Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ


Team Udayavani, Apr 17, 2024, 7:55 AM IST

5-ginger

ನೀವು ಪ್ರತೀದಿನ ಶುಂಠಿಯನ್ನು ಸೇವಿಸುವ ಆಲೋಚನೆಯನ್ನು ಹೊಂದಿರುವಿರಾ?

ಹಣ್ಣು ಹಂಪಲುಗಳು ಮತ್ತು ತರಕಾರಿಗಳು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಅತ್ಯಗತ್ಯ ಎಂಬುದು ನಮಗೆ ತಿಳಿದಿದೆ. ವಿವಿಧ ನೈಸರ್ಗಿಕ ಬಣ್ಣಗಳನ್ನು ಹೊಂದಿರುವ ಇಂತಹ ಹಣ್ಣು, ತರಕಾರಿ, ಸೊಪ್ಪು ತರಕಾರಿಗಳನ್ನು ದಿನದಲ್ಲಿ ಹಲವು ಬಾರಿ ಸೇವಿಸುವುದು ನಮ್ಮ ಆರೋಗ್ಯಕ್ಕೆ ಅತ್ಯುತ್ತಮ ಎಂಬುದು ನಮಗೆ ಗೊತ್ತಿದೆ. ಆದರೆ ಕೆಲವು ಮಸಾಲೆ ವಸ್ತುಗಳು ಕೂಡ ಆರೋಗ್ಯಕ್ಕೆ ಉಪಕಾರಿ ಎಂಬುದು ಎಷ್ಟು ಜನರಿಗೆ ತಿಳಿದಿದೆ?

ಉದಾಹರಣೆಗೆ ಶುಂಠಿಯನ್ನೇ ತೆಗೆದುಕೊಳ್ಳಿ. ಪ್ರತೀ ದಿನವೂ ನಾವು ಶುಂಠಿಯನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಅಪಾರ ಲಾಭಗಳಿವೆ. ನಮ್ಮ ದೇಹ ಮತ್ತು ಮೆದುಳಿಗೆ ಶಕ್ತಿಯುತ ಪ್ರಯೋಜನಗಳನ್ನು ಒದಗಿಸುವ ಅನೇಕ ಪೌಷ್ಟಿಕಾಂಶಗಳು ಶುಂಠಿಯಲ್ಲಿವೆ.

“ಸೂಪರ್‌ ಫ‌ುಡ್‌’ ಎಂದು ವರ್ಣಿಸಬಹುದಾದ ಅಪೂರ್ವ ಆಹಾರವಸ್ತುಗಳಲ್ಲಿ ಶುಂಠಿಯೂ ಒಂದು. ನಮ್ಮ ಆರೋಗ್ಯದ ವಿಚಾರದಲ್ಲಿ ಅನೇಕ ಪವಾಡಗಳನ್ನು ಉಂಟು ಮಾಡಬಹುದಾದ ಸೂಪರ್‌ಫ‌ುಡ್‌ ಇದು. ಶುಂಠಿಯು ತೀಕ್ಷ್ಣವಾದ ರುಚಿ ಮತ್ತು ಅನೇಕ ಔಷಧೀಯ ಮೌಲ್ಯಗಳನ್ನು ಹೊಂದಿರುವ ಸಂಬಾರವಸ್ತು. ಶತಮಾನಗಳ ಹಿಂದೆ ಎಲ್ಲ ಬಗೆಯ ಅನಾರೋಗ್ಯಗಳನ್ನು ಗುಣಪಡಿಸಲು ಶುಂಠಿಯನ್ನು ಉಪಯೋಗಿಸಲಾಗುತ್ತಿತ್ತು.

ಇದರ ಜತೆಗೆ ಶುಂಠಿಯನ್ನು ನಿಯಮಿತವಾಗಿ ಸೇವಿಸುವುದರಿಂದಲೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು, ನಮ್ಮನ್ನು ನಾವು ಆರೋಗ್ಯಯುತವಾಗಿ ಇರಿಸಿಕೊಳ್ಳಬಹುದು. ನೀವು ಪ್ರತೀ ದಿನ ಶುಂಠಿಯನ್ನು ಸೇವಿಸುವ ಆಲೋಚನೆಯನ್ನು ಹೊಂದಿದ್ದರೆ ಅದಕ್ಕೆ ನಮ್ಮ ಪ್ರೋತ್ಸಾಹವಿದೆ. ಪ್ರತೀದಿನ ಶುಂಠಿಯನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಲಾಭಗಳಿವೆ.

