ನೆಮ್ಮದಿ ಜೀವನಕ್ಕೆ ಸತ್ಸಂಗ ಅಗತ್ಯ

ಉತ್ತಮ ಬದುಕು ಕಟ್ಟಿಕೊಳ್ಳಲು ಸುಸಂಸ್ಕಾರ ಅಗತ್ಯ

Team Udayavani, Mar 12, 2020, 5:33 PM IST

12-March-35

ಶಹಾಪುರ: ಪ್ರಸ್ತುತ ಒತ್ತಡದ ಜೀವನದಲ್ಲಿ ಸಂಸಾರ ಎಂಬುದು ಜಡವಾಗಿ ಮನಸ್ಸು ಹತೋಟಿ ತಪ್ಪಿ ಮಾನಸಿಕವಾಗಿ ಕುಗ್ಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆಗಳು ಜಾಸ್ತಿ ಇವೆ. ಮಾನಸಿಕ ಒತ್ತಡ ಜೀವನದಿಂದ ಪಾರಾಗಲು ಸತ್ಸಂಗ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ಫಕ್ಕೀರೇಶ್ವರ ಮಠದ ಶ್ರೀ ಗುರುಪಾದ ಸ್ವಾಮೀಜಿ ಹೇಳಿದರು.

ನಗರದ ಫಕ್ಕೀರೇಶ್ವರ ಮಠದಲ್ಲಿ ಜ್ಞಾನ ಯೋಗ ಆಧ್ಯಾತ್ಮಿಕ ಸೇವಾ ಸಮಿತಿಯಿಂದ ಹುಣ್ಣಿಮೆ ಹೊಳಪು ಸತ್ಸಂಗ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.

ಸತ್ಸಂಗದಲ್ಲಿ ಭಕ್ತಿಯಿಂದ ಭಾಗವಹಿಸಿ ಒಂದಿಷ್ಟು ದೇವರ ಸ್ಮರಣೆಯಲ್ಲಿ ಭಜನೆ, ಕೀರ್ತನ ಗೀತೆಗಳಲ್ಲಿ ತಲ್ಲೀನನಾಗುವ ಮೂಲಕ ಮಾನಸಿಕವಾಗಿ ಸಮತೋಲನಕ್ಕೆ ಬಂದು ಒತ್ತಡ ಬದುಕಿನಿಂದ ಪಾರಾಗಿ ನೆಮ್ಮದಿ ಕಾಣಬಹುದು ಎಂದು ಹೇಳಿದರು.

ಅದ್ವೈತ ಸಿದ್ಧಾಂತದ ಸಾರ್ವಭೌಮ ಚಕ್ರವರ್ತಿಯಾಗಿರುವ ಶಂಕರಾಚಾರ್ಯರು ಹೇಳಿರುವ ಹಾಗೆ ಸತ್ಸಂಗದಿಂದ ಬದುಕಿಗೆ ಮುಕ್ತಿ ಸಿಗುವುದರ ಜತೆಗೆ ನಮ್ಮ ಜೀವನ ಪರಮ ಪಾವನವಾಗಲಿದೆ ಎಂದು ಹೇಳಿದರು.

ಹಣ, ಸಂಪತ್ತು ಗಳಿಸುವ ಭರಾಟೆಯಲ್ಲಿ ನಾವು ಕುಟುಂಬದ ನೆಮ್ಮದಿ, ಸಂತೋಷ, ಸಂತೃಪ್ತಿ ಕಳೆದುಕೊಂಡು ದ್ವೇಷ, ರೋಷ ವ್ಯಾಮೋಹ ಎಂಬ ಭ್ರಾಂತಿಯಲ್ಲಿ ಮುಳುಗುತ್ತಿದ್ದೇವೆ. ಇದರಿಂದ ಅರ್ಥ ಬದ್ಧ ಜೀವನ ವ್ಯರ್ಥವಾಗಿಸುತ್ತಿದ್ದೇವೆ. ಇದರಿಂದ ಹೊರಬರಲು ಉತ್ತಮ ಬದುಕು ಕಟ್ಟಿಕೊಳ್ಳಲು ಸುಸಂಸ್ಕಾರ ಅಗತ್ಯವಿದೆ. ಗುರುವಿನ ಸಮ್ಮುಖದಲ್ಲಿ ಸತ್ಸಂಗದಲ್ಲಿ ಭಾಗವಹಿಸುವ ಮೂಲಕ ಉತ್ತಮ ಬದುಕು ರೂಢಿಸಿಕೊಳ್ಳಲು ಸಾಧ್ಯವಿದೆ. ಕಾರಣ ನಿತ್ಯ ಒಂದಿಷ್ಟು ಸಮಯ ಯೋಗ, ಧ್ಯಾನ ಆಧ್ಯಾತ್ಮಿಕತೆಗೆ ಸಮಯ ತೆಗೆದಲ್ಲಿ ನಿಜವಾದ ಸುಖ, ನೆಮ್ಮದಿ ಕಂಡುಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನೂರಾರು ಜನ ಭಕ್ತರು ಭಾಗವಹಿಸಿ ಶ್ರೀಗಳ ಸಂದೇಶ ಕೇಳಿದರು. ಭಜನೆ, ಕೀರ್ತನೆಯಲ್ಲಿ ಭಾಗವಹಿಸಿದರು. ನಂತರ ಧ್ಯಾನ ಮಾಡಿದರು.

ಇದೇ ಸಂದರ್ಭದಲ್ಲಿ ಶ್ರೀಮಠದ ಗುರುಪಾದ ಶ್ರೀಗಳು, ಚುಟುಕು ಸಾಹಿತ್ಯ ಪರಿಚತ್‌ನ ನೂತನ ತಾಲೂಕು ಅಧ್ಯಕ್ಷ ಮಹೇಶ ಪತ್ತಾರ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.