Foods: ಆಹಾರ ಸೇವಿಸುವಾಗ ಈ ಅಂಶಗಳನ್ನು ನೆನಪಿನಲ್ಲಿಡಿ


Team Udayavani, Feb 18, 2024, 12:41 PM IST

7-health

ಆಹಾರ ತಯಾರಿ: ಖಾದ್ಯವಸ್ತುಗಳನ್ನು ಸೇವಿಸುವವರ ವಯಸ್ಸಿಗೆ ಸರಿಯಾಗಿ ತುಂಡುಗಳನ್ನು ಮಾಡಿಕೊಡಬೇಕು. ವಿಶೇಷವಾಗಿ ಮಕ್ಕಳಿಗೆ ದುಂಡನೆಯ ತುಂಡುಗಳನ್ನು ಕೊಡಬಾರದು, ಅವು ಅವರಲ್ಲಿ ಆಲಿಕೆಯ ರೂಪದಲ್ಲಿರುವ ವಾಯುಮಾರ್ಗದಲ್ಲಿ ಸೇರಿಕೊಳ್ಳುವ ಅಪಾಯವಿದೆ.

ಗಮನಕೊಟ್ಟು ಆಹಾರ ಸೇವಿಸಿ: ಮಕ್ಕಳಿಗೆ ಉಣ್ಣಿಸಲು ಅಥವಾ ತಿನ್ನಿಸಲು ಮೊಬೈಲ್‌ ಯಾ ಟಿವಿ ಬೇಕೇ ಬೇಕು ಎಂದು ಹೇಳುವ ಅನೇಕ ಹೆತ್ತವರನ್ನು ಕಂಡಿದ್ದೇನೆ. ಹೆತ್ತವರು ಇಂತಹ ಅಭ್ಯಾಸಗಳನ್ನು ಪ್ರೋತ್ಸಾಹಿಸಬಾರದು. ಆಹಾರದ ಮೇಲೆ ಗಮನ ಕೇಂದ್ರೀಕರಿಸಿ, ಆಹಾರ ಜಗಿಯುವ ಸರಿಯಾದ ಪದ್ಧತಿ ರೂಢಿಸಿಕೊಳ್ಳಲು ಮಕ್ಕಳಿಗೆ ತಿಳಿಹೇಳಿ. ವಿಭಿನ್ನ ಮಾದರಿಯ ಆಹಾರಗಳನ್ನು ಜಗಿಯುವ ಉತ್ತಮ ಪದ್ಧತಿಯನ್ನು ಅಭ್ಯಾಸ ಮಾಡಿಕೊಳ್ಳಲು ಹೆತ್ತವರು ಮಾದರಿಯಾಗಬೇಕು. ಹೆಚ್ಚುವರಿ ಆಹಾರವನ್ನು ಬಾಯಿಯಿಂದ ಹೊರಹಾಕುವ ಅಭ್ಯಾಸವನ್ನು ಮೃದುವಾಗಿ ನಿರುತ್ತೇಜಿಸಿ. ನೆನಪಿಡಿ, ಮಕ್ಕಳು ನೀವು ಹೇಳುವುದಕ್ಕಿಂತ ಹೆಚ್ಚಾಗಿ ನೀವು ಮಾಡುವುದನ್ನು ನೋಡಿ ಅನುಸರಿಸುತ್ತಾರೆ.

ಭಂಗಿ: ಸುರಕ್ಷಿತ ಆಹಾರ ಸೇವನೆಗಾಗಿ ಕುಳಿತು ತಿನ್ನುವ – ಉಣ್ಣುವ ಭಂಗಿಯನ್ನು ರೂಢಿಸಿಕೊಳ್ಳಿ. ಆಹಾರ ಸೇವಿಸುವ ಸಮಯದಲ್ಲಿ ಮಕ್ಕಳು ಓಡಾಡುವುದು ಬೇಡ. ವ್ಯಕ್ತಿಯು ಹಾಸಿಗೆಯಲ್ಲಿದ್ದರೆ ಅವರು ಎದ್ದು ಕುಳಿತು ಆಹಾರ ಸೇವಿಸಲಿ. ಯಾವುದೇ ಕಾರಣಕ್ಕೂ ಮಲಗಿರುವ ಭಂಗಿಯಲ್ಲಿ ಆಹಾರ ಸೇವಿಸಬಾರದು.

ದ್ರವಾಹಾರ ಸೇವನೆ: ಬಹುತೇಕ ಮಂದಿ ಗುಟುಕರಿಸಿ ಕುಡಿಯುವುದರ ಬದಲಾಗಿ ಒಂದೇಟಿಗೆ ಗಳಗಳನೆ ಕುಡಿಯುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಹೀಗೆ ಗಳಗಳನೆ ಕುಡಿಯುವ ಹೊತ್ತಿನಲ್ಲಿ ಹಲವು ಸೆಕೆಂಡುಗಳ ಕಾಲ ಉಸಿರಾಟ ಸ್ಥಗಿತಗೊಳ್ಳಬೇಕಾಗುತ್ತದೆ, ಇದು ಗಮನಾರ್ಹ ಉದ್ವಿಗ್ನತೆಗೆ ಕಾರಣವಾಗುತ್ತದೆಯಲ್ಲದೆ ವಿಶೇಷವಾಗಿ ಮಕ್ಕಳು ಮತ್ತು ಹಿರಿಯರಲ್ಲಿ ಸಂಕೀರ್ಣ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಆದ್ದರಿಂದ ಸುರಕ್ಷೆ ಮತ್ತು ಆಸ್ವಾದಿಸಿ ಕುಡಿಯುವುದಕ್ಕಾಗಿ ಗುಟುಕರಿಸಿ ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.

ಮಾತಾಡಬಾರದು, ನಗಬಾರದು: ಆಹಾರ ಸೇವನೆ ಮತ್ತು ನಗುವುದು ಅಥವಾ ಮಾತನಾಡುವುದು ಏಕಕಾಲದಲ್ಲಿ ನಡೆಯಲೇಬಾರದು. ಸಾಮಾಜಿಕ ಸಂದರ್ಭಗಳಲ್ಲಿ ಒಂದು ತುತ್ತು ತೆಗೆದುಕೊಳ್ಳುವುದಕ್ಕೆ ಮೊದಲು ಮಾತನಾಡಿ ಅಥವಾ ಜಗಿದು ನುಂಗಿದ ಬಳಿಕ ಮಾತನಾಡಿ. ಊಟ ಉಪಾಹಾರ ಮುಗಿದ ಬಳಿಕ ವಿಸ್ತಾರವಾಗಿ ಮಾತನಾಡುವುದು ಹಿತಕರ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

7-health

Cleft Lip and Palate: ಸೀಳು ತುಟಿ ಮತ್ತು ಅಂಗುಳ- ಹೆತ್ತವರಿಗೆ ತಿಳಿವಳಿಕೆ

6-surgery

Surgery: ನಾನು ಯಾಕೆ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕು?

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.