ಹೆಸರು ಇಲ್ಲ ಹಣವೂ ಇಲ್ಲ


Team Udayavani, Jan 11, 2018, 10:33 AM IST

yadgiri-1.jpg

ಯಾದಗಿರಿ: ರಾಜ್ಯ ಸರಕಾರ ರೈತರಿಗೆ ಅನುಕೂಲ ಆಗಲೆಂದು ಹೆಸರು, ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸುತ್ತಿದೆ. ಆದರೆ ಈ ಖರೀದಿ ಕೇಂದ್ರದ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಹೆಸರು ಬೇಳೆ ಮಾರಾಟ ಮಾಡಿದ ರೈತನೊಬ್ಬ ಕಳೆದ ಆರು ತಿಂಗಳಿಂದ ಹಣ ದೊರೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲಾ ಕೇಂದ್ರದಿಂದ 15 ಕಿ.ಮೀ. ದೂರದಲ್ಲಿರುವ ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದ ರೈತ ಬಸವರಾಜ ವಿರುಪಣ್ಣ ಅವರು ತಮ್ಮ ಐದು ಎಕರೆ ಪೈಕಿ ನಾಲ್ಕು ಎಕರೆ ಜಮೀನಿನಲ್ಲಿ ಹೆಸರು ಬೆಳೆದಿದ್ದರು. ಜು. 13, 2017ರಂದು ತಾಲೂಕಿನ ಹತ್ತಿಕುಣಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಖರೀದಿ ಕೇಂದ್ರದಲ್ಲಿ 11.50 ಕ್ವಿಂಟಾಲ್‌ ಹೆಸರನ್ನು ರಾಜ್ಯ ಸರಕಾರದ ಬೆಂಬಲ ಬೆಲೆಯೊಂದಿಗೆ 5,375 ಹಾಗೂ ಕೇಂದ್ರ ಸರಕಾರದ ಬೆಂಬಲ ಬೆಲೆ 200 ರೂ. ಸೇರಿ ಪ್ರತಿ ಕ್ವಿಂಟಾಲ್‌ಗೆ 5,575 ರೂ.ಗೆ ಹೆಸರು ಮಾರಾಟ ಮಾಡಿದ್ದು, ಒಟ್ಟು 64112.5 ರೂ. ಅವರ ಖಾತೆಗೆ ಒಂದು ತಿಂಗಳೊಳಗೆ ಸಂದಾಯ ಮಾಡುತ್ತೇವೆ ಎಂದು ಖರೀದಿ ಕೇಂದ್ರ ಸಿಬ್ಬಂದಿಗಳು ತಿಳಿಸಿದ್ದರು. ಆದರೆ ಆರು ತಿಂಗಳು ಕಳೆದರೂ ಹಣ ಬ್ಯಾಂಕ್‌ ಖಾತೆಗೆ ಜಮಾವಾಗದೆ ರೈತ ಕಂಗಲಾಗಿದ್ದಾನೆ.

ಪಹಣಿ, ಆಧಾರ್‌ ಕಾರ್ಡ್‌, ಬೆಳೆ ವಿಮೆ ದೃಢೀಕರಣ ಪತ್ರ, ಬ್ಯಾಂಕ್‌ ಖಾತೆಯ ಪಾಸ್‌ ಬುಕ್‌ನ ನಕಲು ಪ್ರತಿ ಸೇರಿದಂತೆ
ಸಂಬಂಧಪಟ್ಟ ಎಲ್ಲ ದಾಖಲೆ ಪತ್ರಗಳನ್ನು ನೀಡಿದ್ದರು. ಆದರೂ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಿಲ್ಲ. ಈ ಬಗ್ಗೆ ಖರೀದಿ ಕೇಂದ್ರದ ಸಿಬ್ಬಂದಿಗಳಿಗೆ ಕೇಳಿದರೆ ಆನ್‌ಲೈನ್‌ನಲ್ಲಿ ಐಎಫ್‌ ಎಸ್‌ಸಿ ಕೋಡ್‌ ಎಸ್‌ಬಿಐಎನ್‌ ಬದಲು ಎಸ್‌ಬಿಐ ಎಂದು ನಮೋದಿಸಿದ್ದರಿಂದ ತಿರಸ್ಕೃತವಾಗಿದೆ. ಆದಷ್ಟು ಬೇಗ ಸಮಸ್ಯೆ ಬಗೆ ಹರಿಸಿ ಹಣ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು ಎಂದು ಕಳೆದ ಒಂದು ತಿಂಗಳಿಂದ ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಜಮೆ ಮಾಡಿಲ್ಲ ಎಂದು ರೈತ ಬಸವರಾಜ ವಿರುಪಣ್ಣ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್‌, ಸಾಲ ಸೋಲ ಮಾಡಿ ಹೆಸರು ಬೆಳೆ ಬೆಳೆದಿದ್ದೇನೆ. ಕಳೆದ ಆರು ತಿಂಗಳಿಂದ ಹೆಸರು ಇಲ್ಲ. ಹಣವೂ ಇಲ್ಲವೆಂಬಂತಾಗಿದೆ. ಈ ರೀತಿಯಾದರೆ, ರೈತರು ಖರೀದಿ ಕೇಂದ್ರದಲ್ಲಿ ಬೆಳೆ ಮಾರಾಟಕ್ಕೆ ಹಿಂಜರಿಯುವಂತಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯಿಂದ ನನ್ನ ಖಾತೆಗೆ ಹಣ ಜಮಾವಾಗಿಲ್ಲ. ಇದೇ ರೀತಿ 35 ರೈತರ ಸಮಸ್ಯೆ ಆಗಿದೆ ಎಂದು ತಮ್ಮ ನೋವು ತೋಡಿಕೊಂಡರು.
 
