Yadagiri: ಶಿಕ್ಷಕರ ಬಡ್ತಿ ತಡೆ ವಿಚಾರದಲ್ಲಿ ಹೊರಡಿಸಿದ್ದ ಆದೇಶ ಹಿಂಪಡೆದ ಸಿಇಓ


Team Udayavani, Jun 28, 2024, 4:09 PM IST

Yadagiri CEO withdrew the order issued in the matter of blocking the promotion of teachers

ಯಾದಗಿರಿ: ಜಿಲ್ಲೆಯ ಶಿಕ್ಷಕರ ಬಡ್ತಿ ತಡೆಗೆ ಯಾದಗಿರಿ ಜಿ.ಪಂ ಸಿಇಓ ಆದೇಶ ನೀಡಿದ್ದು ತರುವಾಯ ಶಿಕ್ಷಕರ ಭಾರಿ ವಿರೋಧದ ಕೂಗಿನ ಹಿನ್ನೆಲೆಯಲ್ಲಿ ಆದೇಶ ನೀಡಿದ ಮೂರು ದಿನಗಳಲ್ಲಿಯೇ ಹಿಂಪಡೆದ ಪ್ರಸಂಗ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕರ ಬಡ್ತಿ ತಡೆಗೆ ಆದೇಶಿಸಿದ್ದು ಅವರೇ, ಇದೀಗ ಆದೇಶ ಹಿಂಪಡೆದದ್ದು ಅವರೇ ಎಂಬುದು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.

2023-24ನೇ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆ ರಾಜ್ಯದಲ್ಲಿಯೇ ಕೊನೆಯ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸದ ಅನುದಾನಿತ ಹಾಗೂ ಸರಕಾರಿ ಶಿಕ್ಷಕರ ಬಡ್ತಿಗೆ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಓ ಗರೀಮಾ ಪನ್ವಾರ್ ಅವರು ತಡೆ ಹಿಡಿದು ಜೂ.24 ರಂದು ಆದೇಶ ಹೊರಡಿಸಿದ್ದರು.

ಆದೇಶ ಹೊರಡಿಸಿದ ಬೆನ್ನಲ್ಲೆ ಜಿಲ್ಲೆಯಲ್ಲಿ ಅನೇಕರ ಅಪಸ್ವರ ಕೇಳಿಬಂತು, ಶಿಕ್ಷಕರ ಸಂಘದ ಆದಿಯಾಗಿ, ಜನ ಪ್ರತಿನಿಧಿಗಳು ಸಹ ಆದೇಶವನ್ನು ತಡೆ ಹಿಡಿಯುವಲ್ಲಿ ಅಪಾರ ಒತ್ತಡ ಹಾಕಿದ್ದರು ಎನ್ನಲಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾಗೂ ಫಲಿತಾಂಶದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕೆ ಹೊರತು, ಈ ರೀತಿ ಶಿಕ್ಷಕರ ಬಡ್ತಿಯ ಭವಿಷ್ಯದ ಮೇಲೆ ಬರೆ ಎಳೆಯುವುದು ಸರಿಯಲ್ಲ ಎಂದು ಪ್ರೌಢಶಾಲಾ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಕೆಂಭಾವಿ ಅವರು ದೂರಿದ್ದಾರೆ.

ಅನೇಕರ ವಿರೋಧದ ನಡುವೆ ಇದೀಗ ಜಿ.ಪಂ ಸಿಇಓ ಅವರು ತಾವು ಹೊರಡಿಸಿದ್ದ ಆದೇಶವನ್ನೇ ಕೇವಲ ಮೂರು ದಿನಗಳಲ್ಲಿ ಅಂದರೆ ಜೂ.27ರಂದು ಹಿಂಪಡೆದು, ಭುಗಿಲೆದ್ದ ಶಿಕ್ಷಕರ ಆತಂಕವನ್ನು ತಣ್ಣಗಾಗಿಸಿದ್ದಾರೆ. ಮೊದಲು ಆದೇಶ ಹೊರಡಿಸಿದವರು ಅವರೇ, ಇದೀಗ ಒತ್ತಡದ ನಡುವೆ ಆದೇಶವನ್ನು ಹಿಂಪಡೆದವರೂ ಸಹ ಅವರೇ ಆಗಿರುವ ಸಿಇಓ ಅವರ ನಡೆ ಎರಡು ದೋಣಿಯ ಮೇಲೆ ಕಾಲಿಟ್ಟಂತಾಗಿದೆ.

