Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ


Team Udayavani, Jul 18, 2024, 7:35 PM IST

Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

ಮಣಿಪಾಲ: ಮಾಹೆ ವಿ.ವಿ.ಯ ಮೊದಲ ಕುಲಪತಿ, ಹಿರಿಯ ಹೃದಯ ಶಸ್ತ್ರಚಿಕಿತ್ಸಕ, ನೇಶನಲ್‌ ಸೈನ್ಸ್‌ ರಿಸರ್ಚ್‌ ಪ್ರೊಫೆಸರ್‌ ಮತ್ತು ಶಿಕ್ಷಣ ತಜ್ಞ ಪ್ರೊ| ಡಾ| ಮಾರ್ತಾಂಡ ವರ್ಮ ಶಂಕರನ್‌ ವಲಿಯತ್ತಾನ್‌ (ಎಂ.ಎಸ್‌. ವಲಿಯತ್ತಾನ್‌) (90) ಜು. 17ರಂದು ನಿಧನ ಹೊಂದಿದರು.

ಮೃತರು ಪತ್ನಿ, ಮಣಿಪಾಲ ದಂತ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ| ಅಶೀಮಾ ವಲಿಯತ್ತಾನ್‌, ಪುತ್ರ ಅಮೆರಿಕದಲ್ಲಿರುವ ಇಎನ್‌ಟಿ ಸರ್ಜನ್‌ ಡಾ| ಮನೀಶ್‌, ಪುತ್ರಿ ಮಣಿಪಾಲದಲ್ಲಿ ಪೆಥಾಲಜಿ ವಿಭಾಗದ ಪ್ರಾಧ್ಯಾಪಕಿಯಾಗಿದ್ದ ಡಾ| ಮನ್ನಾ ವಲಿಯತ್ತಾನ್‌ ಅವರನ್ನು ಅಗಲಿದ್ದಾರೆ.

ಮೂಲತಃ ಕೇರಳದ ಆಲೆಪ್ಪಿ ಜಿಲ್ಲೆಯ ಮಾವೆಲಿಕ್ಕರದಲ್ಲಿ ಜನಿಸಿದ ವಲಿಯತ್ತಾನ್‌ ಅವರು ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಶಾಲೆಯಲ್ಲಿ ಪಡೆದಿದ್ದರು. ಅವರು ತಿರುವನಂತಪುರದ ವೈದ್ಯಕೀಯ ಕಾಲೇಜಿನ ಮೊದಲ ಬ್ಯಾಚ್‌ನ ಹೆಮ್ಮೆಯ ಹಳೆಯ ವಿದ್ಯಾರ್ಥಿಯಾಗಿದ್ದರು. ಬಳಿಕ ರಾಯಲ್‌ ಕಾಲೇಜ್‌ ಆಫ್‌ ಸರ್ಜನ್ಸ್ ಆಫ್‌ ಎಡಿನ್‌ ಬರ್ಗ್‌ ಇಂಗ್ಲೆಂಡ್‌ ಮತ್ತು ಕೆನಡಾದಿಂದ ಫೆಲೋಶಿಪ್‌ನಲ್ಲಿ ಉನ್ನತಾಧ್ಯಯನ ನಡೆಸಿ ಎಫ್ಆರ್‌ಸಿಎಸ್‌, ಎಂಎಸ್‌ ಪದವಿಯನ್ನು ಉತ್ತಮ ಅಂಕಗಳೊಂದಿಗೆ ಗಳಿಸಿದ್ದರು.

