“ಪ್ರಕಾಶ’ಮಾನವಾಗಲು ಅಣ್ಣಾ ತೊಡರುಗಾಲು

ರಣಾಂಗಣ: ಚಿಕ್ಕೋಡಿ

Team Udayavani, Apr 17, 2019, 3:00 AM IST

prakasha

ಬೆಳಗಾವಿ: ಅಸಮಾಧಾನದ ಹೊಗೆಯ ಮಧ್ಯೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡದ ಚಿತ್ರಣ ಸ್ಪಷ್ಟವಾಗಿದ್ದು ಇಬ್ಬರು ಪ್ರಭಾವಿ ನಾಯಕರ ಮಧ್ಯೆ ನೇರ ಕುಸ್ತಿಗೆ ಮತದಾರರು ಸಾಕ್ಷಿಯಾಗಲಿದ್ದಾರೆ. ಕಾಂಗ್ರೆಸ್‌ನಿಂದ ಪ್ರಕಾಶ ಹುಕ್ಕೇರಿ ಮರು ಆಯ್ಕೆ ಬಯಸಿದ್ದರೆ, ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಪ್ರಬಲ ಪೈಪೋಟಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಕಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಹೊರತುಪಡಿಸಿ ಬಹುಜನ ಸಮಾಜ ಪಕ್ಷದ ಮಚ್ಚೇಂದ್ರ ಕಾಡಾಪುರೆ ಸೇರಿ 9 ಜನ ಉಳಿದುಕೊಂಡಿದ್ದಾರೆ. ಆದರೆ ಪ್ರಕಾಶ ಹುಕ್ಕೇರಿ ಹಾಗೂ ಅಣ್ಣಾಸಾಹೇಬ ಜೊಲ್ಲೆ ಮಧ್ಯೆ ನೇರ ಕದನ ಇರುವುದರಿಂದ ಉಳಿದ ಅಭ್ಯರ್ಥಿಗಳ ಬಗ್ಗೆ ಅಂತಹ ಆಸಕ್ತಿ ಮತದಾರರಲ್ಲಿ ಕಾಣುತ್ತಿಲ್ಲ.

ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಈ ಕ್ಷೇತ್ರ ನಂತರ ಯಾರಿಗೂ ಭದ್ರವಾಗಿ ನೆಲೆ ಕೊಟ್ಟಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಈ ಕೋಟೆಯ ವಶಕ್ಕೆ ಆಗಾಗ ಪೈಪೋಟಿ ನಡೆದೇ ಇದೆ. ಸಕ್ಕರೆ ಕಾರ್ಖಾನೆಗಳು ಹಾಗೂ ಡಿಸಿಸಿ ಬ್ಯಾಂಕ್‌ ರಾಜಕಾರಣ ಇಲ್ಲಿ ಚುನಾವಣೆಯ ಮುಖ್ಯ ವಿಷಯ. ನಂತರ ಜಾತಿ ಸಮೀಕರಣ. ಇದಾದ ಮೇಲೆ ಆಯಾ ಪಕ್ಷಗಳ ಸಾಧನೆ. ಬಲಾಡ್ಯ ವ್ಯಕ್ತಿಗಳು ಇಲ್ಲಿರುವುದರಿಂದ ಪಕ್ಷಗಳ ಹೆಸರು ನಗಣ್ಯ.

ಅಣ್ಣಾಸಾಹೇಬ ಜೊಲ್ಲೆಗೆ ಇದು ಮೊದಲ ಲೋಕಸಭೆ ಚುನಾವಣೆ. ವಿಧಾನಸಭೆ ಚುನಾವಣೆಯಲ್ಲಿ ಪ್ರಕಾಶ ಹುಕ್ಕೇರಿ ಹಾಗೂ ಅವರ ಪುತ್ರ ಗಣೇಶ ವಿರುದ್ಧ ಸೋಲು ಅನುಭವಿಸಿರುವ ಜೊಲ್ಲೆಗೆ ಈ ಎರಡೂ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ಈಗ ಒದಗಿ ಬಂದಿದೆ.

