Health: ಬಿಸಿಲಿನ ತಾಪದಿಂದ ಆರೋಗ್ಯ ಅಪಾಯ ತಡೆಯಲು ಏನು ಮಾಡ ಬೇಕು?


Team Udayavani, Sep 9, 2024, 4:38 PM IST

19

ಹವಾಮಾನದಲ್ಲಿ ದಿನದಿಂದ ದಿನಕ್ಕೆ ಆಗುತ್ತಿರುವ ಬದಲಾವಣೆಗಳು ಮನುಷ್ಯನ ಆರೋಗ್ಯದ ಮೇಲೆ ವಿವಿಧ ರೀತಿಯ ಪರಿಣಾಮಗಳನ್ನು ಬೀರುತ್ತಿವೆ. ವಿಪರೀತ ಬಿಸಿಲಿನ ಶಾಖ ಮತ್ತು ಹೆಚ್ಚಿರುವ ತಾಪಮಾನ ಮಾನವನ ಶರೀರದ ಮೇಲೆ ವ್ಯಾಪಕವಾದ ಪರಿಣಾಮಗಳನ್ನು ಬೀರುತ್ತದೆ. ಆರೋಗ್ಯಕ್ಕೆ ಹೊಸ ತೊಂದರೆಗಳು ಅಥವಾ ಈ ಹಿಂದಿನಿಂದ ಅಸ್ತಿತ್ವದಲ್ಲಿರುವ ತೊಂದರೆಗಳನ್ನು ಹೆಚ್ಚಿಸುವ ಕೆಲಸವನ್ನು ಈ ವಿಪರೀತ ಬಿಸಿಲಿನ ಶಾಖ ಮಾಡುತ್ತದೆ. ವಿಪರೀತ ಶಾಖವು ದೇಹಕ್ಕೆ ಮಾರಕವಾಗಬಹುದು. ಈ ವರ್ಷ ದೇಶದ ವಿವಿಧ ರಾಜ್ಯ ಮತ್ತು ಪ್ರಾಂತ್ಯಗಳಿಂದ ವಿಪರೀತ ತಾಪಮಾನದ ದಾಖಲೆಗಳು ಗಮನಕ್ಕೆ ಬಂದಿವೆ.

ಇದರ ಲಕ್ಷಣಗಳು:

ವಾಂತಿ

ವೇಗವಾದ ಉಸಿರಾಟ

ವೇಗವಾದ ಹೃದಯ ಬಡಿತ

ಕೈಕಾಲುಗಳ ಸೆಳೆತ

ಬಿಸಿಲಿನ ಶಾಖದಿಂದ ಅನೇಕ ತೊಂದರೆಗಳು ಉಂಟಾಗಬಹುದು. ಅದರಲ್ಲಿ ಅತ್ಯಂತ ತುರ್ತು ಪರಿಸ್ಥಿತಿ ಎಂದರೆ ಬಿಸಿಲಾಘಾತ. ಇದನ್ನು ಸರಿಯಾದ ಸಮಯದಲ್ಲಿ ಪತ್ತೆ ಹಚ್ಚಿ ಚಿಕಿತ್ಸೆ ನೀಡದಿದ್ದರೆ ಇದು ಮಾರಣಾಂತಿಕವಾಗಿ ಪರಿಣಮಿಸಬಹುದು. ಇದರ ಲಕ್ಷಣಗಳನ್ನು ಎಲ್ಲರೂ ತಿಳಿದಿರಬೇಕು ಮತ್ತು ಇದರ ಪ್ರಥಮ ಚಿಕಿತ್ಸೆಯ ಬಗ್ಗೆಯೂ ಎಲ್ಲರೂ ತಿಳಿದಿರಬೇಕು. ಬಿಸಿಲಿನ ಶಾಖದಿಂದ ದೇಹದ ತಾಪಮಾನವು ಹೆಚ್ಚಾಗುತ್ತದೆ ಮತ್ತು ದೇಹದಲ್ಲಿ ನಿರ್ಜಲೀಕರಣದ ಪರಿಣಾಮವಾಗಿ ಸ್ಟ್ರೋಕ್‌ ಸಂಭವಿಸುತ್ತದೆ.

ರೋಗಿಯಲ್ಲಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ನೀಡಬೇಕಾದ ಪ್ರಥಮ ಚಿಕಿತ್ಸೆ

ಆ್ಯಂಬುಲೆನ್ಸ್‌ಗೆ ಕರೆ ಮಾಡುವುದು

ರೋಗಿಯ ಬಟ್ಟೆಗಳನ್ನು ಸಡಿಲಗೊಳಿಸಬೇಕು

ದೇಹದ ಮೇಲೆ ತಂಪು ನೀರಿನಲ್ಲಿ ಒದ್ದೆ ಮಾಡಿರುವ ಬಟ್ಟೆ ಹಾಕಿ

ರೋಗಿಯು ಪ್ರಜ್ಞೆ ಹೊಂದಿದ್ದರೆ ಕುಡಿಯಲು ನೀರು ಕೊಡಿ

ಪ್ರಜ್ಞೆ ಇಲ್ಲದಿದ್ದರೆ ಅಥವಾ ಮಂಪರು ಪರಿಸ್ಥಿತಿ ಇದ್ದಲ್ಲಿ ಬಾಯಿಗೆ ಏನೂ ಕೊಡಬೇಡಿ.

