ಇಂದಿನಿಂದ ಮಂಡ್ಯದಲ್ಲಿ ನಮ್ಮದೇ ಹವಾ: ಕುಮಾರಸ್ವಾಮಿ


Team Udayavani, Mar 25, 2019, 6:44 AM IST

100-b

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಸೋಮವಾರ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು, ಕ್ಷೇತ್ರ ದೈವ ಶ್ರೀ ಕಾಲಭೈರವೇಶ್ವರ, ಮಾಳಮ್ಮ, ಸ್ತಂಭಾಂಬಿಕೆಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ವೇಳೆ ಪತ್ರಕರ್ತರ ಜತೆ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು ಭಿನ್ನಾ ಭಿಪ್ರಾಯ, ಕುತಂತ್ರ ರಾಜಕಾರಣಕ್ಕೆ ನಾನಾಗಲಿ, ದೇವೇಗೌಡರಾಗಲಿ ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಕಾರ್ಯಕರ್ತರ ಶಕ್ತಿ ಇದೆ. ಯಾವುದೇ ಭಯ, ಆತಂಕ ಇಲ್ಲ ಎಂದು ಹೇಳುವ ಮೂಲಕ ನಿಖಿಲ್‌ ಸ್ಫರ್ಧೆಗೆ ವಿರೋಧ ವ್ಯಕ್ತಪಡಿಸಿರುವ ಮಿತ್ರಪಕ್ಷ ಕಾಂಗ್ರೆಸ್‌ನ ಸ್ಥಳೀಯ ಮುಖಂಡರ ವಿರುದ್ಧ ಹರಿಹಾಯ್ದರು. ಸಿಎಂ ಹೇಳಿಕೆಯ ಕೆಲವು ಪ್ರಮುಖ ತುಣುಕುಗಳು ಇಲ್ಲಿವೆ.

ಸೋಮವಾರ ನಿಖಿಲ್‌ ನಾಮಪತ್ರ ಸಲ್ಲಿಸ ಲಿದ್ದು, ಆ ಬಳಿಕ ಕ್ಷೇತ್ರದಲ್ಲಿ ನಮ್ಮ ಹವಾ ಶುರು ವಾಗಲಿದೆ.

ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ. ಬೆಂಬಲದ ಭಿಕ್ಷೆ ಕೇಳಲ್ಲ.

ಮೈತ್ರಿ ಮರೆತು ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಸ್ಪೀಡ್‌ ಬ್ರೇಕ್‌ ಹಾಕಲು ಕೆಲವರು ಮುಂದಾಗಿ ದ್ದಾರೆ. ಆದರೆ ನಾನು ಅಂಥ ನಂಬಿಕೆ ದ್ರೋಹದ ಕೆಲಸ ಮಾಡುವುದಿಲ್ಲ.

ಹಣ ಕೊಟ್ಟು ಮತ ಕೊಂಡುಕೊಳ್ಳುವವರ ಮಾತಿಗೆ ಜಿಲ್ಲೆಯ ಜನ ಮರುಳಾಗುವುದಿಲ್ಲ ಎಂಬ ವಿಶ್ವಾಸವಿದೆ. ನಿಖೀಲ್‌ ಗೆಲುವು ಖಚಿತ.

ದೇವೇಗೌಡರ ಕುಟುಂಬ ಮತ್ತು ಮಂಡ್ಯ ಜನರ ಬಾಂಧವ್ಯಕ್ಕೆ ಧಕ್ಕೆ ತರಲಾಗದು. ಓರ್ವ ನಿಖೀಲ್‌ನನ್ನು ಸೋಲಿಸಲು ಎಷ್ಟು ಜನ ಒಂದಾಗಿದ್ದಾರೆ ಎಂಬುದು ಗೊತ್ತಾಗಿದೆ. ಬೆನ್ನಿಗೆ ಚೂರಿ ಹಾಕುವುದರಿಂದ ಏನೂ ಸಾಧಿಸಲಾಗದು.

