ಪ್ರಚಾರದಲ್ಲಿ  ಭಾಗವಹಿಸುವೆ :ಬಿಎಸ್‌ವೈಗೆ ಎಸ್‌ಎಂಕೆ ಹೆಗಲು


Team Udayavani, Mar 17, 2019, 12:58 AM IST

66.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಭೇಟಿ ಮಾಡಿ, ಲೋಕಸಭಾ ಚುನಾವಣೆಯ ಸಕ್ರಿಯ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೃಷ್ಣ ಅವರೂ ಯಡಿಯೂರಪ್ಪ ಅವರಿಗೆ ಸಂಪೂರ್ಣ ಸಹಕಾರ ನೀಡಲಿದ್ದು, ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗುವ ಭರವಸೆ ನೀಡಿದ್ದಾರೆ.

ಸದಾಶಿವ ನಗರದ ಎಸ್‌.ಎಂ.ಕೃಷ್ಣ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಯಡಿಯೂರಪ್ಪ ಅವರು ಮಂಡ್ಯದ ರಾಜಕೀಯ, ಲೋಕಸಭಾ ಚುನಾವಣಾ ಸಿದ್ಧತೆ ಮತ್ತು ಪ್ರಚಾರಕ್ಕೆ ಸಂಬಂಧಿಸಿದಂತೆ ಕೆಲಕಾಲ ಮಾತುಕತೆ ನಡೆಸಿದರು.

ಅನಂತರ ಮಾತನಾಡಿದ ಯಡಿಯೂರಪ್ಪ, ಹಿರಿಯ ನಾಯಕರಾದ ಎಸ್‌.ಎಂ.ಕೃಷ್ಣ ಅವರೊಂದಿಗೆ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತು  ಚರ್ಚೆ ನಡೆಸಿದ್ದೇವೆ. ಮಂಡ್ಯ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸಹಿತ ಕರ್ನಾಟಕ ದಕ್ಷಿಣದ ಏಳೆಂಟು ಜಿಲ್ಲೆಗಳಲ್ಲಿ ಪ್ರಚಾರಕ್ಕೆ ಬರಲು ಅವರು ಒಪ್ಪಿದ್ದಾರೆ. ಇದರಿಂದ ನಮಗೆ ಆನೆ ಬಲ ಬಂದಂತಾಗಿದೆ. ದೇಶಾದ್ಯಂತ ಇರುವಂತೆ ರಾಜ್ಯದಲ್ಲಿ ಮೋದಿ ಅಲೆ ಜತೆಗೆ ಕೃಷ್ಣ ಪ್ರಚಾರಕ್ಕೆ ಬಂದರೆ ಅದರ ಪರಿಣಾಮ ಬೇರೆಯದ್ದೇ ಆಗಲಿದೆ ಎಂದರು.

ಮಂಡ್ಯ ಕ್ಷೇತ್ರದ ರಾಜಕೀಯದ ಕುರಿತಂತೆಯೂ ಚರ್ಚೆ ನಡೆಸಿದ್ದೇವೆ. ಕೃಷ್ಣ ಅವರು ಸಲಹೆ ಕೊಟ್ಟಿ¨ªಾರೆ. ಸುಮಲತಾ ಅಂಬರೀಷ್‌ ಸ್ಪರ್ಧೆ ಬಗ್ಗೆಯೂ ಚರ್ಚೆಯಾಗಿದೆ. ಸುಮಲತಾ ಅವರು ತಮ್ಮ ನಿರ್ಧಾರ ಪ್ರಕಟಿಸಿದ ಬಳಿಕ ನಾವು ಮತ್ತೂಮ್ಮೆ ಹಿರಿಯ ನಾಯಕರೆಲ್ಲ ಮಾತುಕತೆ ನಡೆಸಿ ಬಿಜೆಪಿ ನಿರ್ಧಾರ ಪ್ರಕಟಿಸಲಿದ್ದೇವೆ ಎಂದು ಹೇಳಿದರು.

ರಾಹುಲ್‌ಗಾಂಧಿ ಸೋಲು ಖಚಿತ!
ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹಿತ ಯಾರೇ ರಾಜ್ಯದಿಂದ ಸ್ಪರ್ಧೆ ಮಾಡಿದರೂ ಸೋಲು ನಿಶ್ಚಿತ, ಕರ್ನಾಟಕದಲ್ಲಿ ಅವರ ಸ್ಪರ್ಧೆ ಖಚಿತಪಡಿಸಲಿ, ಅನಂತರ ಅವರ ವಿರುದ್ಧ ಯಾರನ್ನು ಕಣಕ್ಕೆ ಇಳಿಸಬೇಕು ಎಂಬುದನ್ನು ಯೋಚನೆ ಮಾಡುತ್ತೇವೆ. ರಾಷ್ಟ್ರಾದ್ಯಂತ ಮೋದಿ ಗಾಳಿ ಬೀಸುತ್ತಿದೆ. ಯಾರೇ ಸ್ಪರ್ಧೆ ಮಾಡಿದರೂ ಸೋಲುತ್ತಾರೆ. ನಿಶ್ಚಿತವಾಗಿ ನಾವು 22 ಸ್ಥಾನ ಗೆಲ್ಲುತ್ತೇವೆ. ಎಸ್‌.ಎಂ.ಕೃಷ್ಣ ಅವರು ಸ್ಪರ್ಧೆ ಮಾಡಿದರೆ ಸಂತೋಷ ಎಂದರು.
ಎಸ್‌.ಎಂ.ಕೃಷ್ಣ ಮಾತನಾಡಿ, ರಾಹುಲ್‌ ಗಾಂಧಿ ವಿರುದ್ಧ ನಾನು ಸ್ಪರ್ಧಿಸಬೇಕೋ, ಬೇಡವೋ ಎಂಬುದನ್ನು ನಿರ್ಧರಿಸುವುದು ಯಡಿಯೂರಪ್ಪ  ಅವರಿಗೆ ಬಿಟ್ಟ ವಿಚಾರ ಎಂದರು. 

ಪ್ರಚಾರದಲ್ಲಿ  ಭಾಗವಹಿಸುವೆ
ಬಿಜೆಪಿಯ ಸಾಮಾನ್ಯ ನಿಷ್ಠಾವಂತ ಕಾರ್ಯಕರ್ತನಾಗಿ ಯಡಿಯೂರಪ್ಪನವರಿಗೆ ಪೂರ್ಣ ಸಹಕಾರ ಕೊಡಲು ತೀರ್ಮಾನಿಸಿದ್ದೇನೆ. 22 ಸ್ಥಾನ ಗೆಲ್ಲುವ ಗುರಿಗೆ ನನ್ನಿಂದ ಆದಷ್ಟು ಸಹಕಾರ ನೀಡುತ್ತೇನೆ. ಎÇÉೆಲ್ಲಿ ಆವಶ್ಯಕತೆ ಇದೆಯೋ ಅಲ್ಲಿ ಹೋಗಿ ಪ್ರಚಾರ ಮಾಡುತ್ತೇನೆ. ವಂಶ ಪಾರಂಪರ್ಯ ರಾಜಕಾರಣದ ಬಗ್ಗೆ ಜನ ತೀರ್ಮಾನ ಮಾಡಲಿದ್ದಾರೆ  ಎಂದು ಎಸ್‌.ಎಂ. ಕೃಷ್ಣ  ಹೇಳಿದರು.
 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.