ಬೇಸಗೆಯಲ್ಲಿ ಆರೋಗ್ಯವನ್ನು ಕಾಪಾಡಲು ಮಾಡಬೇಕಾದಂತಹ ಕೆಲಸಗಳು

ನಿಗದಿತ ಪ್ರಮಾಣದಲ್ಲಿ ನೀರು ಸೇವಿಸಬೇಕು

ಸಹಜ ಆರೋಗ್ಯವಂತರು ದಿನಕ್ಕೆ ಕನಿಷ್ಟ 3 ಲೀಟರ್‌ ನೀರು ಸೇವಿಸಬೇಕು. ಕಿಡ್ನಿ, ಹೃದಯ ತೊಂದರೆ ಇದ್ದವರು ವೈದ್ಯರು ಸೂಚಿಸಿದ ಪ್ರಮಾಣದಲ್ಲಿ ನೀರು ಸೇವಿಸಬೇಕು.

ವ್ಯವಹಾರ/ ವ್ಯಾಪಾರ ಇನ್ನಿತರ ಕೆಲಸಗಳನ್ನು ಬೆಳಿಗ್ಗೆ 6ರಿಂದ 10 ಗಂಟೆಯ ಒಳಗೆ ಹಾಗೂ ಸಂಜೆ 4 ಗಂಟೆಯ ಅನಂತರ ಮಾಡುವುದು ಉತ್ತಮ

ಕೆಲಸದ ಜಾಗದಲ್ಲಿ ಹವಾನಿಯಂತ್ರಣ ಯಂತ್ರವನ್ನು ಬಳಸಿ. ದಿನದ ಹೊತ್ತಿನಲ್ಲಿ ಕೋಣೆಯ ತಾಪಮಾನ 30 ಡಿಗ್ರಿ ಸೆ.ಗಿಂತ ಕಡಿಮೆ ಮತ್ತು ರಾತ್ರಿ ಹೊತ್ತಿನಲ್ಲಿ 24 ಡಿಗ್ರಿ ಸೆ. ಕಡಿಮೆ ಇರಬೇಕು.

ಸಮಯ ಸಿಕ್ಕರೆ ದಿನದ ಹೊತ್ತಿನಲ್ಲಿ ಸ್ವಲ್ಪ ವಿಶ್ರಾಂತಿಯನ್ನು ಪಡೆಯಿರಿ

ಹೊರಾಂಗಣದ ಚಟುವಟಿಕೆಗಳನ್ನು ಮಿತಗೊಳಿಸಿ ಸಾರ್ವಜನಿಕ ಸ್ಥಳಗಳಲ್ಲಿ ಆದಷ್ಟು ಸ್ವತ್ಛ ನೀರಿನ ವ್ಯವಸ್ಥೆ ಮಾಡಿ.

ಕನಿಷ್ಟ ಮನೆಯ ಅಂಗಳದಲ್ಲಿ ಅಥವಾ ನಿಮ್ಮ ಬಾಲ್ಕನಿಯಲ್ಲಿ ಪ್ರತಿದಿನ ಸ್ವತ್ಛ ಪಾತ್ರೆಯಲ್ಲಿ ಸ್ವತ್ಛ ನೀರನ್ನು ಪಕ್ಷಿಗಳಿಗಾಗಿ ಇಡಿ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-redmeat

Red Meat: ಮಧುಮೇಹ ಉಂಟಾಗುವ ಅಪಾಯ ಮತ್ತು ಕೆಂಪು ಮಾಂಸ ಸೇವನೆಗಿರುವ ಸಂಬಂಧ

5-body-weight

Body Weight: ಕ್ರೀಡಾಳುಗಳ ಸಾಧನೆಯ ಮೇಲೆ ಕ್ಷಿಪ್ರ ದೇಹತೂಕ ಏರಿಳಿತದ ಪರಿಣಾಮಗಳು

4-female-health

Females Health: ಲಘು ರಕ್ತಸ್ರಾವ ಮತ್ತು ಋತುಸ್ರಾವ್ರ ವ್ಯತ್ಯಾಸ ತಿಳಿಯಿರಿ

16

Health: ಸ್ತನ ಕಸಿ ಮತ್ತು ಕ್ಯಾನ್ಸರ್‌ ಪರಸ್ಪರ ಸಂಬಂಧ ಇದೆಯೇ?

9

Children’s Health: ತಂತ್ರಜ್ಞಾನ ಮತ್ತು ಕೋಮಲ ಮನಸ್ಸುಗಳು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.