ನಿಖಿಲ್‌ ಸ್ಪರ್ಧೆಯಿಂದ ಮಂಡ್ಯದಲ್ಲಿ ಬಿಜೆಪಿ ಮುಖ್ಯವಾಗಿದೆ.

ಭಕ್ತನಿಂದ ಚುಂಚಶ್ರೀಗೆ ಪ್ರಶ್ನೆ
ಮಂಡ್ಯ: ಒಕ್ಕಲಿಗ ಸಮುದಾಯದ ದೇವೇಗೌಡ ಮತ್ತವರ ಕುಟುಂಬದವರನ್ನು ಮಾತ್ರ ಪೋಷಿಸಿ ಆಶೀರ್ವದಿಸುವುದು ಎಷ್ಟು ಸರಿ ಎಂದು ಸಿದ್ದು ಎಂಬ ಭಕ್ತ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶ್ರೀಗಳಿಗೆ ಪ್ರಶ್ನೆಗಳ ಸುರಿಮಳೆಗರೆದಿರುವ ಸಿದ್ದು, ಇತರ ಒಕ್ಕಲಿಗ ನಾಯಕರ ಬೆಳವಣಿಗೆಯನ್ನು ಸಹಿಸದ ದೇವೇಗೌಡರ ಕುಟುಂಬಕ್ಕೆ ಸಹಕಾರ ನೀಡುವಷ್ಟು ಬೇರೆ ನಾಯಕರಿಗೆ ಏಕೆ ನೀಡುವುದಿಲ್ಲ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ಸಿದ್ದು ಭೇಟಿ ಮಾಡಿದ ಅನಿತಾ
ಈ ಮಧ್ಯೆ ನಿಖಿಲ್‌ ತಾಯಿ, ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ, ಹಾಸನ ಮಾದರಿಯಲ್ಲೇ ಮಂಡ್ಯ ಜಿಲ್ಲೆಯಲ್ಲೂ ಕಾಂಗ್ರೆಸಿಗರನ್ನು ಒಗ್ಗೂಡಿಸಿ, ನಿಖೀಲ್‌ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದರು. ಜಿಲ್ಲೆಯ ಪ್ರಭಾವಿ ಕಾಂಗ್ರೆಸಿಗರು ಸುಮಲತಾ ಬೆಂಬಲಕ್ಕೆ ನಿಂತಿದ್ದು, ಪುತ್ರನಿಗೆ ಸೋಲಿನ ಭಯ ಕಾಡುತ್ತಿದೆ. ಇದು ನಮ್ಮ ಕುಟುಂಬದ ಗೌರವ ಪ್ರಶ್ನೆ. ನಿಖೀಲ್‌ ನಾಮಪತ್ರ ಸಲ್ಲಿಕೆ ವೇಳೆ ಬನ್ನಿ, ಪುತ್ರನ ಪರ ಪ್ರಚಾರ ಮಾಡಿ ಎಂದು ಮನವಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕೆಲವೊಂದು ಶಕ್ತಿಗಳು ಹುನ್ನಾರ ನಡೆಸಿವೆ. ಆದರೆ ಜನರು ನನ್ನ ಪರ ಇದ್ದಾರೆ. ಮಂಡ್ಯದ ಜನ ನನ್ನ ಕೈಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ.
– ನಿಖಿಲ್‌ ಕುಮಾರಸ್ವಾಮಿ, ಮೈತ್ರಿ ಅಭ್ಯರ್ಥಿ

ಸುಮಲತಾಗೆ ಬಿಜೆಪಿ ಬೆಂಬಲ ಸೂಚಿಸಿದೆ. ಹೀಗಾಗಿ ಸುಮಲತಾ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂಬುದನ್ನು ನಾವು ಇಲ್ಲಿ ಅರ್ಥ ಮಾಡಿಕೊಳ್ಳಬೇಕು. ಒಂದು ರಾಷ್ಟ್ರೀಯ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಉದ್ದೇಶವೇ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸುವ ತಂತ್ರಗಾರಿಕೆ.
– ಡಿ.ಸಿ.ತಮ್ಮಣ್ಣ , ಸಾರಿಗೆ ಸಚಿವ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.