ಈಶ್ವರಪ್ಪನವರೇ ರಾಘವೇಂದ್ರನನ್ನು ಸೋಲಿಸ್ತಾರೆ: ರೇವಣ್ಣ


Team Udayavani, Apr 22, 2019, 3:00 AM IST

revanna

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಪುತ್ರ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಈ ಬಾರಿ ಬಿಜೆಪಿಯವರೇ ಸೋಲಿಸುತ್ತಾರೆ. ಈ ಬಗ್ಗೆ ನಮಗೆ ಬಿಜೆಪಿ ಮೂಲದಿಂದಲೇ ಮಾಹಿತಿ ಇದ್ದು, ಈಶ್ವರಪ್ಪನವರೇ ರಾಘವೇಂದ್ರನ ಸೋಲಿಗೆ ಪಣ ತೊಟ್ಟಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈತ್ರಿ ಅಭ್ಯರ್ಥಿ ಗೆಲುವಿಗಾಗಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಶನಿವಾರ ರಾತ್ರಿ ಸಮಾಲೋಚನೆ ನಡೆಸುತ್ತಿದ್ದ ಸಮಯದಲ್ಲಿ ಬಿಜೆಪಿಯವರೇ ರಾಘವೇಂದ್ರನನ್ನು ಸೋಲಿಸಲು ಮುಂದಾಗಿರುವುದು ತಮಗೆ ತಿಳಿದು ಬಂದಿದೆ ಎಂದರು.

“ಬಿಜೆಪಿಯ ಪವರ್‌ಫುಲ್‌ ಲೀಡರ್‌ ಆಗಿರುವ ಈಶ್ವರಪ್ಪನವರು ರಾಘವೇಂದ್ರನನ್ನು ಸೋಲಿಸಲು ನಿರ್ಣಯ ಮಾಡಿದ್ದಾರೆ. ಈ ಬಗ್ಗೆ ನನಗೆ ಬಿಜೆಪಿ ಮೂಲಗಳಿಂದಲೇ ಫೋನ್‌ಗಳೂ ಬಂದಿವೆ. ಅವರ ಹೆಸರುಗಳನ್ನು ಈಗಲೇ ಹೇಳುವುದಿಲ್ಲ. ಈಶ್ವರಪ್ಪ ಹಾಗೂ ಬಿ.ಎಸ್‌.ಯಡ್ಡಿಯೂರಪ್ಪ ಮಧ್ಯೆ ಉತ್ತಮ ಬಾಂಧವ್ಯ ಇಲ್ಲ.

ಈಶ್ವರಪ್ಪ ನೀರಾವರಿ ಸಚಿವರಾಗಿದ್ದಾಗ ಹಲವು ನೀರಾವರಿ ಯೋಜನೆಗಳಿಗೆ ಬಿಎಸ್‌ವೈ ಅಡ್ಡಗಾಲು ಹಾಕಿದ್ದರು. ಬಂಗಾರಪ್ಪನವರ ನಾನಾ ಯೋಜನೆಗಳನ್ನು ಪೂರ್ಣಗೊಳಿಸಿದ್ದಲ್ಲಿ ಈಶ್ವರಪ್ಪಗೆ ಕ್ರೆಡಿಟ್‌ ಹೋಗುತ್ತದೆಂಬ ಕಾರಣಕ್ಕೆ ಯೋಜನೆಗಳಿಗೆ ಅಡ್ಡಿಪಡಿಸಿದ್ದರು. ಈಶ್ವರಪ್ಪನವರೇ ಹಲವು ಬಾರಿ ನನ್ನ ಬಳಿ ಈ ಬಗ್ಗೆ ಅಸಮಾಧಾನ ತೋಡಿಕೊಂಡಿದ್ದರು ಎಂದು ತಿಳಿಸಿದರು.

ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ ಈಶ್ವರಪ್ಪಗೆ ಟಿಕೆಟ್‌ ಸಿಗುವುದು ಕಷ್ಟವಾಗಿತ್ತು. ಆ ವಯ್ಯ, ಕಷ್ಟಪಟ್ಟು ಟಿಕೆಟ್‌ ತಗೊಂಡು ಗೆದ್ದಿದ್ದಾರೆ. ಆ ಸಂದರ್ಭದಲ್ಲೇ ಈಶ್ವರಪ್ಪ ಗರಂ ಆಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕಟ್ಟಿದ್ದರು. ಅವರೇನು ರೇವಣ್ಣ ವಿರುದ್ಧ ಕಟ್ಟಿದ್ರಾ….? ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕಟ್ಟಿದ್ದು, ಯಡಿಯೂರಪ್ಪ ವಿರುದ್ಧ. ಈ ಬಾರಿ ಅವರೇ, ರಾಘವೇಂದ್ರನನ್ನು ಸೋಲಿಸಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ ಎಂದರು.

ಮೈತ್ರಿ ಪಕ್ಷಗಳಿಗಿಂತ ಹೆಚ್ಚಾಗಿ ರಾಘವೇಂದ್ರನನ್ನು ಸೋಲಿಸಲು ಬಿಜೆಪಿ ಮುಖಂಡರೇ ತಯಾರಾಗಿದ್ದಾರೆ. ಅವರ ಹೆಸರುಗಳನ್ನು ಸಮಯ ಬಂದಾಗ ತಿಳಿಸುತ್ತೇನೆ. ನೀವು ಏನು ಮಾಡಬೇಕೋ ಅದನ್ನು ಮಾಡಿ. ಒಳಗೊಳಗೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೆವೆ ಎಂದು ನನ್ನ ಬಳಿ ಖಾಸಗಿಯಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಕುರುಬ ಸಮಾಜಕ್ಕೆ ಸೀಟು ಕೊಟ್ಟಿಲ್ಲ ಎಂದು ಈಶ್ವರಪ್ಪರಿಗೆ ಸಿಟ್ಟಿದೆ. ಈಶ್ವರಪ್ಪನವರು, ಮುಸಲ್ಮಾನರಿಗೆ ಸೀಟು ಕೊಡದೇ ಇರುವ ಬಗ್ಗೆ ಹೇಳಿಕೆ ನೀಡಿದ್ದರು. ಆ ಹೇಳಿಕೆಯಲ್ಲೂ ಒಳ ಮರ್ಮ ಇದೆ. ಅದನ್ನು ಇನ್ನೊಮ್ಮೆ ಹೇಳುತ್ತೇನೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.