ಸರ್ಕಾರಿ ನೌಕರರು ಜನರ ಸಮಸ್ಯೆಗೆ ಸ್ಪಂದಿಸಲಿ


Team Udayavani, Jan 6, 2022, 5:10 PM IST

24govt-work

ಸುರಪುರ: ಸರಕಾರಿ ಸೇವೆಯಲ್ಲಿ ವರ್ಗಾವಣೆ, ನಿವೃತ್ತಿ ಕಡ್ಡಾಯ. ಇದರಿಂದ ವಿಚಲಿತರಾಗುವ ಅಗತ್ಯವಿಲ್ಲ. ಸೇವಾವಧಿಯಲ್ಲಿ ಪಡೆದುಕೊಂಡಿರುವ ಅನುಭವವನ್ನು ಇತರರಿಗೆ ಮಾರ್ಗದರ್ಶನ ಮಾಡುವ ಮೂಲಕ ನಿವೃತ್ತಿ ಜೀವನ ಸಾರ್ಥಕ ಮಾಡಿಕೊಳ್ಳಬೇಕೆಂದು ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ ಹೇಳಿದರು.

ತಹಶೀಲ್ದಾರ್‌ ಕಾರ್ಯಾಲಯದಲ್ಲಿ ನಿವೃತ್ತ ಗ್ರೇಡ್‌-2 ತಹಶೀಲ್ದಾರ್‌ ಸೋಫಿಯಾಸುಲ್ತಾನ ಅವರಿಗೆ ಕಂದಾಯ ಇಲಾಖೆ ಸಿಬ್ಬಂದಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರಕಾರಿ ಹುದ್ದೆಯಲ್ಲಿ ನಾವೆಷ್ಟು ದಿನ ಕೆಲಸ ಮಾಡಿದೆವು ಎನುವುದು ಮುಖ್ಯವಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸೇವೆ ನೀಡುವುದು ಮುಖ್ಯವಾಗುತ್ತದೆ. ಇದಕ್ಕೆ ಗ್ರೇಡ್‌-2 ತಹಶೀಲ್ದಾರ್‌ ಸೋಫಿಯಾಸುಲ್ತಾನ್‌ ಅವರು ನೀಡಿರುವ ಸೇವೆ ಉತ್ತಮ ನಿದರ್ಶನವಾಗಿದೆ ಎಂದರು.

ನನ್ನ ಅನುಪಸ್ಥಿತಿಯಲ್ಲಿ ಕಾರ್ಯಾಲಯದ ಉಸ್ತುವಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕೆಲಸ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡುತ್ತಿದ್ದರು. ಕೋವಿಡ್‌ ಮತ್ತು ಚುನಾವಣೆ ಸಂದರ್ಭದಲ್ಲಿ ಹಗಲು-ರಾತ್ರಿ ನಮ್ಮೊಂದಿಗಿದ್ದು ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಯಾರಿಗೂ ತೊಂದರೆ ಕೊಟ್ಟಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿದ್ದಾರೆ. ಮಾತೃ ಹೃದಯಿಯಾಗಿದ್ದರು. ನಾನು ಸೇರಿದಂತೆ ಸಿಬ್ಬಂದಿ ಅವರನ್ನು ಅಮ್ಮಾ ಎಂದೇ ಕರೆಯುತ್ತಿದ್ದರು. ಅವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕ ಸೇವೆ ನಮೆಗೆಲ್ಲ ಮಾದರಿಯಾಗಿದೆ ಎಂದು ಗುಣಗಾನ ಮಾಡಿದರು.

ಸನ್ಮಾನ ಸ್ವೀಕರಿಸಿದ ಮಾತನಾಡಿದ ನಿವೃತ್ತ ಗ್ರೇಡ್‌-2 ತಹಶೀಲ್ದಾರ್‌ ಸೋಫಿಯಾಸುಲ್ತಾನ್‌, ಇಲ್ಲಿನ ಸೇವೆ ಜೀವಮಾನದಲ್ಲಿ ಮರೆಯಲಾಗದು. ಇಲ್ಲಿಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ತೋರಿದ ಪ್ರೀತಿ, ವಿಶ್ವಾಸ, ಸಹಕಾರವೇ ನನಗೆ ಸುದೀರ್ಘ‌ ಸೇವೆ ನೀಡಲು ಸಾಧ್ಯವಾಯಿತು. ತಹಶೀಲ್ದಾರ್‌ರು ಮತ್ತು ಇಲಾಖೆ ಸಿಬ್ಬಂದಿ ಸಹಕಾರ ಎಂದು ಮರೆಯಲಾರೆ ಎಂದು ಭಾವುಕರಾದರು.

ಹುಣಸಗಿ ತಹಶೀಲ್ದಾರ್‌ ಅಶೋಕ ಸುರಪುರಕರ್‌ ಮಾತನಾಡಿದರು. ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ ವೇದಿಕೆಯಲ್ಲಿದ್ದರು. ಆಹಾರ ನಿರೀಕ್ಷಕ ಅಪ್ಪಯ್ಯ ಸ್ವಾಮಿ, ಶಿರಸ್ತೇದಾರ ರೇವಪ್ಪ ತೆಗ್ಗಿನ, ಬಿಸಿಎಂ ವಿಸ್ತೀರ್ಣಾಧಿಕಾರಿ ಬಸವರಾಜ, ರವಿ ನಾಯಕ, ಶಿವಲಿಂಗ ಚಲುವಾದಿ ಇತರರು ಅನಿಸಿಕೆ ಹಂಚಿಕೊಂಡರು. ಕಂದಾಯ ಇಲಾಖೆ ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.