Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?


Team Udayavani, Oct 4, 2024, 7:37 AM IST

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

ಹೆಣ್ಣಿನ ರಕ್ಷಣೆಗಾಗಿ ಒಂದು ದ್ವೀಪವನ್ನೇ ಸುಟ್ಟ ಇತಿಹಾಸ ನಮ್ಮದು. ಈಗ ಕರಗುತ್ತಿರುವ ಮೋಂಬತ್ತಿಯ ಜಾಗದಲ್ಲಿ ಅಂದು ಉರಿದು ಕರಕಲಾಗುತ್ತಿದ್ದದ್ದು ಯುದ್ಧದಲ್ಲಿ ಧ್ವಂಸಗೊಂಡ ಕಟುಕರ ದೇಹಗಳು.

ಧರ್ಮದ ಪರ ನಿಲ್ಲಲು ಅಣ್ಣನನ್ನೇ ಎದುರು ಹಾಕಿಕೊಂಡ ವಿಭೀಷಣನಂತಹ ಮಾನವ ಜನ್ಮ, ಈಗ ಇದೆಲ್ಲಿ ಬಂದು ನಿಂತಿದೆ? ಹೆಣ್ಣಿಗೆ ಹೆಣ್ಣು, ನ್ಯಾಯ, ಧರ್ಮ, ನೀತಿ ಎಲ್ಲವೂ ಶತ್ರು ಎನ್ನುವ ಸ್ಥಿತಿ.

ಹೆಣ್ಣನ್ನು ಅಪಹರಿಸಿದ್ದಕ್ಕೆ ಇಡೀ ರಾಮಾಯಣವೇ ಸೃಷ್ಟಿಯಾಗಿರುವಾಗ, ದಿನಾ ರಸ್ತೆಯಲ್ಲಿ ಕೈಚೆಲ್ಲಿ ಹೋಗುತ್ತಿರುವ ಹೆಣ್ಣಿನ ಮಾನ ಪ್ರಾಣದಿಂದ ಭಾರತ ಅದೆಷ್ಟು ರಾಮಾಯಣ ದೃಷ್ಟಿಸಬೇಕಿತ್ತು..?

ಇಂದಿಗೂ ದಸರಾಗೆ ರಾವಣನನ್ನು ಸುಡುವ ನಾವು, ನಮ್ಮೊಳಗಿನ ರಾವಣನನ್ನು ಯಾಕೆ ಗುರುತಿಸಲಿಲ್ಲ?

ಹಾಗಾದರೆ ನಾವು ರಾವಣ ದಹನ ಕೇವಲ ಆಚರಣೆಯಾ ಅಥವಾ ಬರೀಯ ಸೋಶಿಯಲ್ ಮೀಡಿಯಾ ಸ್ಟೋರಿ, ಲೈಕ್ ಗೋಸ್ಕರ ಅಷ್ಟೇನಾ?

ನಿಜವಾದ ರಾವಣ ನಮ್ಮಲ್ಲೇ ಎಲ್ಲೋ ನಿಂತು ನಗುತ್ತಿರುವಾಗ ಅದ್ಯಾವುದೋ ಗೊಂಬೆಗೆ ಬೆಂಕಿ ಕೊಟ್ಟು ನಾವು ನಮ್ಮನ್ನೇ ಭ್ರಮೆಯಲ್ಲಿ ಇರಿಸಿದಂತೆ ಅಲ್ಲವೇ?

ನ್ಯಾಯಕ್ಕಾಗಿ ಕರಡಿ, ಗರುಡ, ಕೋತಿ, ಮರ, ಗಿಡ, ಪಶು ಪಕ್ಷಿ ಹೀಗೆ ಪ್ರಕೃತಿಯೇ ಜೊತೆಯಾಗುತ್ತಿದ್ದ ಆ ಕಾಲ ಈಗ ಎಲ್ಲಿ ಮರೆಯಾಯಿತು??

ಇದೇ ಮಣ್ಣಲ್ಲಿ ಜಾನಕಿ ಹುಟ್ಟಿದ್ದು, ಇದೇ ಮಣ್ಣಲ್ಲಿ ರಾಮ ತನ್ನ ಕಾಲಿಟ್ಟಿದ್ದು, ಇದೇ ಮಣ್ಣಲ್ಲಿ ವಿಜಯ ಪತಾಕೆಗಳು ಬೇರೂರಿದ್ದು.. ಆದರೆ ಈಗ..?

ಅದೇ ಪವಿತ್ರ ಭೂಮಿ, ಹೆಣ್ಣಿನ ಕಣ್ಣೀರು, ಮೊಂಬತ್ತಿಯ ಮೇಣ, ಪೋಸ್ಟರ್ಗಳ ಕಸದಿಂದ ಮುಚ್ಚಿ ಹೋಗಿದೆ.