ಕಠಿಣ ಸವಾಲಿನ ಚುನಾವಣೆ – ಕ್ಷೇತ್ರದಲ್ಲಿನ ವಾತಾವರಣ ಗಮನಿಸಿದರೆ ಇಬ್ಬರೂ ಅಭ್ಯರ್ಥಿಗಳಿಗೂ ಚುನಾವಣೆ ಸರಳವಾಗಿಲ್ಲ. ಎರಡೂ ಪಕ್ಷಗಳಲ್ಲಿ ಆಂತರಿಕ ಅಸಮಾಧಾನ ಇರುವುದೇ ಇದಕ್ಕೆ ಮುಖ್ಯ ಕಾರಣ. ಕ್ಷೇತ್ರದ ಜನರಲ್ಲಿ ಇಬ್ಬರ ಬಗ್ಗೆಯೂ ಒಳ್ಳೆಯ ಅಭಿಪ್ರಾಯ ಇದ್ದರೂ ಮುಖಂಡರ ಮನಸ್ತಾಪ ಅಭ್ಯರ್ಥಿಗಳ ಮುನ್ನಡೆಗೆ ಅಡ್ಡಿಯಾಗಿದೆ.

ಟಿಕೆಟ್‌ ಹ‌ಂಚಿಕೆ ವಿಷಯದಲ್ಲಿ ಎರಡೂ ಪಕ್ಷಗಳಲ್ಲಿ ಸಾಕಷ್ಟು ಅಪಸ್ವರಗಳು ಕೇಳಿ ಬಂದಿದ್ದವು. ಅದರಲ್ಲೂ ಬಿಜೆಪಿ ಟಿಕೆಟ್‌ ವಿಷಯ ರಾಜ್ಯಮಟ್ಟದಲ್ಲಿ ಬಹಳ ದೊಡ್ಡ ಸುದ್ದಿ ಮಾಡಿತ್ತು. ಕಡೆಯ ಕ್ಷಣದವರೆಗೆ ಹೆಸರು ಘೋಷಣೆ ಮಾಡದೇ ಇದ್ದದ್ದು ಗೊಂದಲಕ್ಕೆ ಕಾರಣವಾಗಿತ್ತು. ಟಿಕೆಟ್‌ ಮೇಲೆ ಆಸೆ ಇಟ್ಟುಕೊಂಡಿದ್ದ ಮಾಜಿ ಸಂಸದ ರಮೇಶ ಕತ್ತಿ ಬಂಡಾಯದ ಸೂಚನೆ ಸಹ ನೀಡಿದ್ದರು.

ಕಾಂಗ್ರೆಸ್‌ಗೆ ಸೇರುವ ಬೆದರಿಕೆ ಹಾಕಿದ್ದರು. ಕೊನೆಗೆ ಇವರ ಬಂಡಾಯವನ್ನು ಶಮನ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬೆಳಗಾವಿಗೆ ಬರಬೇಕಾಯಿತು. ಕತ್ತಿ ಅವರ ಈ ಅಸಮಾಧಾನ ಚುನಾವಣೆಯಲ್ಲಿ ಬಿಜೆಪಿಗೆ ಸಮಸ್ಯೆ ಉಂಟು ಮಾಡಿದರೂ ಅಚ್ಚರಿ ಇಲ್ಲ.

ಕಾಂಗ್ರೆಸ್‌ನಲ್ಲಿ ಸಹ ಪ್ರಕಾಶ ಹುಕ್ಕೇರಿಗೆ ಟಿಕೆಟ್‌ ನೀಡಬಾರದೆಂದು ಚಿಕ್ಕೋಡಿ ಭಾಗದ ಮಾಜಿ ಶಾಸಕರು ವರಿಷ್ಠರ ಮೇಲೆ ಒತ್ತಡ ಹಾಕಿದ್ದರು. ಆದರೆ ಜೊಲ್ಲೆ ವಿರುದ್ಧ ಸಮಬಲದ ಹೋರಾಟ ಮಾಡುವ ಅಭ್ಯರ್ಥಿ ಸಿಗದೇ ಇರುವ ಕಾರಣ ಮಾಜಿ ಶಾಸಕರ ಒತ್ತಡ ಕೆಲಸ ಮಾಡಲಿಲ್ಲ. ಇದರ ಜತೆಗೆ ಪ್ರಕಾಶ ಹುಕ್ಕೇರಿ ಸಹ ಚಿಕ್ಕೋಡಿ ಬದಲು ಬೆಳಗಾವಿಯಿಂದ ಸ್ಪರ್ಧಿಸಲು ಆಸಕ್ತಿ ತೋರಿಸಿದ್ದರು. ಆದರೆ ಇದಕ್ಕೆ ಸತೀಶ ಜಾರಕಿಹೊಳಿ ಅಡ್ಡಿಯಾದರು.

