Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ
Team Udayavani, Oct 3, 2024, 3:11 PM IST
ಯಾದಗಿರಿ: ನಗರ ಸಭೆಯ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.5 ರ ಸದಸ್ಯೆ ಕು.ಲಲಿತಾ ಅನುಪುರ ಅವರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ ನಂ. 16 ರ ಸದಸ್ಯೆ ರುಕೀಯ ಬೇಗಂ ಅವರು ಆಯ್ಕೆಯಾಗಿದ್ದಾರೆ.
ಆ.3ರ ಗುರುವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಸದಸ್ಯರ ಸಂಖ್ಯಾ ಬಲವನ್ನು ಪ್ರದರ್ಶಿಸಿದ್ದು, ಯಾದಗಿರಿ ಜಿಲ್ಲೆಯ ಲಲಿತಾ ಅಕ್ಕ ಎಂದೇ ಖ್ಯಾತರಾಗಿರುವ ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಕು.ಲಲಿತಾ ಅನಪುರ ಅವರು ಸರ್ವ ಮತಗಳಿಂದ ಅಧ್ಯಕ್ಷ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದಾರೆ.
ಉಪಾಧ್ಯಕ್ಷೆ ಸ್ಥಾನಕ್ಕೆ ನಗರದ ವಾರ್ಡ್ ನಂ.16 ಸದಸ್ಯೆ ರಕೀಯ ಬೇಗಂ ಅವರು ಬಿಜೆಪಿ ಸದಸ್ಯರ ಮತಗಳಿಂದ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 4 ಜನ ಉಮೇದುಗಾರಿಕೆ ನಡುವೆ ಬಿಜೆಪಿಯ ಇಬ್ಬರು ಸದಸ್ಯರು ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದು ಆಡಳಿತ ಪಕ್ಷ ಕಾಂಗ್ರೆಸ್ ಗೆ ತೀವ್ರ ಮುಜುಗರ ಉಂಟು ಮಾಡಿದೆ.
ಒಟ್ಟು ಹಾಜರಿದ್ದ 28 ಸ್ಥಾನಗಳ ಪೈಕಿ 19 ಜನ ಸದಸ್ಯರು ಬಿಜೆಪಿ ಪರವಾಗಿದ್ದು, ಅಧಿಕ ಮತಗಳಿಂದ ಬಿಜೆಪಿ ನಗರಸಭೆ ಗದ್ದುಗೆ ಏರಲು ಯಶಸ್ವಿಯಾಯಿತು.
ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ, ತಹಶಿಲ್ದಾರ್ ಸುರೇಶ ಅಂಕಲಗಿ, ನಗರಸಭೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಸುದ್ದಿಗೋಷ್ಢಿ ನಡೆಸಿ ಮಾಹಿತಿ ನೀಡಿದರು.
ಅಧ್ಯಕ್ಷ ಸ್ಥಾನಕ್ಕೆ ಜಯಮ್ಮ ಎಸ್.ಮಡ್ಡಿ ಹಾಗೂ ಲಲಿತಾ ಮೌಲಾಲಿ ಅನಪುರ ಅವರು ನಾಮಪತ್ರ ಸಲ್ಲಿಸಿದ್ದರು ಹಾಗೂ ಗೌಸಿಯಾ ಬೇಗಂ ಮತ್ತು ಅರಾಬಿಕ್ ರುಕೀಯಾ ಬೇಗಂ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುಗಾರಿಕೆಯಾಗಿದ್ದರು.
ಅಧ್ಯಕ್ಷ ಸ್ಥಾನಕ್ಕೆ ನಡೆದ ಮತ ಗಳಿಕೆಯಲ್ಲಿ ಲಲಿತಾ ಅನಪುರ ಅವರು 19 ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರುಕೀಯಾ ಬೇಗಂ ಅವರು 19 ಮತಗಳನ್ನು ಪಡೆದಿದ್ದಾರೆ ಎಂದು ಎಸಿ ಹಂಪಣ್ಣ ಸಜ್ಜನ್ ತಿಳಿಸಿದರು.
ಕ್ರಮಬದ್ಧವಾಗಿ ಮತ ಅಂಗೀಕಾರ ಪ್ರಕಾರ ಕೈ ಎತ್ತುವ ಮೂಲಕ ಚುನಾವಣಾ ಪ್ರಕ್ರಿಯೆ ನಡೆಯಿತು. ಯಾವುದೇ ಗೊಂದಲ ಹಾಗೂ ಗಲಾಟೆಯಿಲ್ಲದೆ ಚುನಾವಣಾ ಪ್ರಕ್ರಿಯೆ ಸಂಪನ್ನವಾಯಿತೆಂದು ಅವರು ಹೇಳಿದರು.
ಕಾಲಮಿತಿ ನಂತರ ಬಂದ, ವಿಳಂಬವಾದ ಕಾರಣ ಮೂರು ಜನ ಕಾಂಗ್ರೆಸ್ ಸದಸ್ಯರನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. 3 ನಿಮಿಷಗಳ ತಡವಾದ ಕಾರಣ ಅವರ ಇರುವಿಕೆ ನಗಣ್ಯ ಎಂದರು.
ಒಟ್ಟಾರೆ 31 ಚುನಾಯಿತ ಸದಸ್ಯರು ಹಾಗೂ ಲೋಕಸಭಾ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಒಳಗೊಂಡಿದ್ದರು. ಇಂದು (ಆ.3) ನಡೆದ ಚುನಾವಣೆಯಲ್ಲಿ ಒಟ್ಟು 6 ಜನ ಗೈರಾಗಿದ್ದು, 3 ಜನ ಕಾಂಗ್ರೆಸ್ ಹಾಗೂ ಜೆಡಿಎಸ್ ಒಬ್ಬ ಸದಸ್ಯರು ಹಾಗೂ ಎಂಪಿ ಕುಮಾರ ನಾಯಕ ಮತ್ತು ಯಾದಗಿರಿ ಶಾಸಕ ಚೆನ್ನಾರೆಡ್ಡಿ ತುನ್ನೂರ್ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ
Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ ಇದ್ದಾರೆ… ಸಚಿವ ಮಧು ಬಂಗಾರಪ್ಪ
Yadgiri: ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ… ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ
Yadagiri: ಸಿಡಿಲು ಬಡಿದು ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು!
Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್ ಕುಸಿದು ಬಿದ್ದು ಸಾ*ವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.