Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ


Team Udayavani, May 19, 2024, 2:13 PM IST

9-pregnant

ಗರ್ಭಾವಸ್ಥೆ ಹಾಗೂ ಬಾಣಂತನವು ಮಹಿಳೆಯ ಜೀವನದಲ್ಲಿ ಮಹತ್ವದ ಘಟನೆಗಳಾಗಿವೆ. ಗರ್ಭಾವಸ್ಥೆ ಹಾಗೂ ಬಾಣಂತನದ ಅವಧಿಯ ಮಾನಸಿಕ ಆರೋಗ್ಯವು ಗರ್ಭಧಾರಣೆಯ ಸಮಯದಿಂದ ಹೆರಿಗೆಯ ಅನಂತರದ ಮೊದಲ ವರ್ಷದವರೆಗಿನ ಮಹಿಳೆಯ ಮಾನಸಿಕ ಸ್ಥಿತಿಯಾಗಿದೆ. ಈ ಅವಧಿಯಲ್ಲಿ ಮಹಿಳೆಯರು ದೈಹಿಕ ಸಂಕಷ್ಟದ ಜತೆಗೆ ಮಾನಸಿಕ ಅಸ್ವಸ್ಥತೆಗಳಿಗೆ ಹೆಚ್ಚು ಗುರಿಯಾಗುತ್ತಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಪ್ರತೀ ಐವರು ಮಹಿಳೆಯರಲ್ಲಿ ಒಬ್ಬರು ಗರ್ಭಾವಸ್ಥೆಯಲ್ಲಿ ಅಥವಾ ಮಗು ಜನನದ ಅನಂತರದ ವರ್ಷದಲ್ಲಿ ಮಾನಸಿಕ ಅನಾರೋಗ್ಯದ ಸ್ಥಿತಿಯನ್ನು ಅನುಭವಿಸುತ್ತಾರೆ. ಪ್ರಪಂಚದಾದ್ಯಂತ ಗರ್ಭಾವಸ್ಥೆಯಲ್ಲಿ ಸುಮಾರು ಶೇ. 10 ಮಹಿಳೆಯರು ಮತ್ತು ಹೆರಿಗೆಯ ಅನಂತರ ಶೇ. 13 ಮಹಿಳೆಯರು ಮಾನಸಿಕ ಅಸ್ವಸ್ಥತೆ, ಪ್ರಾಥಮಿಕವಾಗಿ ಖನ್ನತೆಯನ್ನು ಅನುಭವಿಸುತ್ತಾರೆ. ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಇದು ಇನ್ನೂ ಹೆಚ್ಚಾಗಿರುತ್ತದೆ, ಅಂದರೆ ಗರ್ಭಾವಸ್ಥೆಯಲ್ಲಿ ಶೇ. 15.6 ಮತ್ತು ಹೆರಿಗೆಯ ಅನಂತರ ಶೇ. 19.8. ಒತ್ತಡ, ಖನ್ನತೆ ಮತ್ತು ಆತಂಕದಂತಹ ಕೆಲವು ಗರ್ಭಿಣಿ ಹಾಗೂ ಬಾಣಂತಿಯರ ಮಾನಸಿಕ ಅಸ್ವಸ್ಥತೆಗಳು ಮಹಿಳೆಯರು, ಮಕ್ಕಳು ಮತ್ತು ಕುಟುಂಬಗಳ ಮೇಲೆ ಹಲವಾರು ಋಣಾತ್ಮಕ ಪರಿಣಾಮಗಳನ್ನು ಉಂಟುಮಾಡುತ್ತವೆ.

ಇದರಲ್ಲಿ ಕಳಪೆ ತಾಯಿ-ಭ್ರೂಣದ ಬಾಂಧವ್ಯ ಮತ್ತು ಪ್ರತಿಕೂಲ ತಾಯಿಯ ಮತ್ತು ನವಜಾತ ಶಿಶುವಿನ ಫಲಿತಾಂಶಗಳು ಸೇರಿವೆ. ಮಹಿಳೆಯರು ಆಹಾರವನ್ನು ತೆಗೆದುಕೊಳ್ಳಲು ಅಥವಾ ತಮ್ಮನ್ನು ಸರಿಯಾಗಿ ನೋಡಿಕೊಳ್ಳಲು ಆಸಕ್ತಿ ಹೊಂದಿಲ್ಲದಿರಬಹುದು. ಅಲ್ಲದೆ ಅವರು ಖನ್ನತೆ, ತೀವ್ರ ಅನಾರೋಗ್ಯ ಅಥವಾ ಆತ್ಮಹತ್ಯೆಯ ಗಂಭೀರ ಅಪಾಯಗಳಿಗೆ ಒಳಗಾಗಬಹುದು. ಹೆಚ್ಚುವರಿಯಾಗಿ ಅವರ ಶಿಶುಗಳು ಸರಿಯಾದ ಪೋಷಣೆ ಮತ್ತು ಭಾವನಾತ್ಮಕ ಬೆಂಬಲವನ್ನು ಪಡೆಯಲು ಸಾಧ್ಯವಾಗದಿರಬಹುದು.