ಸಂಶೋಧಕರಾಗಿ ಅವರು ತಿರುವನಂತಪುರದಲ್ಲಿ ಶ್ರೀ ಚಿತ್ರ ತಿರುನಾಳ್‌ ಸಂಸ್ಥೆಯನ್ನು ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 20 ವರ್ಷಗಳ ಕಾಲ ಹೃದಯ ಶಸ್ತ್ರಚಿಕಿತ್ಸೆಯ ಪ್ರಾಧ್ಯಾಪಕರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿ ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದರು. ಡಿನ್ಪೋಸಬಲ್‌ ಬ್ಲಡ್‌ ಬ್ಯಾಗ್‌ ಮತ್ತು ಟಿಲ್ಟಿಂಗ್‌ ಡಿಸ್ಕ್ ಹೃದಯ ಕವಾಟದಂತಹ ವೈದ್ಯಕೀಯ ಸಾಧನಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭಾರತದ ವೈದ್ಯಕೀಯ ಸಾಧನಗಳ ಉದ್ಯಮಕ್ಕೆ ಅಡಿಪಾಯವನ್ನು ಹಾಕಿದ್ದರು. ಇದಕ್ಕೆ ಅವರು ಸೇವೆ ಸಲ್ಲಿಸಿದ್ದ ಸಂಸ್ಥೆಯ ಹೆಸರನ್ನೇ (ಚಿತ್ರ ಮೈಟ್ರಲ್‌ ವಾಲ್ವ್) ಇಟ್ಟಿದ್ದರು. ಇದಕ್ಕೂ ಮೊದಲು ಡಾ|ವಲಿಯತ್ತಾನ್‌ ಅವರು ಚಂಡೀಗಢದ ಪಿಜಿಐಎಂಇಆರ್‌ನಲ್ಲಿ ಪ್ರಾಧ್ಯಾಪಕರಾಗಿದ್ದರು. ವೈದ್ಯ ಪರಿಣತರಾದ ವಲಿಯತ್ತಾನ್‌ ಅವರು ಚೆನ್ನೈ ಐಐಟಿಯಲ್ಲಿ ಕ್ವಾಂಟಿಟೇಟಿವ್‌ ಫಿಸಿಯಾಲಜಿ ಆ್ಯಂಡ್‌ ಬಯೋಮೆಟೀರಿಯಲ್ಸ್‌ ವಿಷಯದಲ್ಲಿ ಪ್ರಾಧ್ಯಾಪಕರಾಗಿ ಕೆಲವು ಕಾಲ ಸೇವೆ ಸಲ್ಲಿಸಿದ್ದರು. ಇವರು ವೈದ್ಯಕೀಯದೊಂದಿಗೆ ಎಂಜಿನಿಯರಿಂಗ್‌, ಆಯುರ್ವೇದ, ಸಂಸ್ಕೃತ ಜ್ಞಾನವನ್ನೂ ಹೊಂದಿ ನಿಜಾರ್ಥದಲ್ಲಿ ವಿದ್ವಾಂಸರಾಗಿದ್ದರು. ವಲಿಯತ್ತಾನ್‌ ಮೂರು ಎಫ್ಆರ್‌ಸಿಎಸ್‌, ಎಂಎಸ್‌ ಪದವಿಯನ್ನು ಹೊಂದಿದ್ದರು.

ಮಾಹೆಯ ಮೊದಲ ಕುಲಪತಿ
ಪ್ರೊ| ವಲಿಯತ್ತಾನ್‌ ಅವರು 1993 ರಿಂದ ಮಣಿಪಾಲದ ಮಾಹೆ ವಿ.ವಿ. ಯ ಮೊದಲ ಕುಲಪತಿಯಾಗಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯಲ್ಲಿ ಮಾಹೆ ಶೈಕ್ಷಣಿಕ ದಾಪುಗಾಲು ಇರಿಸಿತು. ಉನ್ನತ ಶಿಕ್ಷಣದಲ್ಲಿ ಮತ್ತು ಸಂಶೋಧನಾ ವಲಯದಲ್ಲಿ ಗಣನೀಯವಾದ ಸಾಧನೆ ನಡೆಯಿತು. ಸಂಸ್ಥೆಯ ಜಾಗತಿಕ ಖ್ಯಾತಿಯನ್ನು ಹೆಚ್ಚಿಸುವ ಮೂಲಕ ಅಂತರ್‌ಶಿಸ್ತೀಯ ಸಹಯೋಗ ಮತ್ತು ಅಂತಾರಾಷ್ಟ್ರೀಯ ಸಹಭಾಗಿತ್ವವನ್ನು ಪ್ರೋತ್ಸಾಹಿಸುವ ಪರಿಸರವನ್ನು ಬೆಳೆಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಮಾಹೆಯನ್ನು ವಿಶ್ವದರ್ಜೆಯ ವಿಶ್ವವಿದ್ಯಾನಿಲಯವನ್ನಾಗಿ ಪರಿವರ್ತಿಸುವಲ್ಲಿ, ಜಗತ್ತಿನ ವಿವಿಧ ದೇಶಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಆಕರ್ಷಿಸುವಲ್ಲಿ ಮತ್ತು ಭಾರತ ಮತ್ತು ವಿಶ್ವಾದ್ಯಂತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸುವಲ್ಲಿ ಅವರ ದೃಷ್ಟಿ ಮತ್ತು ಸಮರ್ಪಣೆ ಪ್ರಮುಖವಾಗಿದೆ.