ನ್ಯಾಯಕ್ಕಾಗಿ ನಾವು ಕೈ ಚಾಚಿ ನಿಂತಿರುವುದು ಕೂಡ ಕಣ್ಣಿಗೆ ಬಟ್ಟೆ ಕಟ್ಟಿ ನಿಂತ ಹೆಣ್ಣಿನ ಎದುರೇ!

ಸಾಕಿನ್ನು ಮುನ್ನಡೆದದ್ದು ನವ ಭಾರತ….; ಇನ್ನು ಸ್ವಲ್ಪ ಹಿಂದೆ ತ್ರೇತಾಯುಗಕ್ಕೆ ಹೋಗೋಣ… ಮತ್ತೆ ರಾವಣ ದಹನ, ಲಂಕಾ ಪತನ, ಮತ್ತೆ ಕಾಣಬೇಕು ನಾವು ದಶಾನನನ ಮರಣ… ಆಗಲಿ ಹೊಸ ಭಾರತದ ನಿರ್ಮಾಣ… ಸಿಗಲಿ ಹೆಣ್ಣು ಧೈರ್ಯವಾಗಿ ರಸ್ತೆಗಿಳಿಯಲು ಕಾರಣ.

ಈ ದಸರಾ ನಮ್ಮೊಳಗಿನ, ನಮ್ಮ ನಡುವಿನ ರಾವಣನನ್ನು ಭಸ್ಮ ಮಾಡಲಿ. ಈ ಬಾರಿಯ ದಸರಾ ನಮ್ಮೊಳಗೂ ಹಲವು ಹನುಮನ ಸೃಷ್ಟಿಸಲಿ, ದ್ವೀಪ ಉರಿದ ಕಾಲ ಮತ್ತೆ ಬರಲಿ, ಇನ್ನು ಉರಿಯಬೇಕಾದದ್ದು ಮೋಂಬತ್ತಿಯಲ್ಲ ಕಾಮದ ಹುಟ್ಟಡಗಿಸುವ ನ್ಯಾಯದ ಕಾಡ್ಗಿಚ್ಚು. ಕಿಡಿ ಹತ್ತಿ ಕಿಚ್ಚು ಚದುರಿ ಹಲವು ಕಪಟಿಗಳ ದಹನವಾಗಲಿ. ಮುಗಿಯಲಿ ಸೀತೆಯ ಅಗ್ನಿ ಪರೀಕ್ಷೆ…. ಮೊಳಗಲಿ ಹೊಸ ಯುದ್ಧ ಹೆಣ್ಣಿನ ರಕ್ಷಣೆಗಾಗಿ.. ಇದುವೇ ನಮ್ಮ ನಿರೀಕ್ಷೆ.

ತೇಜಸ್ವಿನಿ

ಟಾಪ್ ನ್ಯೂಸ್

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

GST

GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

ಚಾರಣಿಗರಿಗೆ ಆನ್‌ಲೈನ್‌ ಬುಕ್ಕಿಂಗ್‌ ಪ್ರಾರಂಭ: ಮುಂಗಡ ನೋಂದಣಿ ಮಾಡಲು ಅವಕಾಶ

Horoscope

Daily Horoscope: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-10-01 at 9.22.19 PM

Navaratri: ನವ ಮಹಾಭಾರತ- ದ್ರೌಪದಿಯ ನಿಟ್ಟುಸಿರಿಗೆ ಕೊನೆ ಎಂದು…? ಬದಲಾಗದ ಹೆಣ್ಣಿನ ಬವಣೆ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ನವಮಿಯ ಆಯುಧ ಪೂಜೆಯೂ, ದಶಮಿಯ ವಿಜಯವೂ…

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ಜಗನ್ಮಾತೆಯ ಜ್ಞಾನಪೂರ್ವಕ ಆರಾಧನೆಯಿಂದ ಲೋಕಕಲ್ಯಾಣ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

ನವರಾತ್ರಿ ಇಂದಿನ ಆರಾಧನೆ; ಕೋಟಿ ಸೂರ್ಯನಷ್ಟೇ ಪ್ರಕಾಶಮಾನಳು ಸಿದ್ಧಿ ಧಾತ್ರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ಆಟಗಾರ

PCB: ‘ನಮ್ಮ ಕ್ರಿಕೆಟ್‌ ಐಸಿಯುನಲ್ಲಿದೆ’ ಎಂದ ಪಾಕಿಸ್ತಾನದ ಮಾಜಿ ನಾಯಕ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Subrahmanya: ಕುಮಾರ ಪರ್ವತ ಚಾರಣ: ಅ.6ರ ಬಳಿಕ ಅವಕಾಶ ನಿರೀಕ್ಷೆ

Navaratri Special:  ನಮ್ಮೊಳಗಿನ ರಾವಣನ ಸುಡುವುದೆಂತು…?

Navaratri Special: ನಮ್ಮೊಳಗಿನ ರಾವಣನ ಸುಡುವುದೆಂತು…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.