2 ದಿನದಲ್ಲಿ 13 ಬಾರಿ ಕಾರು ತಪಾಸಣೆ: ಸಿಎಂ

ಇದು ಚುನಾವಣೆಯೋ ತಪಾಸಣೆಯೋ; ಚುನಾವಣೆ ಆಯೋಗದ ವಿರುದ್ಧ ಸಿಎಂ ಗರಂ

Team Udayavani, Apr 5, 2019, 6:05 AM IST

CM-KUMA-HD

ಕಾರವಾರ: “ಬುಧವಾರದಿಂದ ಕಾರಿನಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಎರಡು ದಿನದಲ್ಲಿ ಒಟ್ಟು 13 ಸಲ ನನ್ನ ಕಾರು ತಪಾಸಣೆ ಮಾಡಲಾಗಿದೆ’ಎಂದು ಸಿಎಂ ಕುಮಾರಸ್ವಾಮಿ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ಹೊರಹಾಕಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉತ್ತರ ಕನ್ನಡದಲ್ಲೇ ಗೋಕರ್ಣದಿಂದ ಕಾರವಾರ ತಲುಪುವ ವೇಳೆಗೆ ಎರಡು ಸಲ ವಾಹನ ತಪಾಸಣೆ ಮಾಡಲಾಗಿದೆ. ಬೆಂಬಲಿಗರ ವಾಹನಗಳನ್ನು ಸಹ ತಪಾಸಣೆ ಮಾಡಲಾಗುತ್ತಿದೆ. ಮಂಡ್ಯದಲ್ಲಿ ಎದುರಾಳಿಗಳ ವಾಹನಗಳಲ್ಲಿ ಏನು ಸಾಗಿಸಬೇಕೋ ಅದನ್ನು ಆರಾಮದಿಂದ ಸಾಗಿಸುತ್ತಲೇ ಇದ್ದಾರೆ. ಹಣ ಎಲ್ಲಿ ಸೇರಬೇಕು ಅಲ್ಲಿ ಸೇರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಮ್ಮನ್ನು ಗುರಿ ಮಾಡಿ ತಪಾಸಣೆ ಮಾಡುವುದು ಎಷ್ಟು ಸರಿ? ಇದನ್ನು ಚುನಾವಣಾ ಆಯೋಗ ಪರಿಶೀಲಿಸಬೇಕು. ಈ ತಾರತಮ್ಯ ಯಾಕೆ? ಅಧಿ ಕಾರಿಗಳು ಚುನಾವಣಾ ಆಯೋಗದ ನಿರ್ದೇಶನವಿದೆ ಎಂದು ಹೇಳುತ್ತಿದ್ದಾರೆ. ನಾನು ಸಹ ತಪಾಸಣೆ ಮಾಡಿಕೊಳ್ಳಿ ಎನ್ನುತ್ತಿದ್ದೇನೆ. ಆದರೆ ಎರಡು ದಿನದಲ್ಲಿ 13 ಕಡೆ ತಪಾಸಣೆ ಮಾಡಲಾಗಿದೆ ಯಾವುದೂ ಅತಿಯಾಗಬಾರದು ಎಂದರು.

ಬಾಲಕೃಷ್ಣ ಏನು ಹೇಳ್ತಾರೆ ಈಗ?: ಐಟಿ ಅಧಿಕಾರಿ ಮೇಲೆ ನಡೆದ ಸಿಬಿಐ ದಾಳಿಯಲ್ಲಿ 15 ಲಕ್ಷ ನಗದು ಮೊದಲು ಸಿಕ್ಕಿದೆ. ನಂತರ ಅಧಿ ಕಾರಿಯ ಮನೆಯಲ್ಲಿ 1 ಕೋಟಿಗೂ ಹೆಚ್ಚಿನ ಹಣ ಸಿಕ್ಕಿದೆ. ಇದು ಐಟಿ ನಿರ್ದೇಶಕ ಬಾಲಕೃಷ್ಣ ಅವರ ಕೆಳಗಿನ ಅಧಿ ಕಾರಿಗಳ ಕತೆ. ಇಂಥ ಭ್ರಷ್ಟರನ್ನು ಇಟ್ಟುಕೊಂಡು ಐಟಿ ನಿರ್ದೇಶಕ ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಮತ್ತು ಆಪ್ತರ ಮನೆಯ ಮೇಲೆ ದಾಳಿ ಮಾಡಿಸುತ್ತಾರೆ. ಮಂಡ್ಯ, ಹಾಸನದ ಗುತ್ತಿಗೆದಾರರ ಮೇಲೆ ದಾಳಿ ಮಾಡಲಾಗುತ್ತದೆ. ಉಳಿದ ಜಿಲ್ಲೆಗಳಲ್ಲಿ ಗುತ್ತಿಗೆದಾರರು ಇಲ್ಲವೇ? ಬಿಜೆಪಿ ನಾಯಕರ ಮನೆಗಳು ಇವರಿಗೆ ಕಾಣುವುದಿಲ್ಲವೇ? ಎಲ್ಲವನ್ನೂ ಜನತೆ ನೋಡುತ್ತಿದ್ದಾರೆ. ಇದಕ್ಕೆ ಜನರೇ ಐಟಿ ಅಧಿಕಾರಿಗಳಿಗೆ ಉತ್ತರ ಕೊಡುವ ಸಮಯ ಬರಬಹುದು ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.