ಪಕ್ಷಾಂತರ, ಕುಟುಂಬ ರಾಜಕಾರಣದ ಕಂಟಕ: ಈ ಬಾರಿ ಮಮತಾಗೆ ಅಧಿಕಾರ ಕೈತಪ್ಪಲಿದೆಯೇ?
ಟಿಎಂಸಿ ಮಾಜಿ ಸಚಿವ ಸುವೇಂದು ಅಧಿಕಾರಿ ಬಿಜೆಪಿಯಿಂದ ಸ್ಪರ್ಧಿಸುವ ಮೂಲಕ ಸಡ್ಡು ಹೊಡೆದಿದ್ದಾರೆ.
Team Udayavani, Mar 9, 2021, 12:50 PM IST
ಮಣಿಪಾಲ: ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಅಖಾಡ ರಂಗೇರತೊಡಗಿದ್ದು, ಮತ್ತೊಂದೆಡೆ ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ದಿನದಿಂದ ದಿನಕ್ಕೆ ಹಿನ್ನಡೆಯಾಗತೊಡಗಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಟಿಕೆಟ್ ನಿರಕಾರಿಸಿದ ಹಿನ್ನೆಲೆಯಲ್ಲಿ ಐವರು ಹಾಲಿ ಶಾಸಕರು ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾದ ಪರಿಣಾಮ ಇತ್ತೀಚೆಗೆ ತೃಣ ಮೂಲ ಕಾಂಗ್ರೆಸ್ ಮಾಲ್ಡಾ ಜಿಲ್ಲಾ ಪರಿಷತ್ ನಲ್ಲಿ ಅಧಿಕಾರ ಕಳೆದುಕೊಂಡಿತ್ತು.!
ಇದನ್ನೂ ಓದಿ:ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಕುಸಿದು ಬಿದ್ದು ಸಾವು!
ಟಿಎಂಸಿ ಪ್ರಭಾವಿ ಸಚಿವ ಸುವೇಂದು ಅಧಿಕಾರಿ ತಮ್ಮ 35 ಮಂದಿ ನಾಯಕರ ಜತೆ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದ ನಂತರ ಸೋಮವಾರ(ಮಾರ್ಚ್ 08) ಟಿಎಂಸಿಯ ಐವರು ಶಾಸಕರು, ಸಂಸದ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಒಂದೇ ದಿನದಲ್ಲಿ 23 ಸದಸ್ಯರು(ಟಿಎಂಸಿ) ಬಿಜೆಪಿಯನ್ನು ಬೆಂಬಲಿಸಿದ ಪರಿಣಾಮ 38 ಸದಸ್ಯ ಬಲದ ಮಾಲ್ಡಾ ಜಿಲ್ಲಾ ಪರಿಷತ್ ಬಿಜೆಪಿ ವಶವಾಗಿದೆ.
ನಾಲ್ಕು ಬಾರಿ ಟಿಎಂಸಿ ಶಾಸಕಿಯಾಗಿದ್ದ ಸೋನಾಲಿ ಗುಹಾ ತೃಣಮೂಲ ಕಾಂಗ್ರೆಸ್ ವರಿಷ್ಠೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ನಿಕಟವರ್ತಿಯಾಗಿದ್ದು, ಎರಡು ದಶಕಗಳ ಕಾಲ ಪಕ್ಷದಲ್ಲಿದ್ದ ಗುಹಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಿಂಗೂರು ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ 80ವರ್ಷದ ರವೀಂದ್ರ ಭಟ್ಟಾಚಾರ್ಯಗೂ ಕೂಡಾ ಟಿಕೆಟ್ ನಿರಾಕರಿಸಲಾಗಿದೆ.
ಸೋನಾಲಿ ಗುಹಾ ಮತ್ತು ಭಟ್ಟಾಚಾರ್ಯ ಇದೀಗ ಟಿಎಂಸಿ ತೊರೆದು ಭಾರತೀಯ ಜನತಾ ಪಕ್ಷದ ಜತೆ ಕೈಜೋಡಿಸಿದ್ದು, ಇದರಿಂದಾಗಿ ಸಿಂಗೂರು ಮತ್ತು ನಂದಿಗ್ರಾಮದ ಪ್ರಮುಖ ಟಿಎಂಸಿ ಮುಖಂಡರನ್ನು ಕಳೆದುಕೊಂಡಂತಾಗಿದೆ.
ಟಾಟಾ ಮೋಟಾರ್ಸ್ ಕಂಪನಿಗೆ ಎಡಪಕ್ಷ ಸರ್ಕಾರ ಸಿಂಗೂರು ಬಳಿ ಜಮೀನು ಮಂಜೂರು ಮಾಡಿತ್ತು. ಆದರೆ ಸಿಂಗೂರ್ ರೈತರ ಭೂಮಿಯ ಪರವಾಗಿ ಹೋರಾಡಿದ್ದ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ 34 ವರ್ಷಗಳ ಕಾಲ ಅಧಿಕಾರದ ಗದ್ದುಗೆಯಲ್ಲಿದ್ದ ಎಡಪಕ್ಷಗಳ ಅಧಿಪತ್ಯವನ್ನು ಕೊನೆಗೊಳಿಸಿ ಮುಖ್ಯಮಂತ್ರಿ ಹುದ್ದೆಗೆ ಏರಿದ್ದರು.
