ರಾಯಭಾರಿ ದ್ರಾವಿಡ್‍ಗೆ ಮತದಾನದ ಹಕ್ಕಿಲ್ಲ


Team Udayavani, Apr 15, 2019, 3:00 AM IST

rayabhari

ಬೆಂಗಳೂರು: ಮತದಾನ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಜಾಗೃತಿ ಮೂಡಿಸಿ ಉತ್ತೇಜನ ನೀಡಲು ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ಡ್ರಾವಿಡ್‌ ಅವರನ್ನು ಲೋಕಸಭಾ ಚುನಾವಣೆಗೆ ರಾಜ್ಯದ “ಚುನಾವಣಾ ಐಕಾನ್‌’ ( ರಾಯಭಾರಿ) ಆಗಿ ಕೇಂದ್ರ ಚುನಾವಣಾ ಆಯೋಗ ನೇಮಿಸಿದೆ. ಆದರೆ, ವಿಪರ್ಯಾಸದ ಸಂಗತಿ ಏನೆಂದರೆ, ಅವರೇ ಈ ಬಾರಿ ಮತದಾನದಿಂದ ವಂಚಿತರಾಗಲಿದ್ದಾರೆ.

ಏಕೆಂದರೆ, 2019ರ ಲೋಕಸಭಾ ಚುನಾವಣೆಗೆ ಸಿದ್ಧಪಡಿಸಲಾಗಿರುವ ಅಂತಿಮ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ರಾಹುಲ್‌ ಡ್ರಾವಿಡ್‌ ಅವರ ಸ್ವಯಂಕೃತ ಪ್ರಮಾದದಿಂದಾಗಿ ಮತದಾರರ ಪಟ್ಟಿಯಿಂದ ಅವರ ಹೆಸರು ಡಿಲಿಟ್‌ ಆಗಿದೆ.

ರಾಹುಲ್‌ ಡ್ರಾವಿಡ್‌ ಅವರು ಇಂದಿರಾನಗರದಿಂದ ಆರ್‌ಎಂವಿ ಬಡಾವಣೆಗೆ ವಾಸಸ್ಥಳ ಬದಲಿಸಿದ್ದರು ಎನ್ನಲಾಗಿದ್ದು, ಅದರಂತೆ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಡ್ರಾವಿಡ್‌ ಸಹೋದರ ಫಾರಂ-7 (ಹೆಸರು ತೆಗೆದು ಹಾಕುವ) ಭರ್ತಿ ಮಾಡಿ ಕೊಟ್ಟಿದ್ದರು. ಅದರಂತೆ ಅವರ ಹೆಸರು ಮತದಾರರ ಪಟ್ಟಿಯಿಂದ ಡಿಲಿಟ್‌ ಮಾಡಲಾಗಿತ್ತು.

ಆದರೆ, ವಾಸಸ್ಥಳದ ವಿಳಾಸ ಬದಲಾವಣೆ ಆದ ಮೇಲೆ ಫಾರಂ-6 ಭರ್ತಿ ಮಾಡಿ ಹೆಸರು ಸೇರ್ಪಡೆಗೆ ಮಾ.16ರೊಳಗೆ ಅರ್ಜಿ ಸಲ್ಲಿಸಬೇಕಿತ್ತು. ಆದರೆ, ರಾಹುಲ್‌ ಡ್ರಾವಿಡ್‌ ಅರ್ಜಿ ಕೊಡದೇ ಇದ್ದಿದ್ದರಿಂದ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿಲ್ಲ. ಸೇರಿಸಲು ಈಗ ಅವಕಾಶವೂ ಇಲ್ಲ.

