ಮಹಾತ್ಮ ಗಾಂಧೀಜಿ ವೃತ್ತ ಧ್ವಂಸಗೊಳಿಸಿಲ್ಲ: ಜೇವರ್ಗಿ


Team Udayavani, Feb 23, 2022, 12:30 PM IST

15gandiji

ಸುರಪುರ: ಪಟ್ಟಣದ ಹೃದಯ ಭಾಗದಲಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವೃತ್ತವನ್ನು ನಗರಸಭೆ ಅಧ್ಯಕ್ಷ ಮತ್ತು ಅಧಿಕಾರಿಗಳು ಸೇರಿ ಧ್ವಂಸಗೊಳಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಜಾ ರಾಮಪ್ಪ ನಾಯಕ ಜೇಜಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ನಗರ ಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಅಪಮಾನಿಸಿಲ್ಲ. ಆ ಉದ್ದೇಶವು ನನಗಿಲ್ಲ. ಮಹಾತ್ಮ ಗಾಂಧೀಜಿ ಡಾ| ಅಂಬೇಡ್ಕರ್‌ ಸೇರಿದಂತೆ ರಾಷ್ಟ್ರ ಪುರಷರು, ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಗೌರವವಿದೆ. ಧ್ವಂಸ ಮಾಡಿದ್ದಾರೆ ಎಂಬ ಹೇಳಿಕೆ ನೋವುಂಟು ಮಾಡಿದೆ. ಧ್ವಂಸ ಮಾಡುವಷ್ಟು ಕೀಳು ಮಟ್ಟಕ್ಕೆ ಇಳಿದಿಲ್ಲ, ಪೊಲೀಸರ ಸಮ್ಮುಖದಲ್ಲಿ ಗೌರಯುತವಾಗಿ ತೆರವುಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

2016-17ನೇ ಸಾಲಿನ ಆಡಳಿತ ಮಂಡಳಿ ವೃತ್ತ ನವೀಕರಣಕ್ಕೆ ನಿರ್ಣಯ ಕೈಗೊಂಡಿದ್ದು, ಎಸ್‌ಎಫ್‌ಸಿ 7.2 ಯೋಜನೆ ಅಡಿ 8.68 ಲಕ್ಷ ಅನುದಾನ ಮೀಸಲಿಟ್ಟಿತ್ತು. ಇಲ್ಲಿಯವರೆಗೆ ಕಾರ್ಯಗತವಾಗಿರಲಿಲ್ಲ. ಅದನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನನ್ನ ಅವಧಿಯಲ್ಲಿ ಮಾಡಿದ ಯೋಜನೆ ಅಲ್ಲ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗೆ ಅಡ್ಡಿಪಡಿಸುವುದು, ಆರೋಪ ಮಾಡುವುದು ಅವರ ಜಾಯಮಾನ, ಆರೋಪದ ಹಿಂದೆ ಬೇರೆ ಉದ್ದೇಶವಿದೆ ಇದಕ್ಕೆಲ್ಲ ಹೆದರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಪಡೆದು ಟೆಂಡರ್‌ ಕರೆದಿದ್ದೇವೆ. ಗುತ್ತಿಗೆದಾರರು ಕಾಮ ಗಾರಿ ನಿರ್ವಹಿಸುತ್ತಾರೆ ಗುಣಮಟ್ಟ ವೀಕ್ಷಿಸಲು ಉಸ್ತುವಾರಿ ಮಾಡುತ್ತಿದ್ದೇನೆ. ಮೂರ್ತಿಯನ್ನು ಉಗ್ರಾಣದಲ್ಲಿ ಬಿಸಾಕಿದ್ದಾರೆ ಎಂಬುದು ಸುಳ್ಳು. ಬಿಸಾಕಿಲ್ಲ ಸೂಕ್ತವಾದ ಸ್ಥಳದಲ್ಲೇ ಇರಿಸಿದ್ದೇವೆ, ಸಿಂಬ್ಬಂದಿಗೆ ಜವಾಬ್ದಾರಿ ವಹಿಸಿದ್ದು, ನಿತ್ಯ ಪೂಜಿಸಲಾಗುತ್ತಿದೆ. ಮೂರ್ತಿಯನ್ನು ಗೌರವದಿಂದ ನೋಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟ ಪಡಿಸಿದರು.

ಉಪಾಧ್ಯಕ್ಷ ಮಹೇಶ ಪಾಟೀಲ, ಸದಸ್ಯರಾದ ಶಿವುಕುಮಾರ ಕಟ್ಟಿಮನಿ, ಮಾನಪ್ಪ ಚಳ್ಳಿಗಿಡ, ಮಹಮದ್‌ಗೌಸ್‌ ಕಿಣ್ಣಿ, ಮಲ್ಲೇಶ ಪೂಜಾರಿ, ನಗರಸಭೆ ವ್ಯವಸ್ಥಾಪಕ ಯ್ಲಪ್ಪನಾಯಕ, ಎಇಇ ಶಾಂತಪ್ಪ ಇತರರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.