ಆಂಜನೇಯ ಮೂರ್ತಿ ಪುನರ್‌ ಪ್ರತಿಷ್ಠಾಪನೆ

ಲೀಲಾವಿನೋದನಾದ ಪರಮಾತ್ಮನನ್ನು ಸ್ಮರಿಸುವುದು, ಭಜಿಸುವುದು ನಮೆಲ್ಲರ ಕರ್ತವ್ಯ: ವಿದ್ಯಾಕಣ್ವ ವಿರಾಜ ತೀರ್ಥರು

Team Udayavani, Mar 9, 2020, 1:03 PM IST

9-March-8

ಸುರಪುರ: ಕಣ್ವ ಶಾಖೆಯ ಶ್ರೀ ಕೃಷ್ಣಧ್ವೈ, ಪಾಯನ ತೀರ್ಥರ ಮಠದಲ್ಲಿ ರವಿವಾರ ಶ್ರೀ ಕೃಷ್ಣಧ್ವೈಪಾಯನ ತೀರ್ಥರ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ಜರುಗಿತು.

ಹುಣಸಿಹೊಳೆ ಕಣ್ವ ಮಠದ ವಿದ್ಯಾಕಣ್ವ ವಿರಾಜ ತೀರ್ಥರ ಸನ್ನಿಧಾನದಲ್ಲಿ ಬೆಳಗ್ಗೆ ಸುಪ್ರಭಾತ, ನೈರ್ಮಾಲ್ಯ ವಿಸರ್ಜನೆ, ಶ್ರೀ ಕೃಷ್ಣಧ್ವೈ, ಪಾಯನ ತೀರ್ಥರ ಮೂಲ ವೃಂದಾವನಕ್ಕೆ ಸಂಪ್ರೋಕ್ಷಣೆ ನಡೆಯಿತು.

ಪ್ರತಿಷ್ಠಾಪನಾಂಗ ಹೋಮದ ನಂತರ ಆಂಜನೇಯ ಮೂರ್ತಿಗೆ ಪುನರ್‌ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ಯತಿಗಳು ವಿಠ್ಠಲ ಕೃಷ್ಣನ ಪೂಜೆಯೊಂದಿಗೆ ಸಂಸ್ಥಾನ ದೇವರ ಪೂಜೆ ಕೈಗೊಂಡರು. ನಂತರ ಪ್ರಸಾದ ವಿತರಿಸಲಾಯಿತು.

ಈ ವೇಳೆ ವಿದ್ಯಾಕಣ್ವ ವಿರಾಜ ತೀರ್ಥರು ಧರ್ಮ ಸಂದೇಶ ನೀಡಿ, ಸೃಷ್ಟಿಯಲ್ಲಿನ ಮಾನವನ ಕಲ್ಯಾಣಕ್ಕಗಿಯೇ ಭಗವಂತ ಪ್ರಕೃತಿಯನ್ನು ವರವಾಗಿ ಕರುಣಿಸಿದ್ದಾನೆ. ಸಾಕ್ಷಾತ್‌ ಸಂಘರ್ಷಣ ಸ್ವರೂಪಿಯಾಗಿ ಅವತರಿಸಿ ಬ್ರಹ್ಮಾಂಡವನ್ನೇ ಸೃಷ್ಟಿಸಿದ್ದಾನೆ. ತಾನು ಕೂಡ ಹಲವಾರು ರೂಪ ತಾಳಿ ನಮಗೆ ಬೇಕಾಗಿದ್ದನ್ನೆಲ್ಲ ನೀಡಿದ್ದಾನೆ. ಅಂತ್ಯದಲ್ಲಿ ಕಾಲ ಸ್ವರೂಪನಾಗಿ ನಮ್ಮನ್ನು ಬೀಜ ರೂಪದಲ್ಲಿ ಐಕ್ಯ ಮಾಡಿಕೊಳ್ಳುತ್ತಾನೆ. ಇಂತಹ ಲೀಲಾ ವಿನೋಧನಾದ ಪರಮಾತ್ಮನನ್ನು ಸ್ಮರಿಸುವುದು, ಭಜಿಸುವುದು ನಮೆಲ್ಲರ ಕರ್ತವ್ಯವಾಗಿದೆ ಎಂದರು.