ಗಮನಿಸಿ: ಪ್ರತೀದಿನ ಒಂದು ತುಂಡು ಶುಂಠಿಯನ್ನೇ ಸೇವಿಸಬೇಕೆಂದೇನಿಲ್ಲ. ಶುಂಠಿಯನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಅಥವಾ ಜಜ್ಜಿ ಜ್ಯೂಸ್‌, ಚಹಾ ಅಥವಾ ಇತರ ಖಾದ್ಯ ಪದಾರ್ಥಗಳ ಜತೆಗೆ ಸೇರಿಸಿ ಸೇವಿಸಬಹುದು. ಇಂತಹ ಶುಂಠಿ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳನ್ನು ಉಂಟು ಮಾಡುತ್ತದೆ ಎಂಬುದನ್ನು ಗಮನಿಸೋಣ. ­

ಉರಿಯೂತ ನಿವಾರಕ (ಆ್ಯಂಟಿ ಇನ್‌ಫ್ಲಮೇಟರಿ): ಶುಂಠಿಯ ಪರಿಣಾಮದಿಂದಾಗಿ ದೇಹದ ಯಾವುದೇ ಭಾಗದಲ್ಲಿ ಉಂಟಾಗಿರುವ ಉರಿಯೂತವು ಕಡಿಮೆಯಾಗುತ್ತದೆ. ­

ವಾಕರಿಕೆ ಮಾಯವಾಗುತ್ತದೆ: ಕೆಲವೊಮ್ಮೆ ನಿಮಗೆ ಬೆಳಗ್ಗೆ ವಾಕರಿಕೆಯ ಅನುಭವ ಆಗುತ್ತಿದೆಯೇ? ಪ್ರತೀ ದಿನ ಶುಂಠಿಯನ್ನು ಸೇವಿಸುವುದರಿಂದ ಇದು ನಿವಾರಣೆಯಾಗುತ್ತದೆ. ವಿಶೇಷವಾಗಿ ಗರ್ಭಿಣಿಯರು ಮತ್ತು ಕಿಮೊಥೆರಪಿಗೆ ಒಳಗಾಗುತ್ತಿರುವವರು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ.

 ಸ್ನಾಯು ನೋವು ಕಡಿಮೆಯಾಗುತ್ತದೆ: ನಿಮಗೆ ಸ್ನಾಯು ನೋವು ಅಥವಾ ಕಾಲುಗಳಲ್ಲಿ ನೋವು ಇದೆಯೇ? ಶುಂಠಿಯನ್ನು ಸೇವಿಸುವುದರಿಂದ ಇದು ಕಡಿಮೆಯಾಗಬಲ್ಲುದು. ಪ್ರತೀ ದಿನ ಶುಂಠಿಯನ್ನು ಸೇವಿಸುವುದರಿಂದ ಸ್ನಾಯು ನೋವು ಕ್ರಮೇಣ ಕಡಿಮೆಯಾಗುತ್ತದೆ. ­

ಮಲ ವಿಸರ್ಜನೆಗೆ ಸಹಾಯ ಮಾಡುತ್ತದೆ: ಪ್ರತೀ ದಿನ ಶುಂಠಿ ಸೇವನೆಯಿಂದ ಮಲ ವಿಸರ್ಜನೆಗೆ ಸಹಾಯವಾಗುತ್ತದೆ. ನೀವು ಆಗಾಗ ಮಲಬದ್ಧತೆಯನ್ನು ಅನುಭವಿಸುತ್ತಿರುವಿರಾ? ಹಾಗಾದರೆ ಶುಂಠಿಯಿಂದ ನಿಮಗೆ ಸಹಾಯವಾಗಬಹುದು. ­

