![Dravid–gavskar](https://www.udayavani.com/wp-content/uploads/2024/07/Dravid-gavskar-415x249.jpg)
ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 11, 2022, 3:32 PM IST
![18protest](https://www.udayavani.com/wp-content/uploads/2022/06/18protest-2-620x313.jpg)
ಶಹಾಪುರ: ಬಿಜೆಪಿ ರಾಷ್ಟ್ರೀಯ ವಕ್ತಾರ ನೂಪುರ ಶರ್ಮಾ ಹಾಗೂ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ನವೀನ್ ಜಿಂದಾಲ್ ಮುಸ್ಲಿಂ ಧರ್ಮ ಮತ್ತು ಪ್ರವಾದಿ ಮಹ್ಮದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಇಲ್ಲಿನ ಮುಸ್ಲಿಂ ಒಕ್ಕೂಟ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.
ಬಿಜೆಪಿ ನಾಯಕ ನೂಪುರ ಶರ್ಮಾ ದೂರದರ್ಶನ ಒಂದರಲ್ಲಿ ನಡೆದ ಚರ್ಚೆ ವೇಳೆ ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹ್ಮದ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಅಲ್ಲದೇ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ನವೀನ್ ಜಿಂದಾಲ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ಮಹ್ಮದ್ ರ ಬಗ್ಗೆ ಅವಹೇಳನಕಾರಿ ಟ್ವಿಟ್ ಮಾಡಿದ್ದು, ಈ ಇಬ್ಬರ ನಾಯಕರ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಮುಸ್ಲಿಂ ಸಮುದಾಯ ಪ್ರತಿಭಟನೆ ನಡೆಸಲಿದೆ ಎಂದು ಮುಸ್ಲಿಂ ಬಾಂಧವರು ಎಚ್ಚರಿಕೆ ನೀಡಿದರು.
ಈ ವೇಳೆ ಸಯ್ಯದ್ ಸೈದುದ್ದೀನ್ ಖಾದ್ರಿ, ಸಯ್ಯದ್ ಮುಸ್ತಫಾ ದರ್ಬಾನ್, ಸಯ್ಯದ್ ಶಫಿವುದ್ದೀನ್, ಇಸ್ಮಾಯಿಲ್ ಚಾಂದ್, ನೂರುದ್ದೀನ್ ಖಾದ್ರಿ, ರಫೀಕ್ ಚೌದ್ರಿ, ಸಯ್ಯದ್ ಮುರ್ತುಜಾ, ಬಾಬಾ ಪಟೇಲ್, ತಲಾಕ್ ಚಾಂದ್, ನಯೀಮ್ ಅಫ್ಘಾನ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
![Dravid–gavskar](https://www.udayavani.com/wp-content/uploads/2024/07/Dravid-gavskar-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Dravid–gavskar](https://www.udayavani.com/wp-content/uploads/2024/07/Dravid-gavskar-150x90.jpg)
Indian Cricket; ರಾಹುಲ್ ದ್ರಾವಿಡ್ಗೆ ಭಾರತ ರತ್ನ ಕೊಡಿ: ಗವಾಸ್ಕರ್
![rain 21](https://www.udayavani.com/wp-content/uploads/2024/07/rain-21-150x95.jpg)
Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ
![Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/Bha-150x73.jpg)
Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ
![1-wqwewewq](https://www.udayavani.com/wp-content/uploads/2024/07/1-wqwewewq-150x106.jpg)
T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ
![renukaacharya](https://www.udayavani.com/wp-content/uploads/2024/07/renukaacharya-150x100.jpg)
Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.