ಬಿಜೆಪಿ ಎಂದಿನಂತೆ ಪ್ರಧಾನಿ ಮೋದಿ ಅವರ ಗಾಳಿಯನ್ನೇ ನೆಚ್ಚಿಕೊಂಡಿದೆ. ಪಕ್ಷದ ಅಭ್ಯರ್ಥಿ ಜೊಲ್ಲೆಗೆ ತಮ್ಮ ಸಾಧನೆ ಹೇಳಿಕೊಳ್ಳುವ ಅವಕಾಶ ಇಲ್ಲ. ಆದರೆ ಸಾಮಾಜಿಕವಾಗಿ ಜನರ ಜತೆ ಹತ್ತಿರದ ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು, ಕಾರ್ಯಕರ್ತರು ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ಜೊಲ್ಲೆ ಅವರನ್ನು ಬೆಂಬಲಿಸಬೇಕೆಂದು ಪ್ರಚಾರ ಮಾಡುತ್ತಿದ್ದಾರೆ. ಇದರ ಜತೆಗೆ ಜೊಲ್ಲೆ ಅವರ ಪತ್ನಿ ಶಶಿಕಲಾ ಅವರು ಶಾಸಕಿಯಾಗಿರುವುದೂ ಅನುಕೂಲವಾಗಿದೆ.

ಹುಕ್ಕೇರಿಗೆ ಕೆಲಸದ ವಿಶ್ವಾಸ – ಆರು ಬಾರಿ ಶಾಸಕರಾಗಿ ನಂತರ ಮೊದಲ ಪ್ರಯತ್ನದಲ್ಲೇ ಸಂಸದರಾದ ಅನುಭವಿ ರಾಜಕಾರಣಿ ಪ್ರಕಾಶ ಹುಕ್ಕೇರಿ ಅವರಿಗೆ ತಾವು ಮಾಡಿದ ಅಭಿವೃದ್ಧಿ ಕೆಲಸಗಳ ಮೇಲೆ ಹೆಚ್ಚಿನ ವಿಶ್ವಾಸ. ಐದು ವರ್ಷಗಳ ಈ ಅವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದಿದ್ದೇನೆಂದು ಹೇಳುವ ಅವರು ಇದೇ ಅಭಿವೃದ್ಧಿ ಕೆಲಸಗಳು ತಮ್ಮ ಕೈಹಿಡಿಯಲಿವೆ ಎಂಬ ವಿಶ್ವಾಸ ಹೊಂದಿದ್ದಾರೆ.

ಕ್ಷೇತ್ರ ವ್ಯಾಪ್ತಿ?: ಅಥಣಿ, ಕಾಗವಾಡ, ರಾಯಬಾಗ, ಕುಡಚಿ, ಚಿಕ್ಕೋಡಿ, ಹುಕ್ಕೇರಿ, ನಿಪ್ಪಾಣಿ, ಯಮಕನಮರಡಿ ವಿಧಾನಸಭೆ ಕ್ಷೇತ್ರ.

ನಿರ್ಣಾಯಕ ಅಂಶ:  ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಅಧಿಕವಾಗಿದ್ದಾರೆ. ಹೀಗಾಗಿ ಎರಡೂ ಪ್ರಮುಖ ಪಕ್ಷಗಳು ಇದೇ ಸಮಾಜದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇವರ ಜತೆಗೆ ಕುರುಬರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಮತ್ತು ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದು ಚುನಾವಣೆಯ ಫಲಿತಾಂಶ ಅದಲು ಬದಲು ಮಾಡುವ ಶಕ್ತಿ ಹೊಂದಿದ್ದಾರೆ. ಇಲ್ಲಿ ಜೆಡಿಎಸ್‌ ಹೆಸರಿಗೆ ಮಾತ್ರ. ಹೀಗಾಗಿ ಮೈತ್ರಿ ಧರ್ಮ ಕಾಣಿಸುವುದೇ ಇಲ್ಲ. ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಇರುವುದರಿಂದ ಫಲಿತಾಂಶ ಬಹಳ ಕುತೂಹಲ ಮೂಡಿಸಿದೆ.

ಒಟ್ಟು ಮತದಾರರು – 15,79,309
ಪುರುಷರು – 8,06,052
ಮಹಿಳೆಯರು – 7,73,202
ಇತರೆ – 55

ಜಾತಿವಾರು ಲೆಕ್ಕಾಚಾರ
ಲಿಂಗಾಯತರು – 3.90 ಲಕ್ಷ
ಕುರುಬರು – 1.84 ಲಕ್ಷ
ಎಸ್‌ಸಿ – 2 ಲಕ್ಷ
ಎಸ್‌ಟಿ – 1 ಲಕ್ಷ
ಮುಸ್ಲಿಂ – 1.98 ಲಕ್ಷ
ಮರಾಠ – 1.47 ಲಕ್ಷ
ಜೈನ್‌ – 1.03 ಲಕ್ಷ
ಹಣಬರ – 1.04 ಲಕ್ಷ.

* ಕೇಶವ ಆದಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.