ಅಜೀರ್ಣವನ್ನು ನಿವಾರಿಸುತ್ತದೆ: ನಿಮಗೆ ದೀರ್ಘ‌ಕಾಲೀನ ಅಜೀರ್ಣವಿದ್ದರೆ ಶುಂಠಿಯಿಂದ ನಿಮಗೆ ಉಪಶಮನ ಸಿಗಬಹುದಾಗಿದೆ. ಊಟ-ಉಪಾಹಾರಕ್ಕೆ ಮುನ್ನ ಶುಂಠಿಯನ್ನು ಸೇವಿಸಿದರೆ ಜೀರ್ಣಾಂಗ ಬೇಗನೆ ಖಾಲಿಯಾಗುತ್ತದೆ, ಇದರಿಂದ ಆಹಾರವು ಜೀರ್ಣಾಂಗದಲ್ಲಿ ಇರುವ ಸಮಯ ಕಡಿಮೆಯಾಗುವ ಮೂಲಕ ಸಮಸ್ಯೆ ನಿವಾರಣೆಯಾಗುತ್ತದೆ. ­

ಮುಟ್ಟಿನ ನೋವಿನಿಂದ ಉಪಶಮನ: ನಿಮ್ಮ ಮುಟ್ಟಿನ ಅವಧಿಯಲ್ಲಿ ನೋವು ತೊಂದರೆ ನೀಡುತ್ತದೆಯೇ? ಇದಕ್ಕೂ ಪ್ರತೀದಿನ ಶುಂಠಿ ಸೇವಿಸುವುದರಿಂದ ಪರಿಹಾರ ಸಿಗಬಲ್ಲುದು. ಶುಂಠಿಯು ನೋವನ್ನು ಕಡಿಮೆ ಮಾಡುವ ನೋವು ನಿವಾರಕ ಗುಣವನ್ನು ಹೊಂದಿದ್ದು, ಹೊಟ್ಟೆ ನೋವು ಕಡಿಮೆಯಾಗಬಲ್ಲುದು. ­

ಕೊಲೆಸ್ಟರಾಲ್‌ ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟ ಕಡಿಮೆ ಮಾಡುತ್ತದೆ: ಒಂದು ತಿಂಗಳು ಕಾಲ ಪ್ರತೀ ದಿನ ಶುಂಠಿಯನ್ನು ಸೇವಿಸುವುದರಿಂದ ‘ಕೆಟ್ಟ’ ಕೊಲೆಸ್ಟರಾಲ್‌ ಮತ್ತು ಟ್ರೈಗ್ಲಿಸರೈಡ್‌ ಗಳು ಕಡಿಮೆಯಾಗುತ್ತವೆ.

ರೋಗ ನಿರೋಧಕ ಶಕ್ತಿಯನ್ನು ವರ್ಧಿಸುತ್ತದೆ: ಶುಂಠಿಯಲ್ಲಿರುವ ಉರಿಯೂತ ನಿವಾರಕ ಗುಣವು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಸದೃಢಗೊಳಿಸುತ್ತದೆ. ನಿಮಗೆ ಶೀತ ಬಾಧೆ ಅಥವಾ ವೈರಾಣು ಸೋಂಕು ಉಂಟಾಗಿದೆಯೇ? ಬೇಗನೆ ಗುಣಹೊಂದಲು ನಿಮಗೆ ಶುಂಠಿ ಸಹಾಯ ಮಾಡಬಹುದಾಗಿದೆ.

ನಮ್ಮನ್ನು ಆರೋಗ್ಯಯುತವಾಗಿ ಇರಿಸುವ ಆಹಾರವಸ್ತುಗಳು ನಮಗೆ ಅಗತ್ಯ. ಇಂತಹ “ಸೂಪರ್‌ ಫ‌ುಡ್‌’ಗಳಲ್ಲಿ ಶುಂಠಿಯೂ ಒಂದು.

ಸುಷ್ಮಾ ಐತಾಳ,

ಪಥ್ಯಾಹಾರ ತಜ್ಞೆ,

ಕೆಎಂಸಿ ಆಸ್ಪತ್ರೆ, ಅತ್ತಾವರ,

ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಪಥ್ಯಾಹಾರ ವಿಭಾಗ, ಕೆಎಂಸಿ, ಮಂಗಳೂರು)

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.