲೆ ಜನರಿಗೆ ಅಪಾರವಾದ ಗೌರವವಿದೆ ಎಂದು ತಿಳಿಸಿದರು.

ಎಸ್ಪಿ ಸಿ.ಬಿ. ವೇದಮೂರ್ತಿ ಮಾತನಾಡಿ, ಜೀವದ ಕಡೆಗೆ ಗಮನ ಹರಿಸಬೇಕು. ಜೀವ ಒತ್ತೆಯಿಟ್ಟು ಜನರಿಗೆ ಸುದ್ದಿ ನೀಡುವಂತಹ ಕೆಲಸ ಯಾವುದೇ ಕಾರಣಕ್ಕೂ ಪತ್ರಕರ್ತರು ಮಾಡಬಾರದು. ಬಹಳ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಮುಂದಾಗುವುದು ಅಗತ್ಯವಿದೆ ಎಂದರು.

ಹಿರಿಯ ಪತ್ರಕರ್ತ ದೇವಯ್ಯ ಗುತ್ತೇದಾರ ಮಾತನಾಡಿದರು. ರಾಜ್ಯ ಪರಿಷತ್‌ ಸದಸ್ಯ ರಾಘವೇಂದ್ರ ಕಾಮನಟಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್‌ ಮಾತನಾಡಿ, ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಸುವ ಚಿಂತನೆ ನಡೆದಿದೆ. ಜಿಲ್ಲೆಯಾದಗಿನಿಂದ ಸಮ್ಮೇಳನ ಆಗಿಲ್ಲ. ಈ ಬಾರಿ ಆಯೋಜಿಸುವ ಚಿಂತನೆಯಿದೆ ಎಂದು ಹೇಳಿದರು.

ಪತ್ರಕರ್ತರ ಸಿದ್ದಪ್ಪ ಲಿಂಗೇರಿ ಆಶಯ ನುಡಿಯಾಡಿದರು. ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ., ನಗರಸಭೆ ಮಾಜಿ ಅಧ್ಯಕ್ಷ ವಿಲಾಸ್‌ ಪಾಟೀಲ್‌, ಸದಸ್ಯ ಚನ್ನಕೇಶವಗೌಡ ಬಾಣತಿಹಾಳ, ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ ವಿ.ಸಿ., ಮಲ್ಲಣಗೌಡ ಹತ್ತಿಕುಣಿ, ದೇವಿಂದ್ರಪ್ಪ ಆವಂಟಿ ಸೇರಿದಂತೆ ಇನ್ನಿತರರಿದ್ದರು. ಪತ್ರಕರ್ತ ಲಕ್ಷ್ಮೀಕಾಂತ ಕುಲಕರ್ಣಿ ಸ್ವಾಗತಿಸಿದರು. ಅಮರಯ್ಯಸ್ವಾಮಿ ಜಾಲಿಬೆಂಚಿ ನಿರೂಪಿಸಿದರು. ಪತ್ರಕರ್ತ ಮಹೇಶ ಕಲಾಲ ವಂದಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.