![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, May 9, 2024, 3:30 PM IST
ಯಾದಗಿರಿ: 2024 ರ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಯಾದಗಿರಿ ಜಿಲ್ಲೆ ಪ್ರತಿವರ್ಷದಂತೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಹಿಂದುಳಿದ ಜಿಲ್ಲೆಯಾದ ಯಾದಗಿರಿ ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದು, ಇದಕ್ಕೆ ಶಿಕ್ಷಕರ ನೇಮಕ ಕೊರೆತಯೂ ಒಂದಾಗಿದೆ.
2023 ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯು ಎಸ್ಎಸ್ಎಲ್ಸಿ ಫಲಿತಾಂಶ 73 ರಷ್ಟು ಪ್ರತಿಶತ ಪಡೆದಿದತ್ತು. ಆದರೆ ಪ್ರಸ್ತುತ ವರ್ಷ ಫಲಿತಾಂಶ ಶೇ.50.59 ಕ್ಕೆ ಇಳಿದಿದೆ.
ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದ ಯಾದಗಿರಿ ಜಿಲ್ಲೆಯಲ್ಲಿ 18880 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 9551 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಯಾದಗಿರಿ ಜಿಲ್ಲೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಳೆದ ಐದು ವರ್ಷಗಳಿಂದ ಕೊನೆಯ ಸ್ಥಾನ ಪಡೆಕೊಂಡು, ಶೈಕ್ಷಣಿಕವಾಗಿ ಅತ್ಯಂತ ಹಿಂದೆ ಉಳಿದಿರುವುದು ಶೋಚನೀಯವಾಗಿದೆ.
ಪ್ರೌಢ ಶಾಲೆಗಳ 1435 ಮಂಜೂರಾತಿ ಶಿಕ್ಷಕರ ಹುದ್ದೆಯಲ್ಲಿ, 760 ಶಿಕ್ಷಕರ ಹುದ್ದೆಗಳು ಭರ್ತಿ ಮಾಡಲಾಗಿದೆ. ಸುಮಾರು 675 ಖಾಯಂ ಶಿಕ್ಷಕರ ಖಾಲಿ ಇದ್ದು, ಅದರಲ್ಲಿ, 650 ಅತಿಥಿ ಶಿಕ್ಷಕರ ನಿಯೋಜಿಸಿ ಮಕ್ಕಳಿಗೆ ಪಾಠ ಮಾಡಲಾಗಿದೆ. ಕಲಿಕಾ ಮಟ್ಟ ಸುಧಾರಣೆ ವಿಶೇಷ ಕ್ಲಾಸ್ ತೆಗೆದುಕೊಳ್ಳಲಾಗಿದೆ. ಆದರೂ ಫಲಿತಾಂಶ ಸುಧಾರಣೆ ಕಂಡಿಲ್ಲ. ಮಕ್ಕಳನ್ನು ಕರೆದುಕೊಂಡು ಪೋಷಕರು ವಲಸೆ ಹೋಗಿದ್ದು ಕೂಡ, ಫಲಿತಾಂಶ ಹಿನ್ನಡೆಗೆ ಕಾರಣವಾಗಿದೆ ಎಂದು ಯಾದಗಿರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.