ರೈತ ಹೋರಾಟಗಾರ ಮೈಲಾರಪ್ಪಗೆ ನುಡಿ ನಮನ

ಹೋರಾಟಗಾರನನ್ನು ನಾಡಿಗೆ ಪರಿಚಯಿಸಿದ ಸಗರ ಗ್ರಾಮಕ್ಕೆ ಅನಂತ ವಂದನೆಗಳನ್ನು ಅರ್ಪಿಸಿದರು.

Team Udayavani, Sep 23, 2021, 6:22 PM IST

ರೈತ ಹೋರಾಟಗಾರ ಮೈಲಾರಪ್ಪಗೆ ನುಡಿ ನಮನ

ಶಹಾಪುರ: ರೈತಪರ ಹೋರಾಟಗಾರ ಮೈಲಾರಪ್ಪ ಸಗರ ಅವರು ತಮ್ಮ ಕಂಚಿನ ಕಂಠದಿಂದ ರೈತರ ಸ್ಥಿತಿಗತಿ ಕುರಿತು ಆಗಿಂದಾಗೆ ಹಾಡುಗಳನ್ನು ಕಟ್ಟಿ ಹಾಡುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ನಾಡಿನ ರೈತರ ಅಭ್ಯುದಯಕ್ಕೆ ಮೈಲಾರಪ್ಪ ಹೃದಯ ಸದಾ ಮಿಡಿಯುತ್ತಿತ್ತು. ಇಂದು ಅವರಿಲ್ಲ. ಆದರೆ ಅವರ ಆದರ್ಶ, ಅಪ್ರತಿಮ ಹೋರಾಟತನ ನಮ್ಮ ಜೊತೆಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.

ತಾಲೂಕಿನ ಸಗರ ಗ್ರಾಮದಲ್ಲಿ ಜಿಲ್ಲಾ ಕರಾರೈಸಂ ಹಾಗೂ ಹಸಿರು ಸೇನೆ ಘಟಕ ಆಯೋಜಿಸಿದ್ದ ಹಿರಿಯ ರೈತ ಹೋರಾಟಗಾರ ದಿ| ಮೈಲಾರಪ್ಪ ಸಗರ ಅವರ ನುಡಿನಮನ ಕಾರ್ಯಕ್ರಮದಲ್ಲಿ ನೇಗಿಲ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸ್ವತಃ ಹಾಡು ರಚನೆ ಮಾಡಿ ಕಂಚಿನ ಕಂಠದಿಂದ ಸಂಗೀತ ಕ್ಷೇತ್ರಕ್ಕೆ ಮೆರಗು ನೀಡಿದ್ದ, ರೈತ ಹೋರಾಟಗಾರ ಮೈಲಾರಪ್ಪ ಸಗರವರು ಸಗರನಾಡಿನಲ್ಲಿ ಅಪ್ರತಿಮ ರೈತ ಕಲಾವಿದರಾಗಿದ್ದರು. ಅವರ ಹಾಡುಗಳು ಗ್ರಾಮೀಣ ಭಾಷೆಯಲ್ಲಿ ಸೊಗಡನ್ನೆ ಸಾರಿ ಹೇಳುವಂತಿವೆ. ತಮ್ಮ ಹಾಡುಗಳಿಂದ ರೈತ ಹೋರಾಟಕ್ಕೆ ಜೀವ ಕಳೆ ನೀಡುವದರೊಂದಿಗೆ ರೈತ ಶಕ್ತಿಯ ಪ್ರತಿರೂಪವಾಗಿದ್ದರು.

ಸದಾ ಜನಮಾನಸದಲ್ಲಿ ಹಸಿರಾಗಿರುವ ಮೈಲಾರಪ್ಪ ಸಗರವರ ಹಾಡುಗಳು ಮತ್ತು ಹೋರಾಟದ ಗೀತೆಗಳು ಇಂದಿಗೂ ಜನ ಜಾಗೃತಿಗೆ ಪೂರಕವಾಗಿವೆ ಎಂದ ಅವರು, ಅಂದು ಸಗರ ಮೈಲಾರಪ್ಪನವರ ಹೋರಾಟದ ರೈತ ಸಂಘ ಇಂದು ರೈತಪರ ಹೋರಾಟ ಮಾಡುತ್ತಾ ಬಂದಿದ್ದು. ರೈತರ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ.

ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದು ರೈತರನ್ನು ದಳ್ಳುರಿಗೆ ತರುವ ಹುನ್ನಾರದಲ್ಲಿ ಸರ್ಕಾರಗಳ ಕಾರ್ಯ ಯೋಜನೆಗಳು ಮುಂದುವರೆದಿವೆ ಎಂದು ಆರೋಪಿಸಿದ ಅವರು, ಮೈಲಾರಪ್ಪನಂತ ಅಪ್ರತಿಮ ಹೋರಾಟಗಾರನನ್ನು ನಾಡಿಗೆ ಪರಿಚಯಿಸಿದ ಸಗರ ಗ್ರಾಮಕ್ಕೆ ಅನಂತ ವಂದನೆಗಳನ್ನು ಅರ್ಪಿಸಿದರು. ಬಿಎಸ್‌ಎಫ್‌ ಯೋಧ ದುರ್ಗಪ್ಪ ನಾಯಕ ಸಗರ ಮಾತನಾಡಿದರು.

ಲಕ್ಷ್ಮಿಪುರ ಶ್ರೀಗಿರಿಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಹೇಶಗೌಡ ಸುಬೇದಾರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಂಚಾಲಕ ಶಾಂತರಡ್ಡಿ ಪಾಟೀಲ್‌, ಮುಖಂಡರಾದ ಅಶೋಕಗೌಡ ಸುಬೇದಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಕಾರ್ತಿಕ್‌ ಹೊಸಪೇಟೆ, ಭಕ್ತರಳ್ಳಿ ಭೆ„ರೆಗೌಡಮ ಹನುಮಂತ ಹೊಳೆಯಾಚೆ, ಶ್ರೀನಿವಾಸ ನಾಯಕ, ಬಸನಗೌಡ ಬಿರೆದಾರ, ಗಗನ, ಮಲ್ಲನಗಭಡ ಹಗರಟಗಿ, ದೇವಿಂದ್ರಪ್ಪಗೌಡ ಪಾಟೀಲ್‌, ಬಸವರಾಜಪ್ಪಗೌಡ ಪಾಟೀಲ್‌,
ದೇವರಾಜ, ಶಿವಕುಮಾರ ಮಲ್ಲೇದ್‌, ಶಂಕರ ಪಡಶೆಟ್ಟಿ, ರಾಯಪ್ಪ ನಾಯ್ಕೋಡಿ ಇದ್ದರು. ಇದೇ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನಿಸಲಾಯಿತು. ಮುಂಚಿತವಾಗಿ ಎತ್ತಿನ ಬಂಡಿಯಲ್ಲಿ ಕೋಡಿಹಳ್ಳಿ ಸೇರಿದಂತೆ ರೈತ ನಾಯಕರನ್ನು ಗ್ರಾಮದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ಮಾಡಲಾಯಿತು.

ರೈತರು ಇಂತಹ ರಾಜಕಾರಣಿಗಳ ಬಗ್ಗೆ ಕುರಿತು ಚರ್ಚಿಸೋದು ನಿಲ್ಲಿಸಿ. ನಿಮ್ಮ ಬದುಕಿನ ಬಗ್ಗೆ ಚಿಂತಿಸಿ. ಕೇಂದ್ರ ಸರ್ಕಾರ ಹೊಸ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಇದರಿಂದ ರೈತರ ಬಾಳು ಹಾಳಾಗಿ ಹೋಗಲಿದೆ. ನಮ್ಮ ಜಮೀನುಗಳಲ್ಲಿ ಕಂಪನಿಗಳು ಕೃಷಿ ಮಾಡಲು ಆಗಮಿಸಲಿದ್ದಾರೆ. ನಾವೆಲ್ಲ ಕೃಷಿತನವನ್ನು ಆಯಾ ಕಂಪನಿಗಳಿಗೆ ಒಪ್ಪಿಸಬೇಕಾಗುತ್ತದೆ. ಹೀಗಾದಲ್ಲಿ ಮುಂದೆ ನಮ್ಮ ಗತಿ ಏನಾಗಲಿದೆ ಎಂಬುದನ್ನು ಯೋಚಿಸಿ. ಅದರ ವಿರುದ್ಧ ಸೆಟೆದು ನಿಲ್ಲಬೇಕಿದೆ. ನಮ್ಮತನ ಕೃಷಿತನ ಉಳಿಸಿಕೊಳ್ಳಬೇಕಿದೆ.
ಕೋಡಿಹಳ್ಳಿ ಚಂದ್ರಶೇಖರ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.