![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 28, 2022, 6:05 PM IST
ಯಾದಗಿರಿ: ನಾಡಪ್ರಭು ಕೆಂಪೇಗೌಡರು ನೀರಾವರಿ ಇಲ್ಲದ ಸಮಯದಲ್ಲಿ ಹಲವು ಕೆರೆ ನಿರ್ಮಿಸುವ ಮೂಲಕ ಕೃಷಿ ಮತ್ತು ಕೃಷಿ ಆದಾಯೋತ್ಪನ್ನಗಳಿಗೆ ನೆರವಾಗಿದ್ದರು ಎಂದು ಅಪರ ಜಿಲ್ಲಾಧಿ ಕಾರಿ ಶಂಕರಗೌಡ ಸೋಮನಾಳ ಹೇಳಿದರು.
ಜಿಲ್ಲಾಡಳಿತ ಭವನ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ ನಡೆದ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು. ನೀರಾವರಿ ಇಲ್ಲದ ಸಮಯದಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ಕೆರೆ ನಿರ್ಮಿಸಿ, ನೀರಾವರಿ ಕಲ್ಪಿಸಿದ ಏಕೈಕ ದೊರೆ ಕೆಂಪೇಗೌಡರು. ಹಲವು ಮುಂದಾಲೋಚನೆಯೊಂದಿಗೆ ಬೆಂಗಳೂರು ನಗರ ನಿರ್ಮಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಬೆಂಗಳೂರು ವ್ಯಾಪ್ತಿಯಲ್ಲಿ ನಾಲ್ಕು ಗೋಪುರ ಹಾಗೂ ಗಡಿಗಳನ್ನು ಗುರುತಿಸಿ ಬೆಂಗಳೂರು ನಗರ ಸುಂದರವನ್ನಾಗಿಸಿದರು ಎಂದು ಹೇಳಿದರು.
ಸರ್ಕಾರಿ ಮಹಾವಿದ್ಯಾಲಯ ಪ್ರಾಂಶುಪಾಲರಾದ ಸುಭಾಶ್ಚಂದ್ರ ಕೌಲಗಿ ಮಾತನಾಡಿ, ಕೆಂಪೇಗೌಡರು ಜನ ಮೆಚ್ಚುಗೆ ಹಾಗೂ ಲೋಕಕಲ್ಯಾಣ ಕಾರ್ಯಗಳಿಂದ ಪ್ರಸಿದ್ಧಿ ಪಡೆದರು. ಇವರು ವಂಶಸ್ಥರು ವಿಜಯನಗರ ಅರಸರ ಸಾಮಂತರು ಆಗಿದ್ದರಿಂದ ಇವರು ವಿಜಯನಗರ ಮಾದರಿಯಲ್ಲಿಯೇ ನಗರ ಕಟ್ಟುವ ಕನಸು ಹೊಂದಿ, ಯಲಹಂಕ, ಯಶವಂತಪುರ, ಕೆಂಗೇರಿ, ಸೇರಿದಂತೆ ನಾಲ್ಕು ಕಡೆ ಗೋಪುರ ನಿರ್ಮಿಸಿದ್ದರು. ವೈಜ್ಞಾನಿಕ ಮಾದರಿಯಲ್ಲಿ ನಗರ ಹಾಗೂ ಕೆರೆ ನಿರ್ಮಿಸಿ ಕೃಷಿ ಹಾಗೂ ಕೃಷಿ ಆದಾಯ ಉತ್ಪನ್ನಕ್ಕೆ ನೆರವಾದ ದೊರೆಯಾಗಿದ್ದಾರೆ. ಕೆಂಪೇಗೌಡರ ತ್ಯಾಗ- ಬಲಿದಾನ ಸ್ಮರಣೀಯ ಎಂದರು.
ಈ ವೇಳೆ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಪಂ ಸಿಇಒ ಅಮರೇಶ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಇದ್ದರು. ಭಾಗ್ಯಶ್ರೀ ತಂಡದವರು ಪ್ರಾರ್ಥಿಸಿದರು. ಗುರು ಪ್ರಸಾದ ವೈದ್ಯ ನಿರೂಪಿಸಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.