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವೇಳೆ ರಾಹುಲ್‌ ಡ್ರಾವಿಡ್‌ ಅವರ ಸಹೋದರ ಫಾರಂ-7 ಸಲ್ಲಿಸಿದ್ದರಿಂದ ಅವರ ಹೆಸರನ್ನು ಹಳೆಯ ವಿಳಾಸದ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಯಿತು. ಆದರೆ, ಹೊಸ ವಿಳಾಸದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವ ಸಂಬಂಧ ಮತಗಟ್ಟೆ ಅಧಿಕಾರಿಗಳು ಮತ್ತು ಬಿಬಿಎಂಪಿ ಸಿಬ್ಬಂದಿ ಮೂರು ಬಾರಿ ರಾಹುಲ್‌ ಡ್ರಾವಿಡ್‌ ಅವರ ಹೊಸ ವಾಸದ ಮನೆಗೆ ಭೇಟಿ ಕೊಟ್ಟಿದ್ದಾರೆ.

ಆದರೆ, ಅವರ ಸಂಪರ್ಕ ಸಾಧ್ಯವಾಗಿಲ್ಲ. ಆಪ್ತ ಸಹಾಯಕರ ಪ್ರಕಾರ ಆಗ ಡ್ರಾವಿಡ್‌ ವಿದೇಶದಲ್ಲಿದ್ದರು. ಹಾಗಾಗಿ, ನಿಗದಿತ ದಿನಾಂಕದೊಳಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸದ ಕಾರಣ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇಲ್ಲ. ಹಾಗಾಗಿ, ಈ ಬಾರಿ ಅವರು ಮತದಾನ ಮಾಡಲು ಅವಕಾಶವಿಲ್ಲ ಎಂದು ಬಿಬಿಎಂಪಿ ಆಯುಕ್ತರೂ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಕಳೆದ ಬಾರಿಯೂ ಗೊಂದಲ ಆಗಿತ್ತು: 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ರಾಹುಲ್‌ ಡ್ರಾವಿಡ್‌ ಅವರನ್ನು ರಾಜ್ಯಮಟ್ಟದ ಚುನಾವಣಾ ಐಕಾನ್‌ ಆಗಿ ನೇಮಕ ಮಾಡಲಾಗಿತ್ತು. ಆದರೆ, ಐಕಾನ್‌ ಘೋಷಣೆ ಕಾರ್ಯಕ್ರಮದಲ್ಲೇ ಅವರು ಗೈರು ಹಾಜರಾಗಿದ್ದರು. ಅದಕ್ಕೆ, ಹೆಚ್ಚಾಗಿ ವಿದೇಶದಲ್ಲಿರುವ ರಾಹುಲ್‌ ಡ್ರಾವಿಡ್‌ ಅವರನ್ನು ಐಕಾನ್‌ ಆಗಿ ನೇಮಕ ಮಾಡಿದರೆ ಉದ್ದೇಶ ಸಫ‌ಲವಾಗುವುದಿಲ್ಲ ಎಂಬ ಆಕ್ಷೇಪಗಳು ಕೇಳಿ ಬಂದಿದ್ದವು.

ರಾಹುಲ್‌ ಡ್ರಾವಿಡ್‌ ಅವರ ಹೆಸರು ಮತದಾರರ ಪಟ್ಟಿಯಿಂದ ಡಿಲಿಟ್‌ ಆಗಿರುವುದು ಉದ್ದೇಶಪೂರ್ವಕವಾಗಿ ಅಲ್ಲ. ಈಗ ಅದಕ್ಕೆ ಪರಿಹಾರವೂ ಇಲ್ಲ. ಕಳೆದ ವಿಧಾನಸಭೆ ಚುನಾವಣೆಯಿಂದಲೂ ರಾಹುಲ್‌ ಡ್ರಾವಿಡ್‌ ರಾಜ್ಯಮಟ್ಟದ ಚುನಾವಣಾ ಐಕಾನ್‌ ಆಗಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕಂತೂ ಅವರಿಗಿಲ್ಲ. ಆದಾಗ್ಯೂ, ಮತದಾರರ ಪಟ್ಟಿಯಲ್ಲಿ ಹೆಸರು ಡಿಲಿಟ್‌ ಆಗಿರುವುದನ್ನು ಮುಂದಿಟ್ಟುಕೊಂಡು ಅವರು ಐಕಾನ್‌ ಆಗಿರುವ ವಿಚಾರದ ಬಗ್ಗೆ ಚರ್ಚೆ ಬೆಳೆಸುವುದು ಬೇಡ.
-ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.