ಗರ್ಭಾವಸ್ಥೆ ಹಾಗೂ ಬಾಣಂತನದ ಅವಧಿಯ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಅಪಾಯಕಾರಿ ಅಂಶಗಳು

ಯಾವುದೇ ಮಹಿಳೆಯು ಗರ್ಭಾವಸ್ಥೆ ಹಾಗೂ ಬಾಣಂತನದ ಅವಧಿಯಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯನ್ನು ಅನುಭವಿಸಬಹುದು. ಆದಾಗ್ಯೂ ಕೆಲವು ಅಂಶಗಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತವೆ. ಅವುಗಳೆಂದರೆ: ­

  • ಮಾನಸಿಕ ಆರೋಗ್ಯ ಸಮಸ್ಯೆಗಳ ಇತಿಹಾಸ. ಈ ಮೊದಲು ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಗಳಿರುವಂಥದ್ದು. ­
  • ದೈಹಿಕ ಮತ್ತು ಹಾರ್ಮೋನ್‌ ಬದಲಾವಣೆಗಳ ಪರಿಣಾಮ – ಗರ್ಭಾವಸ್ಥೆಯಲ್ಲಿ ಮತ್ತು ಅನಂತರ ದೇಹವು ಅನೇಕ ದೈಹಿಕ ಮತ್ತು ಹಾರ್ಮೋನ್‌ ಬದಲಾವಣೆಗಳಿಗೆ ಒಳಗಾಗುತ್ತದೆ. ­
  • ಕಷ್ಟಕರವಾದ ಹೆರಿಗೆಯ ಅನುಭವಗಳು ­
  • ದೈಹಿಕ, ಲೈಂಗಿಕ, ಅಥವಾ ಭಾವನಾತ್ಮಕ ನಿಂದನೆ, ಅಥವಾ ನಿರ್ಲಕ್ಷ್ಯ. ­
  • ಅಸ್ಥಿರವಾದ ಕುಟುಂಬದ ಪರಿಸ್ಥಿತಿ, ನಮಗೆ ಹತ್ತಿರವಿರುವ ಯಾರನ್ನಾದರೂ ಕಳೆದುಕೊಳ್ಳುವುದು. ­
  • ಕೌಟುಂಬಿಕ ಹಿಂಸೆ ­
  • ಕೆಳಮಟ್ಟದ ಸಾಮಾಜಿಕ ಆರ್ಥಿಕ ಸ್ಥಿತಿ, ಶಿಕ್ಷಣದ ಕೊರತೆ, ಮತ್ತು ನಿರುದ್ಯೋಗ. ­
  • ಅನಪೇಕ್ಷಿತ ಗರ್ಭಧಾರಣೆ. ­
  • ಗಂಡು ಮಗುವೇ ಬೇಕೆಂಬ ಹಂಬಲ ಹಾಗೂ ಒತ್ತಡ ಮತ್ತು ಹೆಣ್ಣು ಮಗುವಿನ ಜನನ.
  •  ದೈಹಿಕ ಆರೋಗ್ಯದ ಸಮಸ್ಯೆಗಳು. ­
  • ಮಾದಕ ದ್ರವ್ಯ ಸೇವನೆ

ಮುಂದಿನ ವಾರಕ್ಕೆ

ಡಾ| ಸವಿತಾ ಪ್ರಭು,

ಅಸಿಸ್ಟೆಂಟ್‌ ಪ್ರೊಫೆಸರ್‌,

ಸೈಕಿಯಾಟ್ರಿಕ್‌ (ಮೆಂಟಲ್‌ ಹೆಲ್ತ್‌) ನರ್ಸಿಂಗ್‌ ವಿಭಾಗ,

ಮಣಿಪಾಲ ಕಾಲೇಜ್‌ ಆಫ್ ನರ್ಸಿಂಗ್‌,

ಮಾಹೆ, ಮಣಿಪಾಲ

-ಡಾ| ಶ್ಯಾಮಲಾ ಜಿ.

ಪ್ರೊಫೆಸರ್‌ ಮತ್ತು ಯೂನಿಟ್‌ ಮುಖ್ಯಸ್ಥರು

ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ

ಕೆಎಂಸಿ, ಮಾಹೆ, ಮಣಿಪಾಲ

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಒಬಿಜಿ ಮತ್ತು ಸೈಕಿಯಾಟ್ರಿ ವಿಭಾಗ, ಕೆಎಂಸಿ, ಮಂಗಳೂರು)

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1)

Health: ಆಹಾರ ಚೆನ್ನಾಗಿ ಜಗಿದು ನುಂಗಿ ನೆತ್ತಿಗೆ ಹತ್ತದಿರಲಿ!

Operation ಥಿಯೇಟರ್‌ ಒಳಗೆ ಏನು ನಡೆಯುತ್ತದೆ?

Operation ಥಿಯೇಟರ್‌ ಒಳಗೆ ಏನು ನಡೆಯುತ್ತದೆ?

(Expiry Date)ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

6-redmeat

Red Meat: ಮಧುಮೇಹ ಉಂಟಾಗುವ ಅಪಾಯ ಮತ್ತು ಕೆಂಪು ಮಾಂಸ ಸೇವನೆಗಿರುವ ಸಂಬಂಧ

5-body-weight

Body Weight: ಕ್ರೀಡಾಳುಗಳ ಸಾಧನೆಯ ಮೇಲೆ ಕ್ಷಿಪ್ರ ದೇಹತೂಕ ಏರಿಳಿತದ ಪರಿಣಾಮಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.