ಸಿದ್ದು ಸಂಧಾನಕ್ಕೆ ಮಣಿಯದ ಕಾಂಗ್ರೆಸ್‌ ನಾಯಕರು


Team Udayavani, Apr 8, 2019, 6:15 AM IST

SIDDU-a

ಬೆಂಗಳೂರು: ಮೈತ್ರಿ ಪಕ್ಷಗಳ ನಾಯಕರಿಗೆ ಮುಳುವಾಗಿರುವ ಮಂಡ್ಯ ಕಾಂಗ್ರೆಸ್‌ ನಾಯಕರ ಬಂಡಾಯ ಇನ್ನೂ ಶಮನವಾಗಿಲ್ಲ. “ಕೈ’ ನಾಯಕರಅಸಮಾಧಾನ ಹೈಕಮಾಂಡ್‌ ಅಂಗಳಕ್ಕೆ ತಲುಪಿರುವುದರಿಂದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅತೃಪ್ತರ ಮನವೊಲಿಸುವ ಕಸರತ್ತು ಮುಂದುವರೆಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಮಾಡಿ ಸೋತಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಜೊತೆ ಸಿದ್ದರಾಮಯ್ಯ ಭಾನುವಾರ ಸಭೆ ನಡೆಸಿ, ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖೀಲ್‌ ಕುಮಾರಸ್ವಾಮಿ ಪರವಾಗಿ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಹತ್ತು ತಿಂಗಳ ಮೈತ್ರಿ ಸರ್ಕಾರದಲ್ಲಿಮಂಡ್ಯದಲ್ಲಿ ಜೆಡಿಎಸ್‌ನವರು ಕಾಂಗ್ರೆಸ್‌ ನಾಯಕರು ಹಾಗೂ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿಯಿಂದ ಅವರ ಮೇಲೆ ಪ್ರೀತಿ ತೋರಿಸಲು ಸಾಧ್ಯವೇ ಇಲ್ಲ. ನೀವು ಬಲವಂತದಿಂದ ಒಪ್ಪಿಸಿದರೂ, ಅಲ್ಲಿ ಇರುವ ಪರಿಸ್ಥಿತಿಯಲ್ಲಿ ಯಾರೂ ಅವರ ಪರವಾಗಿ ಕೆಲಸ ಮಾಡಲುಸಿದ್ದರಿಲ್ಲ ಎನ್ನುವ ಅಭಿಪ್ರಾಯವನ್ನು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಕಾಂಗ್ರೆಸ್‌ ನಾಯಕರು ನಡೆಸಿದರು.

ಜೆಡಿಎಸ್‌ನವರು ಇದುವರೆಗೂ ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಮನವಿ ಮಾಡದೆ ಯಾರ ಮನೆ ಬಾಗಿಲಿಗೂ ಹೋಗುವುದಿಲ್ಲ ಎಂದು ಹೇಳಿದ ಮೇಲೆ ನಾವಾಗಿಯೇ ಅವರ ಪರವಾಗಿ ಪ್ರಚಾರಕ್ಕೆಹೋದರೆ, ನಮಗೆ ಮರ್ಯಾದೆ ಇಲ್ಲದಂತಾಗುತ್ತದೆ. ನಾವು ಅವರಪರವಾಗಿ ಕೆಲಸ ಮಾಡಿದರೂ, ನಮ್ಮನ್ನು ಪರಿಗಣಿಸು ವುದಿಲ್ಲ. ಗೆಲುವಿನ ಶ್ರೇಯಸ್ಸೂ ನಮಗೆ ಸಿಗುವುದಿಲ್ಲ ಎಂದು ಮಂಡ್ಯದ ವಾಸ್ತವ
ಪರಿಸ್ಥಿತಿಯನ್ನು ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ಆದೇಶ ಪಾಲಿಸಲು ಸೂಚನೆ
ಮಂಡ್ಯ ನಾಯಕರ ಅಸಮಾಧಾನದ ನಡುವೆಯೂ ಸಿದ್ದ ರಾಮಯ್ಯ ಪಕ್ಷದ ದೇಶದಂತೆ ಎಲ್ಲರೂ ಕಡ್ಡಾಯವಾಗಿ ಮೈತ್ರಿ ಪಕ್ಷಗಳ ಅಭ್ಯರ್ಥಿ, ನಿಖೀಲ್‌ ಪರವಾಗಿ ಪ್ರಚಾರ ಮಾಡುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಮಂಡ್ಯದಲ್ಲಿ ಸಿದ್ದರಾಮಯ್ಯ ಪ್ರಚಾರ ಕೈಗೊಳ್ಳುವುದರಿಂದ ಎಲ್ಲರೂ ಜೊತೆಗಿರುವಂತೆಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್‌ ಗಾಂಧಿ ಕೂಡ ಮಂಡ್ಯ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಕೊಳ್ಳುವುದರಿಂದ ಯಾವುದೇ ಕಾರಣಕ್ಕೂ ಅವರಿಗೆ ಇರಿಸು ಮುರುಸು ಆಗದಂತೆ ನಡೆದುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಅವರ ಮನವೊಲಿಕೆ ನಡುವೆಯೂ ಚಲುವರಾಯಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಹಾಗೂ ಪಿ.ಎಂ.ನರೇಂದ್ರಸ್ವಾಮಿ ಸಹಕಾರ ನೀಡಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಅದೇ ಕಾರಣಕ್ಕೆ ಸೋಮವಾರ ಮತ್ತೂಂದು ಸಭೆ ನಡೆಸಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಧಾನ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಜಮೀರ್‌ ಅಹಮದ್‌ ಉಪಸ್ಥಿತರಿದ್ದರು.

ಹಬ್ಬದ ಊಟ ಸವಿದ ಅತೃಪ್ತರು: ಮಂಡ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಸಿದ್ದರಾಮಯ್ಯ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದರೂ, ಭಿನ್ನರು ತಮ್ಮ ನಿಲುವು ಸಡಿಸಿಲ್ಲ. ಇದರ ನಡುವೆಯೇ ಸಿದ್ದರಾಮಯ್ಯ ಭಿನ್ನರಿಗೆ ಹಬ್ಬದ ಅಡುಗೆ ಊಟ ಮಾಡಿಸಿ ಕಳುಹಿಸಿಕೊಟ್ಟಿದ್ದಾರೆ.ಸೋಮವಾರ ಮತ್ತೂಂದು ಸಭೆ ನಡೆಸುವುದಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.