ಝೈಡಸ್‌ ಲಸಿಕೆ: ದರ ಇಳಿಕೆ ಬಗ್ಗೆ ಚರ್ಚೆ

ಲಸಿಕೆಯ ಬೆಲೆ, ಡೋಸೇಜ್‌ಗಳ ಇಳಿಕೆಗೆ ಕೇಂದ್ರ ಸರ್ಕಾರ ಇಂಗಿತ

Team Udayavani, Oct 4, 2021, 5:55 AM IST

ಝೈಡಸ್‌ ಲಸಿಕೆ: ದರ ಇಳಿಕೆ ಬಗ್ಗೆ ಚರ್ಚೆ

ನವದೆಹಲಿ: ಕೋವಿಡ್‌ ಮೂರನೇ ಅಲೆಯನ್ನು ಎದುರಿಸಲು ದೇಶ ಸನ್ನದ್ಧವಾಗುತ್ತಿರುವ ಹೊತ್ತಿನಲ್ಲಿ ಮಕ್ಕಳಿಗೆ ಕೋವಿಡ್‌ ಲಸಿಕೆ ಸಿಗುವ ಬಗ್ಗೆ ವ್ಯಾಪಕ ಚರ್ಚೆಗಳು ಆರಂಭವಾಗಿವೆ.

ಇದರ ನಡುವೆಯೇ, ಕೇಂದ್ರ ಸರ್ಕಾರದ ಮುಂದೆ ತನ್ನ ಲಸಿಕೆಯ ಪ್ರಸ್ತಾವನೆ ಮಂಡಿಸಿರುವ ಝೈಡಸ್‌ ಕ್ಯಾಡಿಲಾ ಕಂಪನಿ, 12 ವರ್ಷ ಮೇಲ್ಪಟ್ಟವರಿಗೆ ಮೂರು ಡೋಸ್‌ಗಳಲ್ಲಿ ನೀಡುವಂಥ, “ಸೂಜಿಯಿಲ್ಲದ ಜೆಟ್‌ ಇಂಜೆಕ್ಟರ್‌ ಮಾದರಿ’ಯ “ಝೈಕೋವ್‌-ಡಿ’ ಲಸಿಕೆಯ ಸಾರ್ವಜನಿಕ ಬಳಕೆಗೆ ಅನುಮತಿ ನೀಡುವಂತೆ ಕೋರಿದೆ. ಅಲ್ಲದೆ, ತನ್ನ ಪ್ರತಿಯೊಂದು ಡೋಸ್‌ನ ಲಸಿಕೆಯ ಬೆಲೆಯನ್ನು 1,900 ರೂ.ಗಳಿಗೆ ನಿಗದಿಪಡಿಸಿರುವುದಾಗಿ ಪ್ರಸ್ತಾವನೆಯಲ್ಲಿ ಹೇಳಿದೆ.

ಆದರೆ, ಕೇಂದ್ರ ಸರ್ಕಾರ, ಈ ಪ್ರಸ್ತಾವನೆಯನ್ನು ಒಪ್ಪಿಲ್ಲ. ಲಸಿಕೆಯ ಬೆಲೆಯನ್ನು ಹಾಗೂ ಡೋಸ್‌ಗಳ ಸಂಖ್ಯೆಯನ್ನು ಇಳಿಸುವಂತೆ ಕಂಪನಿಯ ಪ್ರತಿನಿಧಿಗಳಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಮುಂಬೈನ ಖ್ಯಾತ ದೇಗುಲವಾದ ಮುಂಬಾ ದೇವಸ್ಥಾನ ಅ. 7ರಿಂದ ಸಾರ್ವಜನಿಕರಿಗಾಗಿ ತೆರೆಯಲಿದ್ದು, ಎರಡೂ ಡೋಸ್‌ ಲಸಿಕೆ ಪಡೆದಿರುವ ಭಕ್ತಾದಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಾಗಿ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ:ಯುಎಇಗಿಂತ ಮುನ್ನ ಭಾರತದಲ್ಲಿ ಹೈಪರ್‌ಲೂಪ್‌? ಸುಲ್ತಾನ್‌ ಅಹ್ಮದ್‌ ಸುಳಿವು

ಕೇಸು ವಾಪಸ್‌:
ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯ ಅನ್ವಯ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಲ್ಲ ಕೇಸುಗಳನ್ನೂ ಕೈಬಿಡು ವಂತೆ ಸಿಎಂ ಯೋಗಿ ಆದಿತ್ಯನಾಥ್‌ ಆದೇಶಿಸಿದ್ದಾರೆ.