ಇಡೀ ಜಿಲ್ಲೆಯ ಶಿಕ್ಷಕರ ಬಡ್ತಿಯ ತಡೆಗೆ ಆದೇಶ ನೀಡುವ ಮೊದಲು ಕೊಂಚ ಯೋಚಿಸಬೇಕಿತ್ತು ಎನ್ನುವ ಮಾತುಗಳು ಶಿಕ್ಷಕರ ವಲಯದಲ್ಲಿ ಕೇಳಿಬಂದಿದ್ದು, ಮಕ್ಕಳ ಭವಿಷ್ಯದ ಏಳಿಗೆಯಲ್ಲಿ ಶಿಕ್ಷಕರ ಪಾಲು ಹಾಗೂ ಪ್ರಯತ್ನ ಎರಡೂ ಇದ್ದೇ ಇರುತ್ತವೆ ಎಂದು ಶಿಕ್ಷಕರೊಬ್ಬರು ಕಳವಳ ವ್ಯಕ್ತಪಡಿಸಿದರು.

ಶಿಕ್ಷಕರ ಬಡ್ತಿ ತಡೆಗೆ ಆದೇಶಿಸಿದ್ದು ಶಿಕ್ಷಕರ ವಲಯದಲ್ಲಿ ನೋವುಂಟು ಮಾಡಿತ್ತು, ಮೂರು ದಿನದ ಬಳಿಕ ಸಿಇಓ ಅವರು ಆದೇಶ ಹಿಂಪಡೆದಿದ್ದು ಚಿಂತೆ ದೂರು ಮಾಡಿದೆ. ಬಡ್ತಿ ತಡೆಗೆ ಆದೇಶ ನೀಡಿದ ಬೆನ್ನಲ್ಲೆ ಜಿಲ್ಲೆಯ ಪ್ರತಿನಿಧಿಗಳು ಸೇರಿದಂತೆ ಅನೇಕ ಪ್ರಜ್ಞಾವಂತರು ವಿರೋಧಿಸಿ, ಶಿಕ್ಷಕರ ಬೆನ್ನಿಗೆ ನಿಂತಿರುವುದು ಸಂತಸದ ಜೊತೆಗೆ ನಿರುಮ್ಮಳತೆ ಉಂಟಾಗಿದೆ. ಮುಂದಿನ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪ್ರಯತ್ನ ಮುಂದುವರೆಯಲಿದೆ ಎಂದು ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಕೆಂಭಾವಿ ಹೇಳಿದರು.

ಪತ್ರ ಬರೆದ ನಮೋಶಿ: ಯಾದಗಿರಿ ಜಿಲ್ಲೆಯ ಶಿಕ್ಷಕರ ವಾರ್ಷಿಕ ಬಡ್ತಿಯನ್ನು ತಡೆ ಹಿಡಿಯುವಂತೆ ಸಿಇಓ ಅವರ ಆದೇಶವನ್ನು ರದ್ದು ಪಡಿಸಬೇಕೆಂದು ವಿಧಾನ ಪರಿಷತ್ತಿನ ಸದಸ್ಯರಾದ ಶಶೀಲ್ ಜಿ. ನಮೋಶಿ ಅವರು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಿತೇಶ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಶಿಕ್ಷಕರ ಬಡ್ತಿ ವಿಚಾರದಲ್ಲಿ ತಡೆ ಹಿಡಿದ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದರು.

ಟಾಪ್ ನ್ಯೂಸ್

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Shahpura: ಅಲ್ಪಸಂಖ್ಯಾಕ ಬಾಲಕರ ವಸತಿ ನಿಲಯದ ಊಟದಲ್ಲಿ ಹುಳು ಪತ್ತೆ

7-hunasagi

Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು

11-

Yadagiri: ಬಾಲ್ಯ ವಿವಾಹ ವಿರುದ್ಧ ಹೋರಾಡೋಣ: ಶಾಸಕ ಕಂದಕೂರು ಕರೆ

1-sadadasd

Yadgir: ರೀಲ್ಸ್ ಮಾಡಿದ ಯುವಕನಿಗೆ ಜೀವ ಬೆದರಿಕೆ ಹಾಕಿದ ಡಿ.ಬಾಸ್ ಸಂಘದ ಜಿಲ್ಲಾಧ್ಯಕ್ಷ!

Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Shahapur ಬಿಸಿಯೂಟ ಸೇವಿಸಿ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.