ರೈತರ ಅನುಕೂಲಕ್ಕಾಗಿ ರಾಜ್ಯ ಸರಕಾರ ಖರೀದಿ ಕೇಂದ್ರಗಳನ್ನು ಆರಂಭಿಸುತ್ತದೆ. ಅದರ ಜೊತೆಗೆ ರೈತರಿಗೆ ಸರಿಯಾದ ಸಮಯಕ್ಕೆ ಹಣ ಸಂದಾಯವಾದಾಗ ಮಾತ್ರ ಖರೀದಿ ಕೇಂದ್ರ ಸ್ಥಾಪಿಸಿದ್ದು, ಸಾರ್ಥಕವಾಗುತ್ತದೆ.

ಪಟ್ಟಿ ಪರಿಷ್ಕರಿಸಿ ಕ್ರಮ
ಆನ್‌ಲೈನ್‌ನಲ್ಲಿ ಐಎಫ್‌ಎಸ್‌ಸಿ ಕೋಡ್‌ ಎಸ್‌ಬಿಐಎನ್‌ ಬದಲು ಎಸ್‌ಬಿಐ ಎಂದು ನಮೋದಿಸಿದ್ದರಿಂದ ರೈತರ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಿಲ್ಲ. ಈಗ ತಪ್ಪಾಗಿರುವ ಪಟ್ಟಿಯನ್ನು ಪರಿಷ್ಕರಿಸಿ ಶಹಾಪುರದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಗೆ ಕಳುಹಿಸಿ ಕೊಡಲಾಗಿದೆ.
 ಸಂಜೀವಕುಮಾರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ, ಹತ್ತಿಕುಣಿ

ಮೂರ್‍ನಾಲ್ಕು ದಿನದಲ್ಲಿ ಸಮಸ್ಯೆಗೆ ಪರಿಹಾರ
ಖರೀದಿ ಕೇಂದ್ರದ ಸಿಬ್ಬಂದಿಗಳು ಆನ್‌ಲೈನ್‌ನಲ್ಲಿ ಐಎಫ್‌ಎಸ್‌ಸಿ ಕೋಡ್‌ ಎಸ್‌ಬಿಐಎನ್‌ ಬದಲು ಎಸ್‌ಬಿಐ ಎಂದು ನಮೋದಿಸಿದ್ದರಿಂದ ಸುಮಾರು 35 ರೈತರಿಗೆ ಹಣ ಸಂದಾಯವಾಗಿಲ್ಲ. ಇದು ನಮ್ಮ ಗಮನಕ್ಕೆ ಬಂದಿದೆ. ಎನ್‌ಇಎಂಎಲ್‌ಗೆ ಪರಿಷ್ಕೃತ ಲಿಸ್ಟ್‌ ಕಳುಹಿಸಲಾಗುತ್ತಿದ್ದು, ಮೂರ್‍ನಾಲ್ಕು ದಿನದಲ್ಲಿ ಸಮಸ್ಯೆ ಬಗೆಹರಿಸಿ ರೈತರ ಖಾತೆಗೆ ಹಣ ಜಮೆ ಮಾಡಲಾಗುವುದು.
 ಭೀಮಣ್ಣ, ವ್ಯವಸ್ಥಾಪಕ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ

„ರಾಜೇಶ ಪಾಟೀಲ್‌ ಯಡ್ಢಳಿ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.