ಆಯುರ್ವೇದ ಸಂಶೋಧನೆ
ನಿವೃತ್ತಿಯ ಅನಂತರ ಆಯುರ್ವೇದಾಚಾರ್ಯರುಗಳಾದ ಸುಶ್ರುತ, ಚರಕ, ವಾಗ್ಭಟರ ಗ್ರಂಥಗಳನ್ನು ದೀರ್ಘ‌ ಕಾಲ ಅಭ್ಯಸಿಸಿ ಇಂಗ್ಲಿಷ್‌ಗೆ ಭಾಷಾಂತರಿಸಿದ್ದರು. ಇದಕ್ಕಾಗಿ ಕೇರಳದ ಕೋಟಕ್ಕಲ್‌ ಆರ್ಯವೈದ್ಯ ಶಾಲಾ, ಬನಾರಸ್‌ ಹಿಂದೂ ವಿ.ವಿ.ಗಳಿಗೆ ಭೇಟಿ ನೀಡಿ ಗ್ರಂಥಗಳನ್ನು ಸಂಪಾದಿಸಿದ್ದರು. ಕೊರೊನಾ ಕಾಲಘಟ್ಟದಲ್ಲಿ “ಆಯುರ್ವೇದ ಇನ್‌ಹೆರಿಟೆನ್ಸ್‌ ಆಫ್ ಇಂಡಿಯ’ ವಿಷಯ ಕುರಿತು ವೀಡಿಯೋ ಉಪನ್ಯಾಸಗಳನ್ನು ನೀಡಿದ್ದರು. ಉಪನ್ಯಾಸ ಮಾಲಿಕೆಯನ್ನು ಮಣಿಪಾಲ್‌ ಯುನಿವರ್ಸಲ್‌ ಪ್ರೆಸ್ ಪುಸ್ತಕ ರೂಪದಲ್ಲಿ 2017ರಲ್ಲಿ ಹೊರತಂದಿತ್ತು. ಕುಲಪತಿಯಾಗಿ ನಿವೃತ್ತಿಯಾಗಿದ್ದರೂ ಮೂಲವಿಜ್ಞಾನದಲ್ಲಿ ಸಂಶೋಧನೆಗಳನ್ನು ನಡೆಸುತ್ತಿದ್ದ ಕಾರಣ ಮಾಹೆಯು ಅವರಿಗೆ ಪ್ರತ್ಯೇಕ ಕಚೇರಿಯನ್ನೂ ಒದಗಿಸಿತ್ತು. ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿ.,ನ ನಿರ್ದೇಶಕರಲ್ಲಿ ಒಬ್ಬರಾಗಿಯೂ ಸೇವೆ ಸಲ್ಲಿಸಿದ್ದರು.

ಓದು- ನಡಿಗೆಯಲ್ಲಿ ಮಾದರಿ
ಅವರು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಏನನ್ನು ಓದಿದ್ದರೋ, ಏನನ್ನು ಪ್ರತಿಪಾದಿಸುತ್ತಿದ್ದರೋ ಅದನ್ನು ಜೀವನದಲ್ಲಿಯೂ ಅಳವಡಿಸಿಕೊಂಡಿದ್ದರು. ಕೇವಲ ಮೂರು ತಿಂಗಳ ಹಿಂದಿನವರೆಗೂ ಮನೆಯೊಳಗೇ 6ರಿಂದ 9 ಕಿ.ಮೀ.ನಷ್ಟು ನಡೆಯುತ್ತಿದ್ದರು. ಆರು ತಿಂಗಳ ಹಿಂದಿನವರೆಗೂ ದಿನಕ್ಕೆ ಐದಾರು ತಾಸು ಓದುತ್ತಿದ್ದರು. ಕೊನೆಯವರೆಗೂ ಆರೋಗ್ಯಪೂರ್ಣವಾಗಿ ಇರಬೇಕೆಂದು ಅವರು ಆಶಿಸುತ್ತಿದ್ದರು.

