ಸುಮಲತಾಗೆ ಒಳ್ಳೆಯದಾಗಲಿ: ಮುಖ್ಯಮಂತ್ರಿ ಚಂದ್ರು
Team Udayavani, Apr 17, 2019, 3:00 AM IST
ದಾವಣಗೆರೆ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅವರಿಗೆ ಮತ ನೀಡಿ ಎಂದು ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಹಾಗಾಗಿ ಅವರಿಗೆ ಒಳ್ಳೆಯದಾಗಲಿ ಎಂದು ಕಾಂಗ್ರೆಸ್ ಮುಖಂಡ, ಚಿತ್ರನಟ ಮುಖ್ಯಮಂತ್ರಿ ಚಂದ್ರು ಹಾರೈಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಲತಾ ಓರ್ವ ಕಲಾವಿದೆಯಾಗಿ, ಜನಪ್ರಿಯ ನಟರ ಶ್ರೀಮತಿಯಾಗಿ ಸ್ಪರ್ಧಿಸುತ್ತಿದ್ದಾರೆ. ಅವರು ಒಳ್ಳೆಯ ವರ್ತನೆ ತೋರುತ್ತಿದ್ದಾರೆ. ಅವರಿಗೆ ಮತ ನೀಡಿ ಎಂದು ಕೇಳುವ ಪರಿಸ್ಥಿತಿಯಲ್ಲಿ ಇಲ್ಲ.
ಹಾಗಾಗಿ ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹೇಳಬಹುದು ಎಂದರು. ಐಟಿ ದಾಳಿ ನಡೆಸುವುದಕ್ಕೆ ಯಾರೂ ಬೇಡ ಅನ್ನುವುದಿಲ್ಲ. ಆದರೆ, ಐಟಿ ದಾಳಿ ನಡೆಸುವ ಸಮಯ ಯಾವುದು ಎಂದು ಪ್ರಶ್ನಿಸಿದ ಅವರು, ಕೇವಲ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ, ಮುಖಂಡರು ಮನೆಗಳ ಮಾತ್ರ ಏಕೆ ದಾಳಿ ನಡೆಸಲಾಗುತ್ತಿದೆ.
ಜೈಲಿಗೆ ಹೋಗಿ ಬಂದವರೂ ಬಿಜೆಪಿಯಲ್ಲಿ ಇದ್ದಾರೆ. ಅಂತಹವರ ಮನೆಯಲ್ಲಿ ಹಣ ಇರಬಹುದಲ್ಲ. ಐಟಿ ದಾಳಿ ಮಾಡಿಸುವುದಾದರೆ ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳು, ಸಂಬಂಧಿಕರು, ಅಕ್ಕ, ಅಣ್ಣ, ತಮ್ಮ, ತಂಗಿ ಎಲ್ಲರ ಮನೆಯಲ್ಲೂ ಮಾಡಿಸಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.