ಸಿಂಗೂರು, ನಂದಿಗ್ರಾಮದ ಹೋರಾಟದ ಮೂಲಕವೇ ಜನಪ್ರಿಯರಾಗಿದ್ದ ಮಮತಾ ಬ್ಯಾನರ್ಜಿಗೆ ಇದೀಗ ನಂದಿಗ್ರಾಮದಲ್ಲಿ ಟಿಎಂಸಿ ಮಾಜಿ ಸಚಿವ ಸುವೇಂದು ಅಧಿಕಾರಿ ಬಿಜೆಪಿಯಿಂದ ಸ್ಪರ್ಧಿಸುವ ಮೂಲಕ ಸಡ್ಡು ಹೊಡೆದಿದ್ದಾರೆ.
ಟಿಕೆಟ್ ನಿರಾಕರಿಸಲ್ಪಟ್ಟ ಟಿಎಂಸಿಯ ಜಾಟು ಲಾಹಿರಿ, ಮಾಜಿ ಫುಟ್ಬಾಲ್ ಆಟಗಾರ ದಿಪೇಂದು ಬಿಸ್ವಾಸ್, ಶೀತಲ್ ಸರ್ದಾರ್ ಕೂಡಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕುಟುಂಬ ರಾಜಕಾರಣ ದೀದಿಗೆ ಮುಳುವಾಗುತ್ತಿದೆಯೇ?
ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹೆಚ್ಚು ಕಾಲ ಜನಪ್ರಿಯ ಪಕ್ಷವಾಗಿರಲ್ಲ, ಇದು ಕೂಡಾ ಕುಟುಂಬ ರಾಜಕಾರಣದ ಪಕ್ಷವಾಗಲಿದೆ. ನಿಷ್ಠಾವಂತರಿಗೆ ಟಿಎಂಸಿಯಲ್ಲಿ ಯಾವುದೇ ಅವಕಾಶ ಇಲ್ಲ ಎಂದು ಭಟ್ಟಾಚಾರ್ಯ ಆರೋಪಿಸಿದ್ದಾರೆ.
ನಟಿ ತನುಶ್ರೀ ಚಕ್ರವರ್ತಿ ಬಿಜೆಪಿ ಸೇರ್ಪಡೆ ನಂತರ ಪ್ರತಿಕ್ರಿಯೆ ನೀಡಿರುವ ಟಿಎಂಸಿ ಹಿರಿಯ ಮುಖಂಡ ಸುಗತಾ ರಾಯ್, ಟಿಎಂಸಿ ಮುಖಂಡರ ವಲಸೆಗೆ ಯಾವುದೇ ನೈತಿಕ ಮೌಲ್ಯವಿಲ್ಲ, ಕೇವಲ ಅಧಿಕಾರದ ಆಸೆಗಾಗಿ ಪಕ್ಷಾಂತರ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ತೃಣಮೂಲ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ, ಟಿಎಂಸಿ ಶೀಘ್ರದಲ್ಲಿಯೇ ವಿಭಜನೆಯಾಗಲಿದೆ ಎಂದು ಬಿಜೆಪಿ ಹೇಳಿದೆ. ಟಿಎಂಸಿ ವಿರುದ್ಧ ಹೋರಾಡುವವರು ಬಿಜೆಪಿ ಜತೆ ಕೈಜೋಡಿಸಬೇಕು ಎಂದು ಘೋಷ್ ಮನವಿ ಮಾಡಿಕೊಂಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 18 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಶ್ಚಿಮಬಂಗಾಳದಲ್ಲಿ ನೆಲೆ ಸ್ಥಾಪಿಸಿಕೊಂಡಿತ್ತು. ಹಿಂದಿನ ಚುನಾವಣೆಯಂತೆ ರಾಜ್ಯದ ಮತದಾರರು ಕೂಡಾ ಟಿಎಂಸಿ ಪರ ಹೆಚ್ಚು ಒಲವು ಹೊಂದಿಲ್ಲ ಎನ್ನಲಾಗಿದೆ. ಎಡಪಕ್ಷದ ನಂತರ ಅಧಿಕಾರಕ್ಕೇರಿದ್ದ ಟಿಎಂಸಿ ರಾಜ್ಯದಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿಲ್ಲ ಎಂಬ ಆರೋಪವಿದೆ. ಏತನ್ಮಧ್ಯೆ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್ ನ 24 ಶಾಸಕರು, ಇಬ್ಬರು ಸಂಸದರು, ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಸಿಪಿಐ(ಎಂ), ಸಿಪಿಐನ ತಲಾ ಒಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
294 ಸದಸ್ಯಬಲದ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಟಿಎಂಸಿ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡಲಿದೆ. ಮಾರ್ಚ್ 27ರಿಂದ ಸುಮಾರು 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಪಶ್ಚಿಮಬಂಗಾಳದ ಮತದಾರ ಯಾರ ಕೈ ಹಿಡಿಯಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.