ಕಾಲಚಕ್ರದಲ್ಲಿ ಮಾನವ ಸೃಷ್ಟಿ ಒಂದು ಭಾಗವಾಗಿದೆ. ಹಲವು ಜೀವರಾಶಿಗಳಲ್ಲಿ ಶ್ರೇಷ್ಠ ಜೀವಿಯಾಗಿರುವ ಮನುಷ್ಯ ದೇವ ಋಣ, ಋಷಿ, ಪಿತೃ ಋಣಗಳಿಗೆ ಭಾದ್ಯನಾಗುತ್ತಾನೆ. ಪಿತೃ ಋಣವನ್ನು ಸೇವೆ, ಋಷಿ ಋಣವನ್ನು ಸಂಧ್ಯಾವಂದನ, ದೇವ ಋಣವನ್ನು ಪೂಜಾ ವಿಧಾನದಿಂದ ತೀರಿಸಬೇಕಾಗುತ್ತದೆ. ಕಾರಣ ಪ್ರತಿಯೊಬ್ಬರು ಈ ಮೂರು ಋಣಗಳನ್ನು ತೀರಿಸಿ ಮೋಕ್ಷ ಮಾರ್ಗ ಕಂಡುಕೊಳ್ಳಬೇಕು ಎಂದು ಸಂದೇಶ ನೀಡಿದರು. ಬ್ರಾಹ್ಮಣ ಸಮಾಜದ ಪ್ರಮುಖರಾದ ಭೀಮಸೇನಾಚಾರ್ಯ ಜೋಶಿ ಮಂಗಳೂರ, ರಾಘವೇಂದ್ರಾಚಾರ್ಯ ರಾಜಪುರೋಹಿತ, ಮಲ್ಹಾರಾವ್‌ ಸಿಂದಗೇರಿ, ರಾಘವೇಂದ್ರಚಾರ್ಯ ಹಳ್ಳದ, ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ, ವೆಂಕಟೇಶ ನಾಗರಾಳ, ಚಂದ್ರಕಾಂತ ನಾಡಗೌಡ, ಶ್ರೀನಿವಾಸ ಸಿಂಧಗೇರಿ, ಮಲ್ಹಾರಾವ್‌ ಪಠವಾರಿ, ಕೃಷ್ಣಾ ದೇವರು, ಲಕ್ಷ್ಮೀಕಾಂತ ಅಮ್ಮಾಪುರ, ರಾಘವೇಂದ್ರಾಚಾರ್ಯ ಭಕ್ರಿ, ಪ್ರಕಾಶ ವಕೀಲ, ಗೋಪಾಲರಾವ್‌ ಅಗ್ನಿಹೋತ್ರಿ, ಶ್ರೀನಿವಾಸ ದೇವಡಿ, ಗಂಗಾಧರ ಜೋಶಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಬಸ್ ಪಲ್ಟಿ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadgir: ಬಸ್ ಅಪಘಾತ… ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಚನ್ನಾರೆಡ್ಡಿ ತುನ್ನೂರ್

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

Yadagiri: ಪಲ್ಟಿಯಾದ ಬಸ್; ಪ್ರಯಾಣಿಕರು ಪ್ರಾಣಪಾಯದಿಂದ ಪಾರು

13-yadgiri

Yadgir: ಬೈಕ್‌ -ಬಸ್‌ ಭೀಕರ ಅಪಘಾತ‌; ಮೂವರು ಮಕ್ಕಳು ಸೇರಿ ಬೈಕ್‌ ನಲ್ಲಿದ್ದ ಐವರ ದುರ್ಮರಣ

Miscreants set fire to the idol of Goddess Mariyamma at Yadagiri

Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Yadagiri: Worm found in hostel food

Yadagiri: ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.