ರಸ್ತೆ ಮಧ್ಯೆ ವಾಹನಗಳ ಕಿರಿಕಿರಿ

ಸಮರ್ಪಕವಾಗಿ ಪಾಲನೆಯಾಗದ ನಿಯಮಜನ ಸಂಚಾರಕ್ಕೆತೊಂದರೆ

Team Udayavani, Mar 16, 2020, 1:56 PM IST

16-March-16

ಸೈದಾಪುರ: ಪಟ್ಟಣದ ಒಳ ರಸ್ತೆಗಳಲ್ಲಿ ಗಂಟೆಗಟ್ಟಲೆ ನಿಲ್ಲುವ ಭಾರೀ ವಾಹನಗಳಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ.

ಸುತ್ತಲಿನ ಹತ್ತಾರು ಗ್ರಾಮಗಳ ಶೈಕ್ಷಣಿಕ, ವ್ಯವಹಾರಿಕ ಕೇಂದ್ರವಾದ ಸೈದಾಪುರ ಪಟ್ಟಣಕ್ಕೆ ರೈಲು ಸಂಪರ್ಕವೂ ಇದೆ. ಪ್ರತಿ ನಿತ್ಯ ವಾಹನಗಳಲ್ಲಿ ಜನರು ಸಂಚರಿಸುತ್ತಾರೆ. ಆದರೆ ಪಟ್ಟಣದ ರೈಲು ನಿಲ್ದಾಣದಿಂದ ಎಂಪಿಎಸ್‌ ಶಾಲೆ ಹಾಗೂ ಬಸವೇಶ್ವರ ವೃತ್ತದಿಂದ ಕನಕ ವೃತ್ತದ ಮಧ್ಯದಲ್ಲಿ ಸಾಮಾಗ್ರಿ ತುಂಬಿದ ವಾಹನಗಳ ನಿಲುಗಡೆಯಿಂದ ಸಂಚಾರ ಸಮಸ್ಯೆ ಎದುರಾಗಿ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಸೈದಾಪುರ ಪಟ್ಟಣದ ಇಕ್ಕಟ್ಟಾದ ಒಳ ರಸ್ತೆಗಳಲ್ಲಿ ಲಾರಿಗಳನ್ನು ನಿಲ್ಲಿಸಿ ಸಾಮಗ್ರಿ ಖಾಲಿ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ಸುಗಮ ವಾಹನ ಸಂಚಾರ ಸಾಧ್ಯವಾಗದ ಆಟೋ, ಟಂಟಂ ಸೇರಿದಂತೆ ಹತ್ತಾರು ದ್ವಿಚಕ್ರ ವಾಹನಗಳು ಸೇರಿ ದಟ್ಟಣೆ ಹೆಚ್ಚಾಗುತ್ತದೆ. ವಾಹನಗಳು ಹಿಂದೆ-ಮುಂದೆ ಹೋಗದೆ ರಸ್ತೆ ಮಧ್ಯೆ ನಿಲ್ಲುತ್ತವೆ. ಇನ್ನು ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರ ಕೊರತೆ ಇರುವುದರಿಂದ ಸಾರ್ವಜನಿಕರ ತೊಂದರೆ ಸರ್ವೆ ಸಾಮಾನ್ಯವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಾದರೂ ಸಂಬಂಧಿಸಿದ ಅಧಿಕಾರಿಗಳು ಭಾರೀ ಗಾತ್ರದ ವಾಹನಗಳಿಗೆ ಪಟ್ಟಣದ ಒಳ ರಸ್ತೆಗಳಲ್ಲಿ ಸಂಚರಿಸಲು ಸಮಯ ನಿಗದಿ ಮಾಡಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಜನಸಾಮಾನ್ಯರ ಒತ್ತಾಸೆಯಾಗಿದೆ.

ಪೊಲೀಸ್‌ ಇಲಾಖೆ ಕೇವಲ ದಂಡಕ್ಕೆ ಸೀಮಿತ
ಪಟ್ಟಣದಲ್ಲಿ ಹಲವೆಡೆ ವಾಹನ ಸಂಚಾರದಿಂದ ಸಾರ್ವಜನಿಕರು ತೊಂದರೆ ಅನುಭವಿಸಿತಿದ್ದರೆ ಇನ್ನೊಂದಡೆ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಪಟ್ಟಣಕ್ಕೆ ಆಗಮಿಸುವ ಮತ್ತು ಹೊರ ಹೋಗುವ ವಾಹನಗಳಿಗೆ ಬಾರಿ ದಂಡ ವಿಧಿಸುತ್ತಿರುವುದಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣದಲ್ಲಿ ಸುಗಮ ವಾಹನ ಸಂಚಾರ ಮತ್ತು ಪಾದಚಾರಿಗಳ ಬಗ್ಗೆ ಗಮನಹರಿಸದ ಪೊಲೀಸ್‌ ಇಲಾಖೆ ಕಾರ್ಯವೈಖರಿ ಬಗ್ಗೆ ಪಟ್ಟಣದ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಪಟ್ಟಣದಲ್ಲಿ ಪದೇ ಪದೇ ಉಂಟಾಗುವ ಸಂಚಾರ ದಟ್ಟಣೆಗೆ ಈ ಹಿಂದಿನ ಪೊಲೀಸ್‌ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದರು. ಅಲ್ಲದೇ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಅನುಕೂಲ ಮಾಡಿಕೊಟ್ಟಿದರು. ಆದರೆ ಈಗಿನ ಅಧಿಕಾರಿಗಳು ಕೇವಲ ದಂಡ ವಸೂಲಿ ಮಾಡುವುದರಲ್ಲಿ ಮಗ್ನವಾಗಿರುವುದು ಬೇಸರದ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಪೊಲೀಸ್‌ ಅಧಿಕಾರಿಗಳು ಈ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ಶರಣಗೌಡ ಕ್ಯಾತ್ನಾಳ
ಜೆಡಿಎಸ್‌ ಯುವ ಮುಖಂಡ ಸೈದಾಪುರ

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

Yadagiri: Lalitha Anapura assumed office as the new Chairperson of Municipal Council

Yadagiri: ನಗರಸಭೆ ನೂತನ ಅಧ್ಯಕ್ಷೆಯಾಗಿ ಅನಪೂರ ಅಧಿಕಾರ ಸ್ವೀಕಾರ

chalavadi

Mysuru Dasara ವೇದಿಕೆ ರಾಜಕೀಯಕ್ಕೆ ಸಲ್ಲ: ಛಲವಾದಿ ನಾರಾಯಣ ಸ್ವಾಮಿ ಕಿಡಿ

7-yadagiri

Yadgiri ನಗರಸಭೆ ಅಧ್ಯಕ್ಷರಾಗಿ ಕು.ಲಲಿತಾ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.