![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 3, 2022, 6:46 PM IST
ಸುರಪುರ: ನಗರಸಭೆ ವ್ಯಾಪ್ತಿಯ ಸರ್ವೇ 186ರಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಡೆದಿರುವ ಮನೆಗಳ ನಿರ್ಮಾಣ ಕಾಮಗಾರಿ ತಡೆಹಿಡಿಯಬೇಕು ಎಂದು ಒತ್ತಾಯಿಸಿ ನಗರಸಭೆ ಕಾಂಗ್ರೆಸ್ ಸದಸ್ಯರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ನಗರಸಭೆ ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ ತಾತಾ ಮಾತನಾಡಿ, ನಗರಸಭೆಗೆ ಸೇರಿದ ಈ ಸರ್ವೇ ನಂಬರ್ನಲ್ಲಿ 1995-96ರಲ್ಲಿ ವಸತಿ ಯೋಜನೆಯಡಿ ನಿವೇಶನ ರಹಿತ 196 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಲಾಗಿದೆ. ಅಲ್ಲಿಂದ ಇಲ್ಲಿವರೆಗೆ ಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಿಲ್ಲ ಎಂದು ದೂರಿದರು.
ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಗರಸಭೆಗೆ ಹೊಸದಾಗಿ 500 ಮನೆ ಮಂಜೂರಾಗಿವೆ. ಕಾಂಗ್ರೆಸ್ ಸದಸ್ಯರನ್ನು ಹೊರಗಿಟ್ಟು ಹೊಸ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಅದೇ ನಿವೇಶನದಲ್ಲಿ ಮಂಜೂರಾಗಿರುವ ಮನೆಗಳ ನಿರ್ಮಿಸಿ ಹೊಸ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಇದರಿಂದ ಹಕ್ಕುಪತ್ರ ಪಡೆದ 196 ಫಲಾನುಭವಿಗಳು ನಿವೇಶನ ವಂಚಿತರಾಗಲಿದ್ದಾರೆ ಎಂದು ಆರೋಪಿಸಿದರು.
ಹಾಲಿ ಮನೆಗಳ ಕಾಮಗಾರಿ ಕೂಡಲೇ ತಡೆಹಿಡಿಯಬೇಕು. ಮೊದಲು ಹಕ್ಕುಪತ್ರ ವಿತರಿಸಿದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ನಿರ್ಲಕ್ಷ್ಯ ವಹಿಸಿದ್ದಲ್ಲಿ ನಗರಸಭೆ ಕಾಂಗ್ರೆಸ್ ಸದಸ್ಯರ ನೇತೃತ್ವದಲ್ಲಿ ಹಕ್ಕುಪತ್ರ ಪಡೆದ ಫಲಾನುಭವಿಗಳೊಂದಿಗೆ ಅ.5ರಂದು ನಗರಸಭೆ ಕಾರ್ಯಾಲಯ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
ನಂತರ ನಗರಸಭೆ ಎಂಜಿನಿಯರ್ ಶಾಂತಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸದಸ್ಯರಾದ ನಾಸೀರಹುಸೇನ್ ಕುಂಡಾಲೆ, ಸೋಮನಾಥ ಡೊಣ್ಣಿಗೇರಿ, ಜುಮ್ಮಣ್ಣ ಕೆಂಗುರಿ, ಮುಖಂಡರಾದ ಮಲ್ಲು ಬಿಲ್ಲವ್, ಧರ್ಮರಾಜ ಮಡಿವಾಳರ, ಸಿದ್ರಾಮ ಎಲಿಗಾರ, ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ಡೊಣ್ಣಿಗೇರಿ ಇತರರಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.