ಕಪ್ಪಾ ವೈರಸ್‌ : ಲಸಿಕೆಯ ಎರಡೂ ಡೋಸ್‌ ಪಡೆದಲ್ಲಿ ರಕ್ಷಣೆ ಸಾಧ್ಯ


Team Udayavani, Jul 17, 2021, 7:05 AM IST

ಕಪ್ಪಾ ವೈರಸ್‌ : ಲಸಿಕೆಯ ಎರಡೂ ಡೋಸ್‌ ಪಡೆದಲ್ಲಿ ರಕ್ಷಣೆ ಸಾಧ್ಯ

ಕೊರೊನಾ ವೈರಸ್‌ನ ಹೊಸ ಹೊಸ ರೂಪಾಂತರಗಳು ವಿಜ್ಞಾನಿಗಳು ಮತ್ತು ವೈದ್ಯಕೀಯ ಸಂಶೋಧಕರಿಗೆ ನಿರಂತರವಾಗಿ ಸವಾಲೊಡ್ಡುತ್ತಿವೆ. ಡೆಲ್ಟಾ ಪ್ಲಸ್‌ ರೂಪಾಂತರಿ ಪ್ರಕರಣಗಳ ನಡುವೆ ದೇಶದಲ್ಲಿ ಕೊರೊನಾದ ಕಪ್ಪಾ ರೂಪಾಂತರಿಯ 7 ಪ್ರಕರಣಗಳು ದೃಢಪಟ್ಟಿದ್ದು ಜನರಲ್ಲಿ ತುಸು ಕಳವಳನ್ನುಂಟು ಮಾಡಿದೆ. ಇತ್ತೀಚೆಗೆ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಈ ರೂಪಾಂತರಿ ವೈರಸ್‌ ಪತ್ತೆಯಾಗಿದ್ದು, ಡೆಲ್ಟಾದಂತೆಯೇ ಕಪ್ಪಾ ಕೂಡ ಎರಡನೇ ಬಾರಿಗೆ ರೂಪಾಂತರಗೊಂಡ ಕೊರೊನಾ ವೈರಸ್‌ ಆಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ.

ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಜೈಪುರದ ಎಸ್‌ಎಂಎಸ್‌ ವೈದ್ಯಕೀಯ ಕಾಲೇಜು, ದಿಲ್ಲಿ ಲ್ಯಾಬ್‌ ಮತ್ತು ಪುಣೆಯ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಜೀನೋಮ್‌ಗೆ ಕಳುಹಿಸಲಾಗಿದ್ದ 174 ಮಾದರಿಗಳಲ್ಲಿ 166 ಮಾದರಿಗಳು ಡೆಲ್ಟಾ ರೂಪಾಂತರಿ ಮತ್ತು 5 ಕಪ್ಪಾ ರೂಪಾಂತರಿ ವೈರಸ್‌ ಎಂಬುದು ದೃಢಪಟ್ಟಿದೆ. ಅಲ್ಲದೆ ಲಕ್ನೋದ ಕಿಂಗ್‌ ಜಾರ್ಜ್‌ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದ್ದ 109 ಮಾದರಿಗಳಲ್ಲಿ 107 ಡೆಲ್ಟಾ ಪ್ಲಸ್‌ ಮತ್ತು 2 ಮಾದರಿಗಳು ಕಪ್ಪಾ ರೂಪಾಂತರಿಗಳೆಂದು ಕಂಡು ಬಂದಿವೆ.

ಏನಿದು ಕಪ್ಪಾ ರೂಪಾಂತರಿ ವೈರಸ್‌?
ಈಗಾಗಲೇ ದೇಶದಲ್ಲಿ ಎರಡನೇ ಅಲೆಯ ವೇಳೆ ಜನರನ್ನು ತೀವ್ರವಾಗಿ ಬಾಧಿಸಿದ ಡೆಲ್ಟಾ ವೈರಸ್‌ನಂತೆ ಕಪ್ಪಾ ಕೂಡ ಕೊರೊನಾ ವೈರಸ್‌ನ ದ್ವಿ ರೂಪಾಂತರಿಯಾಗಿದೆ, ಈ ವೈರಸ್‌ ಎರಡು ಬಾರಿ ಮಾರ್ಪಾಡು ಕಂಡಿದ್ದು ಇದನ್ನು ಬಿ.1.617.1 ಎಂದೂ ಕರೆಯಲಾಗುತ್ತದೆ. E484Q ಮತ್ತು L453R ಈ ವೈರಸ್‌ನ ಎರಡು ರೂಪಾಂತರಿಗಳಾಗಿವೆ. ಇದು ಕೊರೊನಾದ ಹೊಸ ರೂಪಾಂತರಿಯೇನಲ್ಲ. ಡಬ್ಲ್ಯುಎಚ್‌ಒ ಪ್ರಕಾರ ಕಪ್ಪಾ ರೂಪಾಂತರಿ ವೈರಸ್‌ ಭಾರತದಲ್ಲಿ 2020ರ ಅಕ್ಟೋಬರ್‌ನಲ್ಲಿ ಡೆಲ್ಟಾ ರೂಪಾಂತರಿಯ ಜತೆಯಲ್ಲಿಯೇ ಪತ್ತೆಯಾಗಿತ್ತು. ಈ ರೂಪಾಂತರಿಯ ಆನುವಂಶಿಕ ಬದಲಾವಣೆಯ ಬಗೆಗೆ ಅರಿವಿರುವುದರಿಂದ ಇದು ಅಷ್ಟೇನೂ ಅಪಾಯಕಾರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದು ಕೊರೊನಾ ವೈರಸ್‌ನ ಇತರ ರೂಪಾಂತರಿಯಂತೆ ಸಹಜವಾಗಿದ್ದು ಈ ವೈರಸ್‌ನ ಹರಡುವಿಕೆಯ ತೀವ್ರತೆ, ಅದು ಮಾನವನ ದೇಹದ ಮೇಲೆ ಬೀರಬಹುದಾದ ಪರಿಣಾಮ ಇತ್ಯಾದಿಗಳ ಬಗ್ಗೆ ಸ್ಪಷ್ಟತೆ ಇರುವುದರಿಂದ ಆತಂಕಪಡುವ ಅಗತ್ಯವಿಲ್ಲ ಎಂದು ಜನತೆಗೆ ವೈದ್ಯರು ಧೈರ್ಯ ತುಂಬಿದ್ದಾರೆ. ಆದರೆ ಈ ರೂಪಾಂತರಿ ವೈರಸ್‌ ಈಗಾಗಲೇ ಅನೇಕ ದೇಶಗಳಲ್ಲಿ ಪತ್ತೆಯಾಗಿದ್ದು ಸಮುದಾಯವನ್ನು ವ್ಯಾಪಿಸುವ ಸಾಧ್ಯತೆಗಳಿವೆಯಾದರೂ ಈ ಸೋಂಕು ತಗಲಿದವರು ಸೂಕ್ತ ಚಿಕಿತ್ಸೆ ಪಡೆದುಕೊಂಡದ್ದೇ ಆದಲ್ಲಿ ಶೀಘ್ರ ಗುಣಮುಖರಾಗಲು ಸಾಧ್ಯ.

