ಕುಮಾರಸ್ವಾಮಿ ಯೋಗ್ಯತೆ ಇಲ್ಲದ ಸಿಎಂ: ಈಶ್ವರಪ್ಪ
Team Udayavani, Apr 9, 2019, 3:00 AM IST
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಮುಗಿಸಿದ್ದಾರೆ. ಜೆಡಿಎಸ್ ಮುಗಿಸಲು ತಯಾರಿ ನಡೆಸಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಒಬ್ಬ ಅಯೋಗ್ಯ ಮುಖ್ಯಮಂತ್ರಿ ಎಂದು ನಾನು ಹೇಳಿದ್ದೆ. ಅದಕ್ಕೆ ಅವರು ಬೇಜಾರಾಗಿದ್ದಾರೆ. ಆ ಪದವನ್ನು ನಾನು ಹಿಂದೆ ಪಡೆಯುತ್ತೇನೆ. ಆದರೆ, ಕುಮಾರಸ್ವಾಮಿ ಅವರು ಯೋಗ್ಯತೆ ಇಲ್ಲದ ಮುಖ್ಯಮಂತ್ರಿ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಎಂಬ ಶಬ್ದ ಅಪವಿತ್ರವಾಗಿದೆ.
ಆ ಮೈತ್ರಿ ಶಬ್ದವನ್ನು ಅವರು ಕೈ ಬಿಡಬೇಕು. ಹೆಲಿಕಾಪ್ಟರ್ ಲಭ್ಯವಾಗದಂತೆ ಬಿಜೆಪಿಯಿಂದ ಕುತಂತ್ರ ನಡೆದಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಹಾಸ್ಯಾಸ್ಪದ. ಪ್ರಚಾರದ ಬಗ್ಗೆ ಮೊದಲೇ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳಬೇಕು. ಅದು ಬಿಟ್ಟು ಈ ರೀತಿ ಹೇಳುವುದು ಸರಿಯಲ್ಲ ಎಂದರು.
“ಮಂಡ್ಯದಲ್ಲಿ ನನ್ನ ಮಗನ ಸೋಲಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಲಾಗಿದೆ’ ಎನ್ನುತ್ತಿದ್ದಾರೆ. ಆದರೆ, ಅದು ಸಂಚಲ್ಲ, ರಾಜಕೀಯ. ನಿಖೀಲ್ ಕುಮಾರಸ್ವಾಮಿ ಅವರನ್ನು ಸೋಲಿಸಲೆಂದೇ ಸುಮಲತಾಗೆ ಬಿಜೆಪಿ ಬೆಂಬಲ ಕೊಟ್ಟಿದೆ. ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಂದಾಣಿಕೆಯಿಲ್ಲ.
ಅವರನ್ನು ಇವರು, ಇವರನ್ನು ಅವರು ಸೋಲಿಸಲು ನಿಂತಿದ್ದಾರೆ. ಮಂಡ್ಯ ಚುನಾವಣೆಯ ಬಗ್ಗೆ ಸ್ವತ: ಕುಮಾರಸ್ವಾಮಿ ಹತಾಶರಾಗಿದ್ದಾರೆ. ಮಂಡ್ಯದಲ್ಲಿ ಸೋಲಿನ ಭೀತಿಯಿಂದ ಇಡೀ ಕುಟುಂಬ ಪ್ರಚಾರ ಮಾಡುತ್ತಿದೆ. ಅದೂ ಸಾಲದಂತೆ ಸಿದ್ದರಾಮಯ್ಯ ಅವರನ್ನೂ ಪ್ರಚಾರಕ್ಕೆ ಕರೆದಿದ್ದಾರೆ. ಜತೆಗೆ ಸೋಲಿನ ಭೀತಿಯಿಂದ ರಾಹುಲ್ ಗಾಂಧಿ ಅವರನ್ನು ಕರೆಸುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.