ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಓರ್ವ ಸಾವು, ಮೂವರ ಸ್ಥಿತಿ ಗಂಭೀರ


Team Udayavani, Jun 29, 2022, 4:06 PM IST

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ನಾರಾಯಣಪುರ: ಪಟ್ಟಣದ ಛಾಯಾ ಕಾಲೋನಿ ಬಡಾವಣೆಯ ಮನೆಯೊಂದರಲ್ಲಿ ನಾಲ್ಕು ಜನರ ಮೇಲೆ ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಪೊಲೀಸರ ವಶದಲ್ಲಿದ್ದಾನೆ.

ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ. ಅವರನ್ನು ಲಿಂಗಸೂಗುರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ವಿವರ: ಛಾಯಾ ಕಾಲೋನಿಯ ನಿವಾಸಿಯಾಗಿರುವ ಆರೋಪಿ ಶರಣಪ್ಪ ದಂಪತಿಗಳ ನಡುವೆ ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು (ಮಾತುಕತೆ) ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿಯಿಂದ ಸುಟ್ಟು ಗಂಭೀರ ಗಾಯಗೊಂಡ ನಾಲ್ವರನ್ನು ಸ್ಥಳೀಯರ ನೆರವಿನಿಂದ ಖಾಸಗಿ ವಾಹನದ ಮೂಲಕ ಲಿಂಗಸೂಗುರು ಆಸ್ಪತ್ರೆಗೆ ದಾಖಲಿಸಿದ್ದಾರೆ ಈ ವೇಳೆ ಓರ್ವ ಸಾವನ್ನಪಿದ್ದಾನೆ.

ಇಂತಹ ಅಮಾನವಿಯ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಸ್ಥಳಕ್ಕೆ ಸಿಪಿಐ ಭೇಟಿ: ವಿಷಯ ತಿಳಿದು ಘಟನಾ ಸ್ಥಳಕ್ಕೆ ಹುಣಸಗಿ ವೃತ್ತ ಸಿಪಿಐ ದೌಲತ್ ಎನ್. ಕೆ, ಸ್ಥಳೀಯ ಠಾಣೆಯ ಪಿಎಸೈ ಸಿದ್ದೇಶ್ವರ ಗೆರಡೆ, ಬಾಗಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿಐ ಇದೊಂದು ಅಮಾನುಷ ಕೃತ್ಯವಾಗಿದೆ ಆರೋಪಿಯು ಪೊಲೀಸ್‌ರ ವಶದಲ್ಲಿದ್ದಾನೆ ಘಟನೆಯಲ್ಲಿ ಸುಟ್ಟಿರುವ ನಾಲ್ವರನ್ನು ಲಿಂಗಸೂಗುರು ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿದೆ ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.