Deepawali 2023; ಗೋಪೂಜೆಯ ಖುಷಿ ಮಾತ್ರ ವರ್ಣಿಸಲು ಅಸಾಧ್ಯ


Team Udayavani, Nov 11, 2023, 5:30 PM IST

Deepawali 2023; ಗೋಪೂಜೆಯ ಖುಷಿ ಮಾತ್ರ ವರ್ಣಿಸಲು ಅಸಾಧ್ಯ

ದೀಪಾವಳಿ ದೀಪಗಳ ಹಬ್ಬ. ಈ ಹಬ್ಬವನ್ನು ಹಲವು ಸಂಪ್ರದಾಯ, ಸಂಸ್ಕೃತಿ ಮತ್ತು ಇತಿಹಾಸ ಸಮ್ಮಿಲನದ ದ್ಯೋತಕವಾಗಿ ಆಚರಿಸಲಾಗುತ್ತದೆ. ಹಾಗಾಗಿ ಪ್ರತಿ ದಿನಕ್ಕೂ ಅದರದ್ದೇ ಆದ ಮಹತ್ವವಿದೆ. ಅದರಲ್ಲಿಯೂ ಬಲಿಪಾಡ್ಯಮಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಇದು ಹಿಂದೂ ತಿಂಗಳ ಕಾರ್ತಿಕ ಮಾಸದ ಮೊದಲ ದಿನವಾಗಿದೆ. ರಾಕ್ಷಸ ರಾಜ ಬಲಿಯ ಮೇಲೆ ವಿಷ್ಣುವಿನ ವಿಜಯವನ್ನು ಸಂಕೇತಿಸಲು ಇದನ್ನು ಆಚರಿಸಲಾಗುತ್ತದೆ. ಜೊತೆಗೆ ಗೋಪೂಜೆಯನ್ನು ಆಚರಿಸುವ ಕ್ರಮ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಅದರಂತೆಯೇ ನಮ್ಮ ಮನೆಯಲ್ಲಿಯೂ ಗೋವಿನ ಪೂಜೆ ನಡೆಸಲಾಗುತ್ತದೆ. ನನ್ನ ತಂದೆ ತಾಯಿ ಮಾಡುವ ಆಚಾರ ವಿಚಾರ ಎಲ್ಲವೂ ನನ್ನನ್ನು ಬಾಲ್ಯದಿಂದ ಸೆಳೆದಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಗೋ ಪೂಜೆಯಂದು ಬೆಳಿಗ್ಗೆ ಬೇಗ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, ಹೊಸ ಉಡುಪು ತೊಟ್ಟು, ಕೊಟ್ಟಿಗೆ ಸುತ್ತಲೂ ರಂಗೋಲಿ ಹಾಕಿ, ಗೋವಿನ ಹೆಜ್ಜೆಯನ್ನು ಮನೆಯ ಎಲ್ಲ ಭಾಗದಲ್ಲಿಯೂ ಬಿಡಿಸಿ, ಹೂವು ತೋರಣಗಳಿಂದ ಅಲಂಕಾರ ಮಾಡುತ್ತಿದ್ದೆವು. ಅಕ್ಕ ಮತ್ತು ನಾನು ಅಮ್ಮ ಹೇಳಿದ ಕೆಲಸ ಮುಗಿಸಿ ಗೋವುಗಳಿಗೂ ಸಿಂಗಾರ ಮಾಡುತ್ತಿದ್ದೆವು. ಅವುಗಳ ಮೈ ತೊಳೆದು ಕುಂಕುಮ ಮತ್ತು ಶೇಡಿಯನ್ನು ಅವುಗಳಿಗೆ ಬಡಿದು, ಸಿಂಗಾರ, ಅಡಿಕೆ, ಕಾಯಿಯನ್ನು ಕುತ್ತಿಗೆಗೆ ಕಟ್ಟಿ ಮದುವಣಗಿತ್ತಿಯ ಹಾಗೆ ತಯಾರಿ ಮಾಡುತ್ತಿದ್ದೆವು. ಬಳಿಕ ಅಪ್ಪ ಅವುಗಳಿಗೆ ಆರತಿ ಮಾಡಿ, ನೈವೇದ್ಯ ಇರಿಸಿ ಪೂಜೆ ಮಾಡುತ್ತಾರೆ. ಸಾಮಾನ್ಯವಾಗಿ ನಮ್ಮ ಮನೆಯಲ್ಲಿ ನೈವೇದ್ಯಕ್ಕೆ, ಸಿಹಿ ಅನ್ನ ಉಪ್ಪು ಹಾಕದಿರುವ ದೋಸೆ, ಅಪ್ಪಮ್ ಗಳನ್ನು ತಯಾರಿಸಲಾಗುತ್ತದೆ. ಗೋಪೂಜೆ ಮಾಡುವಾಗ ಸಿಗುವ ಖುಷಿ ಮಾತ್ರ ವರ್ಣಿಸಲು ಅಸಾಧ್ಯ. ಈಗಲೂ ನಮಗೆ ಅದೇ ಖುಷಿಯಿದೆ. ಯಾವುದೇ ಭಾಗದಲ್ಲಿದ್ದರೂ ದೀಪಾವಳಿಗೆ ಮನೆಗೆ ಹೋಗುವುದನ್ನು ತಪ್ಪಿಸುವುದಿಲ್ಲ.

ಆದಷ್ಟು ಗೋವುಗಳನ್ನು ಸಾಕಿ, ಸಲಹಿರಿ. ಕಣ್ಣಿಗೆ ಕಾಣುವ ದೇವರಲ್ಲಿ ಗೋವುಗಳು ಅಗ್ರಸ್ಥಾನದಲ್ಲಿರುತ್ತವೆ. ಮನೆ ನಂದಗೋಕುಲವಾಗಲು ಒಂದು ಗೋವಾದರೂ ಇರಲೇ ಬೇಕು ಎಂಬುದನ್ನು ಎಂದಿಗೂ ಮರೆಯಬೇಡಿ. ಎಲ್ಲರಿಗೂ ದೀಪಾವಳಿ, ಗೋಪೂಜೆ ಹಬ್ಬದ ಶುಭಾಶಯಗಳು.

ರಮ್ಯಾ ಭಟ್ ಹೊನ್ನಾವರ

ಟಾಪ್ ನ್ಯೂಸ್

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Retro style trends in social media

Retro Style; ಸೋಶಿಯಲ್‌ ಮೀಡಿಯಾದಲ್ಲೊಂದು ರೆಟ್ರೋ ಸ್ಟೈಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.