ತಾಂಡಾಗಳ ಅಭಿವೃದ್ಧಿಯೇ ನನ್ನ ಗುರಿ


Team Udayavani, Mar 22, 2018, 5:18 PM IST

YAD-.jpg

ಹುಣಸಗಿ: ಮತಕ್ಷೇತ್ರದ ತಾಂಡಾ ಸೇರಿದಂತೆ ಹಳ್ಳಿಗಳ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಕೋಳಿಹಾಳ ಗ್ರಾಮದ ಮೂರು ತಾಂಡಾಗಳನ್ನು ಆಯ್ಕೆ ಮಾಡಲಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು. ಸಮೀಪದ ಕೋಳಿಹಾಳ ತಾಂಡಾದಲ್ಲಿ ಬುಧವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈ ಯೋಜನೆಯಲ್ಲಿ ಸಿಸಿ ರಸ್ತೆ ನಿರ್ಮಾಣ, ಸಮುದಾಯ ಭವನಗಳ ನಿರ್ಮಿಸುವುದು, ಸೋಲಾರ್‌ ವಿದ್ಯುತ್‌ನ ಬೀದಿ ದೀಪಗಳ ಅಳವಡಿಕೆ, ಮೂರು ತಾಂಡಾಗಳಲ್ಲಿನ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಇದಕ್ಕಾಗಿ 1 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರಕಾರದ ಸಾಧನೆ ಹಾಗೂ ಮತಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿ ನೋಡಿ ಬಿಜೆಪಿ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ ಎಂದು ಛೇಡಿಸಿದರು. ಮತದಾರರನ್ನು ಓಲೈಸಲು ಬಿಜೆಪಿ ಪ್ರಯತ್ನಿಸುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಸಾರ್ವಜನಿಕರು ತಕ್ಕ
ಉತ್ತರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ವೇಣುಗೋಪಾಲ ನಾಯಕ, ನಾಗಣ್ಣ ದಂಡಿನ್‌, ವೆಂಕೋಬ ಯಾದವ್‌, ಆರ್‌.ಎಂ. ರೇವಡಿ, ಅಣ್ಣಪ್ಪಗೌಡ ಪಾಟೀಲ್‌, ಗೋಪಾಲ ದೊರೆ ಅಮಲ್ಯಾಳ್‌, ಜೆ.ಎಫ್‌. ಮುಜಾವರ್‌, ಬಾಸುನಾಯಕ ರಾಠೊಡ್‌, ಸಂತೋಷ ಜಾಧವ್‌, ಶೇಖಪ್ಪ ಇತರರು ಇದ್ದರು

ಸಿಸಿ ರಸ್ತೆ ಕಾಮಗಾರಿಗೆ ಚಾಲನೆ 
ಸುರಪುರ: ನಗರದ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸುವುದರ ಜೊತೆಗೆ ನಗರದ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿದ್ದೇನೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. 

ನಗರದ ಮಹಾತ್ಮ ಗಾಂಧೀಜಿ ವೃತ್ತದಿಂದ ಕಬಾಡಗೇರಾವರೆಗೆ ನಿರ್ಮಿಸಲು ಉದ್ದೇಶಿಸಲಾಗಿರುವ 1.90 ಕೋಟಿ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಒಳ ಚರಂಡಿ ಕಾಮಗಾರಿಗೆ ಬುಧವಾರ ಗಾಂಧಿ ವೃತ್ತದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ನಗರದ ಮುಖ್ಯ ರಸ್ತೆಯ ಮಾರ್ಗದುದ್ದಕ್ಕೂ ಒಳ ಚರಂಡಿ ಕಾಮಗಾರಿ ಸರಿಯಾಗಿ ನಿರ್ವಹಿಸದ ಕಾರಣ ಅಲ್ಲಲ್ಲಿ ತಗ್ಗುಗಳು ನಿರ್ಮಾಣ ಆಗಿದ್ದವು. ಇದರಿಂದ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿತ್ತು. ಇದನ್ನು ಗಮನಿಸಿ ಸಿಸಿ ರಸ್ತೆ ನಿರ್ಮಾಣಕ್ಕೆ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದರು.

ಈ ಕಾಮಗಾರಿಯು ಲೋಕೊಪಯೋಗಿ ಇಲಾಖೆಗೆ ಸಂಬಂಧಿಸಿದ್ದು, ವಲ್ಲಭಭಾಯಿ ಪಟೇಲ್‌ ವೃತ್ತದ ರಸ್ತೆ ಮತ್ತು ಅರ್ಧ ದೇವರಬಾವಿ ರಸ್ತೆಯಲ್ಲಿ ಕೂಡ ಕಾಮಗಾರಿ ನಿರ್ವಹಿಸಲಾಗುವುದು. ಸಂಬಂಧಿಸಿದವರು ಕಾಮಗಾರಿ ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.

ನಗರಸಭೆ ಅಧ್ಯಕ್ಷೆ ಜಹೀರಾಬಿ ಹುಸ್ಮಾನ್‌, ಸದಸ್ಯ ವೆಂಕಟೇಶ ಹೊಸ್ಮನಿ, ಮನೋಹರ ಕುಂಟೋಜಿ, ವೆಂಕಟರಡ್ಡಿ ಬೋಯಿ, ಪಿಡಬ್ಲ್ಯೂಡಿ ಎಇಇ ಜಾವೀದ್‌, ಎಇ ಸುಭಾಶ್ಚಂದ್ರ, ಮುಖಂಡರಾದ ರಾಜಾ ವೇಣುಗೋಪಾಲ ನಾಯಕ, ರಾಜಾ ಮುಕುಂದ ನಾಯಕ, ಮಂಜುನಾಥ ಗುಳಗಿ, ವಿರೇಶ ದೇಶಮುಖ, ಮಾಳಪ್ಪ ಕಿರದಳ್ಳಿ ಇತರರು ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.