“ಐಟಿ ದಾಳಿಯಿಂದ ಲಾಭ’: ಸೌಕೂರು ದೇಗುಲಕ್ಕೆ ಸಿಎಂ ಭೇಟಿ


Team Udayavani, Apr 5, 2019, 9:26 AM IST

cm-saokur

ಕುಂದಾಪುರ/ಬೈಂದೂರು: ಐಟಿ ದಾಳಿ ಮೂಲಕ ಕೇಂದ್ರ ಸರಕಾರವು ಅಧಿಕಾರ ದುರುಪಯೋಗ ಪಡಿಸುತ್ತಿದ್ದು, ಇದಕ್ಕೆ ನಾವು ಹೆದರುವ ಪ್ರಶ್ನೆಯೇ ಇಲ್ಲ. ನಾವು ನ್ಯಾಯುಯುತ ಚುನಾವಣೆ ನಡೆಸಲು ಸಹಕಾರ ನೀಡುತ್ತಿದ್ದೇವೆ. ಜನತೆ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇಂತಹ ದಾಳಿಯಿಂದ ನಮಗೆ ಹೆಚ್ಚಿನ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಅವರು ಗುರುವಾರ ರಾತ್ರಿ ಇಲ್ಲಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೀಡಿದ ಬಳಿಕ, ಸೌಕೂರಿನ ಜ್ಯೋತಿಷಿಯೊಬ್ಬರ ಮನೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ಕರಾವಳಿಯಲ್ಲೂ ಜಯ
ಕರಾವಳಿ ಜಿಲ್ಲೆಗಳಲ್ಲೂ ಬಿಜೆಪಿ ಸ್ವಾರ್ಥ ರಾಜಕಾರಣ ಮನವರಿಕೆಯಾಗು
ತ್ತಿದೆ. 3 ಲೋಕಸಭಾ ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ವಾತಾ ವರಣವಿದೆ. ರಾಜ್ಯದಲ್ಲಿ ಎಲ್ಲ 7 ಜೆಡಿಎಸ್‌ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್‌ನಲ್ಲಿ 21ರಲ್ಲಿ 16-17 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಮಂಡ್ಯದಲ್ಲಿ “ಹೈವೋಲ್ಟೆಜ್‌ ಕದನ’ ಎನ್ನುವುದು ವಿದ್ಯುನ್ಮಾನ ಮಾಧ್ಯಮಗಳ ಸೃಷ್ಟಿ. ನಿಖೀಲ್‌ ಈಗಾಗಲೇ ಜನರ ವಿಶ್ವಾಸ ಗಳಿಸಿದ್ದಾರೆ ಎಂದರು.
ಸಿಎಂ ಆಗಮನಕ್ಕೆ ಮುನ್ನ ದೇಗುಲದ ಮುಂಭಾಗದಲ್ಲಿ ಊರವರು, ಕಾಂಗ್ರೆಸ್‌- ಜೆಡಿಎಸ್‌ ನಾಯಕರು, ಕಾರ್ಯಕರ್ತರು ನೆರೆದಿದ್ದರು. ಸಿಎಂ ಬರುತ್ತಿದ್ದಂತೆ ಘೋಷಣೆ ಕೂಗಿದರು. ಸೌಕೂರು ದೇಗುಲಕ್ಕೆ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯೊಬ್ಬರು ಭೇಟಿ ನೀಡಿರುವುದು ವಿಶೇಷ.

ಎಸ್‌.ಎಲ್‌. ಭೋಜೇಗೌಡ, ಯೋಗೀಶ್‌ ಶೆಟ್ಟಿ, ಕಿಶೋರ ಬಲ್ಲಾಳ್‌ ಕುಂದಾಪುರ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಕೆ. ಗೋಪಾಲ ಪೂಜಾರಿ, ರಾಜು ಪೂಜಾರಿ, ಪ್ರದೀಪ್‌ ಕುಮಾರ್‌ ಶೆಟ್ಟಿ, ಕಿಶನ್‌ ಹೆಗ್ಡೆ ಇದ್ದರು.

ಜ್ಯೋತಿಷಿ ಮನೆಗೆ ಭೇಟಿ
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಿಎಂ ಸಮೀಪದಲ್ಲಿ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ ಅವರ ಮನೆಗೂ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಯಿತು. ಬೆಂಗಳೂರಿನ ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕಾನಾಥ ಮತ್ತು ಮಂಜುನಾಥಯ್ಯ ಹಲವು ವರ್ಷಗಳಿಂದ ಸಿಎಂಗೆ ಪರಿಚಿತರಾಗಿದ್ದು, ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಸಿಎಂ, 1985ರಲ್ಲಿ ದೇವೇಗೌಡರು ಸೌಕೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕಾರವಾರದಿಂದ ಕೊಪ್ಪಕ್ಕೆ ತೆರಳುವ ಮಾರ್ಗ ಮಧ್ಯೆ ದೇವಿಯ ಆಶೀರ್ವಾದ ಪಡೆದಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.