ಅಧಿಕಾರ ಯಂತ್ರ ದುರುಪಯೋಗ: ಲಿಂಬಾವಳಿ


Team Udayavani, Apr 8, 2019, 6:15 AM IST

Arvind-Limbavali-,BJP

ಬೆಂಗಳೂರು: ಜೆಡಿಎಸ್‌ ಪಕ್ಷ ಮಂಡ್ಯ,ತುಮಕೂರು ಮತ್ತು ಹಾಸನಕ್ಕೆ ಸೀಮಿತವಾಗಿದ್ದು,ಈ ಕ್ಷೇತ್ರಗಳನ್ನು ಗೆಲ್ಲುವುದಕ್ಕಾಗಿ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಆರೋಪಿಸಿದರು.

ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಚುನಾವಣಾ
ಆಯೋಗವನ್ನು ಒತ್ತಾಯಿಸಿದರು.

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ನೈತಿಕ ಬೆಂಬಲನೀಡಿದೆ. ಸುಮಲತಾ ಪರವಾಗಿ ಪ್ರಚಾರದಲ್ಲಿ ತೊಡಗುವಂತೆ ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಬಿಜೆಪಿ ಹಿರಿಯ ನಾಯಕರ ಪ್ರವಾಸ ಇತರ ಕ್ಷೇತ್ರಗಳಲ್ಲಿ ನಿಗದಿಯಾಗಿರುವುದರಿಂದ ಮಂಡ್ಯದಲ್ಲಿ ಪ್ರಚಾರ ನಡೆಸುವುದಿಲ್ಲ ಎಂದರು. ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಯುವುದಿಲ್ಲ.
ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರದಲ್ಲಿ ಒಳಜಗಳ, ಕಿತ್ತಾಟ ಹೆಚ್ಚಾಗಲಿದೆ. ಬಿಜೆಪಿ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುತ್ತದೆ. ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಹೋಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯನ್ನು ತಿಳಿಸುತ್ತಿದ್ದಾರೆ ಎಂದರು.

ವಯನಾಡಿನಲ್ಲಿ ರಾಹುಲ್‌ ಗಾಂಧಿಯವರು ನಾಮಪತ್ರ ಸಲ್ಲಿಸಲು ತೆರಳಿದಾಗ ಕಂಡ ದೃಶ್ಯ ಹೇಗಿತ್ತೆಂದರೆ ಕಾಂಗ್ರೆಸ್‌ ಪಕ್ಷ ಚಿಹ್ನೆ ಬದಲಾಯಿಸಿಕೊಂಡು ಮುಸ್ಲಿಂ ಲೀಗ್‌ ಚಿಹ್ನೆ
ಪಡೆದುಕೊಂಡಿರುವಂತಿತ್ತು. ಇಡೀಮೆರವಣಿಗೆಯಲ್ಲಿ ಕಾಂಗ್ರೆಸ್‌ ಬಾವುಟ ಇಲ್ಲದೆ ಮುಸ್ಲಿಂ ಲೀಗ್‌ ಬಾವುಟದ ಭರಾಟೆ ಹೆಚ್ಚಾಗಿತ್ತು.

ಅಮೇಥಿಯಲ್ಲಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಕೇಸರಿ ವಾತಾವರಣ ಬೇಕಾಗಿತ್ತು. ಕೇರಳದ ವಯನಾಡಿನಲ್ಲಿ ನಾಮಪತ್ರ ಸಲ್ಲಿಸುವಾಗ ಕೇಸರಿ ಹೋಗಿ ಹಸಿರಾಗಿದೆ.
ಅವಕಾಶಕ್ಕೆ ತಕ್ಕ ಹಾಗೆ ಬಣ್ಣ ಬದಲಾಯಿಸುವ ಗೋಸುಂಬೆ ರಾಜಕಾರಣವನ್ನು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಮಾಡುತ್ತಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.