452 ನಾಮಪತ್ರ ಸಲ್ಲಿಕೆ
Team Udayavani, Mar 27, 2019, 7:21 AM IST
ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಬೆಂಗಳೂರು: ಲೋಕಸಭೆಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 14
ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 452 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ
ಸಲ್ಲಿಸಲು ಮಾ.26 ಕೊನೇ ದಿನವಾಗಿತ್ತು. ಅದರಂತೆ 14 ಲೋಕ ಸಭಾ ಕ್ಷೇತ್ರಗಳಲ್ಲಿ 340 ಅಭ್ಯರ್ಥಿ ಗಳಿಂದ 452 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಇದರಲ್ಲಿ ಬೆಂಗಳೂರು
ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು 36 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ, ಮೈಸೂರಿನಲ್ಲಿ ಅತಿ ಹೆಚ್ಚು 49 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ಮಾಹಿತಿ ನೀಡಿದರು. ಈ 14 ಕ್ಷೇತ್ರಗಳಲ್ಲಿ ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾ.29 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ. 2014ರ ಲೋಕಸಭೆ ಚುನಾವಣೆ ವೇಳೆ ಈ 14 ಕ್ಷೇತ್ರಗಳಲ್ಲಿ 306 ನಾಮಪತ್ರಗಳು ಸಲ್ಲಿಕೆಯಾಗಿ, 233 ಅಭ್ಯರ್ಥಿ ಗಳು ಅಂತಿಮ ಕಣದಲ್ಲಿದ್ದರು ಎಂದು ಸಂಜೀವ ಕುಮಾರ್ ಮಾಹಿತಿ ನೀಡಿದರು.
ಕ್ಷೇತ್ರ ಅಭ್ಯರ್ಥಿಗಳು ನಾಮಪತ್ರಗಳು
ಉಡುಪಿ-ಚಿಕ್ಕಮಗಳೂರು 14 26
ಹಾಸನ 10 18
ದಕ್ಷಿಣ ಕನ್ನಡ 15 24
ಚಿತ್ರದುರ್ಗ 24 29
ತುಮಕೂರು 23 35
ಮಂಡ್ಯ 29 37
ಮೈಸೂರು 34 49
ಚಾಮರಾಜನಗರ 13 18
ಬೆಂಗಳೂರು ಗ್ರಾಂ. 22 26
ಬೆಂಗಳೂರು ಉತ್ತರ 37 46
ಬೆಂಗಳೂರು ಕೇಂದ್ರ 35 40
ಬೆಂಗಳೂರು ದಕ್ಷಿಣ 36 41
ಚಿಕ್ಕಬಳ್ಳಾಪುರ 25 32
ಕೋಲಾರ 23 31
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.