ಶ್ರೀಕೃಷ್ಣನ ನಾಡಿನಿಂದ ಕೃಷ್ಣನ ನಾಡಿಗೆ
“ನಾನು ಹುಟ್ಟಿ ಬೆಳೆದ ಊರು ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಸಮೀಪ. ನಾನು ಮಣಿಪಾಲಕ್ಕೆ ಬಂದದ್ದೇ ಆಕಸ್ಮಿಕ. ಮಣಿಪಾಲ ವಿ.ವಿ. ಕುಲಾಧಿಪತಿ ಡಾ|ರಾಮದಾಸ್‌ ಎಂ. ಪೈಯವರು ದಿಲ್ಲಿಗೆ ಹೋಗುವಾಗ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಪ್ರಸ್ತಾವಿತ ವಿ.ವಿ.ಗೆ ಕುಲಪತಿಯಾಗಿ ಬರಲು ಹೇಳಿದರು.

ನಿವೃತ್ತಿಯಾದ ಬಳಿಕ ಇಲ್ಲಿಂದ ಹೋಗಬೇಕೆಂದುಕೊಂಡಿದ್ದೆ. ಆದರೆ ಇಲ್ಲಿಯೂ ಶ್ರೀಕೃಷ್ಣನ ಸನ್ನಿಧಿ ಸಮೀಪವೇ ಇರುವಂತೆ ಆಯಿತು’ ಎಂದು ವಲಿಯತ್ತಾನ್‌ ಹೇಳುತ್ತಿದ್ದರು. ಕೊನೆಗೂ ಅವರು ಪ್ರಥಮನ ಏಕಾದಶಿಯಂದೇ ಇಹಲೋಕ ತ್ಯಜಿಸಿದರು.

ಉನ್ನತ ಪುರಸ್ಕಾರಗಳು
ಪ್ರೊ| ವಲಿಯತ್ತಾನ್‌ ಅವರು ತಮ್ಮ ವೃತ್ತಿ ಜೀವನದುದ್ದಕ್ಕೂ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ, ಪುರಸ್ಕಾರಕ್ಕೆ ಭಾಜನರಾದರು. ಪದ್ಮವಿಭೂಷಣ (2005), ಪದ್ಮಶ್ರೀ (2002), ಡಾ| ಬಿ. ಸಿ. ರಾಯ್‌ ರಾಷ್ಟ್ರೀಯ ಪ್ರಶಸ್ತಿ, ಇಂಗ್ಲೆಂಡ್‌ನ‌ ರಾಯಲ್‌ ಕಾಲೇಜ್‌ ಆಫ್‌ ಸರ್ಜನ್ಸ್‌ನ ಹಂಟೇರಿಯನ್‌ ಪ್ರೊಫೆಸರ್‌ಶಿಪ್‌, ಫ್ರೆಂಚ್‌ ಸರಕಾರದಿಂದ ಚೆವಲಿಯರ್‌ ಆಫ್‌ ದಿ ಆರ್ಡರ್‌ ಆಫ್‌ ಪಾಮ್ಸ್ ಅಕಾಡೆಮಿಕ್ಸ್, ಜಾನ್ಸ್‌ ಹಾಪ್ಕಿನ್ಸ್ ವಿಶ್ವವಿದ್ಯಾಲಯದಿಂದ ಅಂತಾರಾಷ್ಟ್ರೀಯ ವೈದ್ಯಕೀಯ ಶಿಕ್ಷಣಕ್ಕಾಗಿ ಡಾ| ಸ್ಯಾಮ್ಯುಯೆಲ್‌ ಪಿ. ಆಸ್ಪರ್‌ ಪ್ರಶಸ್ತಿ ಮತ್ತು ಭಾರತೀಯ ವೈದ್ಯಕೀಯ ಸಂಘದಿಂದ ಜೀವಮಾನ ಸಾಧನೆ ಪ್ರಶಸ್ತಿಯನ್ನು ಗಳಿಸಿದರು. ವಲಿಯತ್ತಾನ್‌ ಅವರ ಅಂತ್ಯಕ್ರಿಯೆ ಜು. 18ರಂದು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ನಡೆಯಿತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.