ದ. ಕ.ದಲ್ಲಿ 2 ಲಕ್ಷ ಮತದ ಅಂತರದ ಜಯದ ಗುರಿ: ಸಂಜೀವ ಮಠಂದೂರು


Team Udayavani, Mar 27, 2019, 6:30 AM IST

MATANDOOR

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ಮತದಾರರಲ್ಲಿ ಈ ಬಾರಿ ಹಿಂದಿಗಿಂತಲೂ ಹೆಚ್ಚು ಒಲವು ವ್ಯಕ್ತವಾಗುತ್ತಿದ್ದು, ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸುವ ಗುರಿ ಹಾಗೂ ವಿಶ್ವಾಸ ಇದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು ಹೇಳಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಈಗಾಗಲೇ ಸಂಘಟನಾತ್ಮಕ ಕಾರ್ಯಗಳು ಪೂರ್ಣಗೊಂಡು ಪ್ರಚಾರ ಬಿರುಸುಗೊಂಡಿವೆ. ಮಾ.28ರಿಂದ 30ರ ವರೆಗೆ ಪೇಜ್‌ ಪ್ರಮುಖರಿಂದ ಮತದಾರ ಸಂಪರ್ಕ ನಡೆಯಲಿದೆ. ಎ.3ರಿಂದ 5ರ ವರೆಗೆ ಬೂತ್‌ ಮಟ್ಟದಲ್ಲಿ ಮತದಾರರ ಮನೆ ಭೇಟಿ ನಡೆಯಲಿದೆ. ಎ.8ರಿಂದ 14ರ ವರೆಗೆ ಸಂಘಟನೆಯ ಪ್ರಮುಖರು, ಪಕ್ಷದ ನಾಯಕರಿಂದ ಗ್ರಾಮೀಣ ಮತ್ತು ನಗರ ಸಂವಾದ ಕಾರ್ಯಕ್ರಮ ಹಾಗೂ ಎ.15ರಂದು ರೋಡ್‌ಶೋ ನಡೆಯಲಿದೆ ಎಂದರು.

ನಳಿನ್‌ ಎರಡು ಅವಧಿಗಳಲ್ಲಿ ಸಂಸದರಾಗಿ ಆಯ್ಕೆಯಾಗಿ ಅನೇಕ ಅಭಿವೃದ್ಧಿ ಕೈಗೊಂಡಿದ್ದಾರೆ. ಐದು ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ 16,000 ಕೋ.ರೂ.ಗೂ ಅಧಿಕ ಅನುದಾನ ತಂದಿದ್ದಾರೆ. ಮೋದಿಯವರ ಐದು ವರ್ಷಗಳ ಆಡಳಿತ ಮತ್ತು ನಳಿನ್‌ ಅವರ ಜನಪರ ಕಾರ್ಯಗಳು ಹಾಗೂ ಅಭಿವೃದ್ಧಿ ಯೋಜನೆಗಳು ಜನರ ಮುಂದಿವೆ. ಈ ಬಾರಿ ನಳಿನ್‌ ಕುಮಾರ್‌ ಕಟೀಲು ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್‌ ನಾಯಕರು ಹತಾಶರಾಗಿ ಬದಿಗೆ ಸರಿದಿದ್ದಾರೆ.

ಯುವಕರೊಬ್ಬರನ್ನು ಕಣಕ್ಕೆ ಇಳಿಸಿದ್ದಾರೆ. ನಾಯಕರ ನಡುವೆ ಗೊಂದಲಮಯ ಪರಿಸ್ಥಿತಿ ನೆಲೆಸಿದೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರಕಾರದಡಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಅರಾಜಕತೆ ನೆಲೆಸಿದೆ. ಜನ ಬೇಸತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಆಕ್ರೋಶವನ್ನು ಹೊರಹಾಕಲಿದ್ದಾರೆ ಎಂದವರು ಹೇಳಿದರು.

ಶಾಸಕರಾದ ಅಂಗಾರ, ಡಾ| ಭರತ್‌ ಶೆಟ್ಟಿ, ಹರೀಶ್‌ ಪೂಂಜ, ಮಾಧ್ಯಮ ವಕ್ತಾರರಾದ ಜೀತೆಂದ್ರ ಕೊಟ್ಟಾರಿ, ರಾಕೇಶ್‌ ಕೊಟ್ಟಾರಿ ಉಪಸ್ಥಿತರಿದ್ದರು.

ಚುನಾವಣ ಪ್ರಚಾರಕ್ಕೆ ಮೋದಿ
ಕ್ಷೇತ್ರದಲ್ಲಿ ವಿವಿಧ ಕಡೆ ಬಿಜೆಪಿ ಪರ 55 ಬಹಿರಂಗ ಚುನಾವಣ ಪ್ರಚಾರ ಸಭೆಗಳು ನಡೆಯಲಿವೆ. ಪ್ರಧಾನಿ ಮೋದಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಭಾಗವಹಿಸುವ ದಿನಾಂಕ ವಾರದೊಳಗೆ ನಿರ್ಧಾರ ವಾಗಲಿದೆ ಎಂದು ಸಂಜೀವ ಮಠಂದೂರು ತಿಳಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.