ರಾಜ್ಯದಲ್ಲಿ ಇದುವರೆಗೆ 100.91 ದಶಲಕ್ಷ ಡೋಸ್‌ ಲಸಿಕೆ ಹಾಕಲಾಗಿದೆ. 31 ಜಿಲ್ಲೆಗಳಲ್ಲಿ ಸಕ್ರಿಯ ಕೇಸುಗಳು ಇಲ್ಲವೆಂದು ಸಿಎಂ ಯೋಗಿ ಹರ್ಷವ್ಯಕ್ತಪಡಿಸಿದ್ದಾರೆ.

ಭಾರತವು ಜಗತ್ತಿನ ಫಾರ್ಮಸಿ
ಭಾರತವು ವಿಶ್ವದ ಔಷಧಾಲಯವಾಗುತ್ತಿದೆ. ಇದು 75 ವರ್ಷದ ಇತಿಹಾಸದಲ್ಲಿ ಅತಿದೊಡ್ಡ ಸಾಧನೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ( ಡಬ್ಲ್ಯೂಎಚ್‌ಒ) ಪ್ರಧಾನ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌ ಹೇಳಿದ್ದಾರೆ. ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಭಾಗವಹಿಸಿದ ಅವರು, ದೇಶವು ಪೋಲಿಯೋ ನಿರ್ಮೂಲನೆಯಿಂದ ಹಿಡಿದು, ಲಸಿಕೆಯಿಂದ ಗುಣಪಡಿಸಬಲ್ಲ ಹಲವು ಕಾಯಿಲೆಗಳನ್ನು ನಿಯಂತ್ರಿಸಿದೆ. ತಾಯಿ ಮತ್ತು ಮಕ್ಕಳ ಸಾವಿನ ಸಂಖ್ಯೆಯಲ್ಲೂ ಭಾರೀ ಇಳಿಕೆಯಾಗಿದೆ ಎಂದಿದ್ದಾರೆ. ಹಾಗೆಯೇ ಕೊರೊನಾ ಸಮಯದಲ್ಲಿ ಭಾರತ ಸೇರಿ ವಿಶ್ವಾದ್ಯಂತ ಮೂಲಭೂತ ವೈದ್ಯಕೀಯ ಸೇವೆಗ ಸಾಕಷ್ಟು ತೊಂದರೆಯುಂಟಾಗಿತ್ತು. ಹೀಗಾಗಿ ದೇಶದಲ್ಲಿ ಕ್ಷಯರೋಗ, ಸಾಂಕ್ರಾಮಿಕವಲ್ಲದ ರೋಗಗಳ ಕಡೆ ಹೆಚ್ಚಿನ ವೈದ್ಯಕೀಯ ಗಮನ ಹರಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ನಾವು ಇದರತ್ತ ಹೆಚ್ಚಿನ ಗಮನ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

ಆರೋಗ್ಯದಲ್ಲಿ ಕ್ರಾಂತಿ; ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರದಲ್ಲಿ ಲ್ಯಾಪರೊಸ್ಕೋಪಿಯ ಮಹತ್ವ

4-

Fasting: ಉಪವಾಸ: ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹ ಆರೈಕೆ

2-heath

Health: ವಯೋವೃದ್ಧರ ಆರೈಕೆ : ಮುಪ್ಪಿನಲ್ಲಿ ಜೀವನಾಧಾರ

17-tooth-infection

Tooth Infection: ಹಲ್ಲಿನ ಸೋಂಕು-ಸಂಧಿ ನೋವಿಗೆ ಕಾರಣವಾದೀತೇ?

16-

Methylmalonic acidemia: ಮಿಥೈಲ್‌ಮೆಲೋನಿಕ್‌ ಆ್ಯಸಿಡೆಮಿಯಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.