![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 25, 2019, 5:19 AM IST
ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ ಘೋಷಿಸಿದೆ. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಾಲಿನ 20 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಧಾರವಾಡ ಕ್ಷೇತ್ರದ ಅಭ್ಯರ್ಥಿ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ ಕುಮಾರ್ ಕಣಕ್ಕಿಳಿಯಲಿದ್ದಾರೆ ಎಂಬ ನಿರೀಕ್ಷೆ ನಡುವೆ ಬಿಜೆಪಿಯು ಮೊದಲ 2 ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯನ್ನೇ ಘೋಷಿಸಿಲ್ಲ. ಈ ನಡುವೆ ಪ್ರಧಾನಿ ಮೋದಿಯವರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.