ಕೊರೊನಾ ನಿರೋಧಕ ಲಸಿಕೆಗಳು ಪರಿಣಾಮಕಾರಿಯೇ?
ಕಪ್ಪಾ ರೂಪಾಂತರಿ ವೈರಸ್‌ ಮಾನವ ದೇಹದಲ್ಲಿರುವ ರೋಗನಿರೋಧಕ ಶಕ್ತಿಯನ್ನು ಹಾನಿಗೊಳಿಸುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಇದಕ್ಕೆ ಬಲವಾದ ಸಾಕ್ಷ್ಯಾಧಾರಗಳಿಲ್ಲ. ಆದರೆ ಕಪ್ಪಾ ರೂಪಾಂತರಿ ವಿರುದ್ಧ ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆ ಪರಿಣಾಮಕಾರಿಯಾಗಿದೆ ಎಂದು ಐಸಿಎಂಆರ್‌ ಹೇಳಿದೆ. ಮತ್ತೂಂದೆಡೆ ಆಕ್ಸ್‌ಫ‌ರ್ಡ್‌ ವಿವಿ ನಡೆಸಿದ ಅಧ್ಯಯನದ ಪ್ರಕಾರ ಕೊವಿಶೀಲ್ಡ್‌ ಕೂಡ ಕಪ್ಪಾ ರೂಪಾಂತರಿಯಿಂದ ರಕ್ಷಣೆ ನೀಡುತ್ತದೆ. ಪ್ರಸ್ತುತ ಭಾರತದ ಹೆಚ್ಚಿನ ಜನರಿಗೆ ಕೊವ್ಯಾಕ್ಸಿನ್‌ ಮತ್ತು ಕೊವಿಶೀಲ್ಡ್‌ ಲಸಿಕೆಯನ್ನು ನೀಡಲಾಗುತ್ತಿದೆ ಎಂಬುದು ಇಲ್ಲಿ ಗಮನಾರ್ಹ. ಕೆಲವೊಂದು ವೈದ್ಯಕೀಯ ಸಂಶೋಧನೆಗಳು ಮತ್ತು ಅಧ್ಯಯನದ ಪ್ರಕಾರ ಕೊರೊನಾ ಲಸಿಕೆಯ ಒಂದು ಡೋಸ್‌ ಸಾಮಾನ್ಯವಾಗಿ ಅಲ್ಫಾ ಮತ್ತು ಡೆಲ್ಟಾ ರೂಪಾಂತರಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಒಂದು ಡೋಸ್‌ ಲಸಿಕೆ ತೆಗೆದುಕೊಂಡವರ ಪೈಕಿ ಕೇವಲ ಶೇ.10ರಷ್ಟು ಮಂದಿಗೆ ಮಾತ್ರ ಈ ರೂಪಾಂತರಿಗಳನ್ನು ತಡೆದುಕೊಳ್ಳಲು ಸಾಧ್ಯವಾಗಿದ್ದರೆ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದವರ ಪೈಕಿ ಶೇ. 95ರಷ್ಟು ಮಂದಿ ಡೆಲ್ಟಾ ಮತ್ತು ಬೀಟಾ ವೈರಸ್‌ಗಳಿಂದ ರಕ್ಷಣೆಯನ್ನು ಪಡೆದುಕೊಂಡಿದ್ದಾರೆ. ಕಪ್ಪಾ ರೂಪಾಂತರಿ ಕೂಡ ಡೆಲ್ಟಾದಂತೆ ದ್ವಿ ರೂಪಾಂತರಿ ವೈರಸ್‌ ಆಗಿರುವುದರಿಂದ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದುಕೊಂಡರೆ ಉತ್ತಮ ಅಷ್ಟು ಮಾತ್ರವಲ್ಲದೆ ಎಲ್ಲ ರೀತಿಯ ಕೊರೊನಾ ರೂಪಾಂತರಿ ವೈರಸ್‌ಗಳಿಂದ ರಕ್ಷಣೆ ಸಾಧ್ಯ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.