ಪ್ರಮೋದ್‌ ಮಧ್ವರಾಜ್‌ಗೆ  ಜೆಡಿಎಸ್‌ ಆಹ್ವಾನ ?


Team Udayavani, Mar 19, 2019, 1:00 AM IST

pramod.jpg

ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ನಿಲ್ಲಿಸಬೇಕೋ ಬೇಡವೋ ಎಂಬ ಹೊಯ್ದಾಟದಲ್ಲಿದ್ದ  ಜೆಡಿಎಸ್‌ ಸದ್ಯಕ್ಕೆ ಕೊಂಚ ನಿಟ್ಟುಸಿರು ಬಿಟ್ಟಂತಿದೆ. ಮಾಜಿ ಸಚಿವ ಕಾಂಗ್ರೆಸ್‌ನ ಪ್ರಮೋದ್‌
ಮಧ್ವರಾಜ್‌ ಮತ್ತು ಜೆಡಿಎಸ್‌ನ ರಾಷ್ಟ್ರಿàಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರ ಭೇಟಿ ಈ ಗೊಂದಲಕ್ಕೆ ಅಂತ್ಯ ಹಾಡುವ ಲಕ್ಷಣಗಳಿವೆ. ಈ ಹಿನ್ನೆಲೆಯಲ್ಲಿಸ ಪ್ರಮೋದ್‌ ಜೆಡಿಎಸ್‌ ಸೇರುವುದು ಖಚಿತ ಎಂಬ ಮಾತೂ ಕೇಳಿಬರುತ್ತಿದೆ.

ಮೈತ್ರಿ ಸ್ಥಾನದ ಹಂಚಿಕೆಯಲ್ಲಿ ಎಂಟು ಸ್ಥಾನಗಳನ್ನು ಪಡೆದು, 20 ಸ್ಥಾನಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದ ಜೆಡಿಎಸ್‌ ಒಮ್ಮೆ ತುಮಕೂರು, ಉಡುಪಿ ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರವನ್ನು ಮರಳಿ ಕಾಂಗ್ರೆಸ್‌ಗೆ ಬಿಟ್ಟುಕೊಡಲಿದೆ ಎಂಬ ಸುದ್ದಿ ಹಬ್ಬಿತ್ತು. ಆದರೀಗ ಬದಲಾದಂತಿದೆ.

ಜೆಡಿಎಸ್‌ ನಾಯಕ ದೇವೇಗೌಡ ಎಂಟೂ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ಹೇಳಿದ್ದರೆ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಮತ್ತು ಉಪಮುಖ್ಯಮಂತ್ರಿ ಡಾ| ಪರಮೇಶ್ವರ್‌ ತುಮಕೂರು ಕ್ಷೇತ್ರವನ್ನು ಮರಳಿ ಪಡೆಯಲು ರಾಹುಲ್‌ರಿಂದ ಫ‌ರ್ಮಾನು ಹೊರಡಿಸುವ ಲೆಕ್ಕಾಚಾರ ದಲ್ಲಿದ್ದಾರೆ. 

ಗೌಡರ ಸಂಪರ್ಕಿಸಿದ ಪ್ರಮೋದ್‌ 
ಶನಿವಾರವಷ್ಟೇ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರೊಂದಿಗೆ ಮಾತುಕತೆ ಆಡಿರುವುದಾಗಿ ತಿಳಿಸಿದ್ದ
ಪ್ರಮೋದ್‌ ಮಧ್ವರಾಜ್‌ ಸೋಮವಾರ ಎಚ್‌.ಡಿ. ದೇವೇಗೌಡರನ್ನು  ಸಂಪರ್ಕಿಸಿ ದರು. ಇದರಿಂದ ಪ್ರಮೋದ್‌ ಸ್ಪರ್ಧಿಸುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ ಜೆಡಿಎಸ್‌ ನಿಂದಲೋ ಅಥವಾ ಮೈತ್ರಿ ಅಭ್ಯರ್ಥಿಯಾಗಿಯೋ ಎಂಬುದು ಖಚಿತವಾಗಲಿದೆ. ಈ ಮೊದಲು  ಬಿಜೆಪಿಗೆ ಹೆಚ್ಚು ಸ್ಥಾನ ಸಿಗದಂತೆ ಮಾಡಲು ಅಗತ್ಯವೆನಿಸಿದಲ್ಲಿ ಜೆಡಿಎಸ್‌ ತನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಅವಕಾಶ ಕೊಡುವ ಯೋಚನೆಯಲ್ಲಿತ್ತು.

ದೇವೇಗೌಡರ ರಾಜಕೀಯ ಪಟ್ಟನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ. ಹಾಗೆಯೇ ತನ್ನ ಲೆಕ್ಕದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ನಿಲ್ಲಿಸುವ ಲೆಕ್ಕಾಚಾರಕ್ಕೆ ದೇವೇಗೌಡರು ಇಳಿಯುವುದು ಕಡಿಮೆ. ಬೇರೇನೋ ಲೆಕ್ಕಾಚಾರವಿರಬೇಕು ಎನ್ನುತ್ತವೆ ಮೂಲಗಳು.

ಇನ್ನೂ  ಸ್ಪಷ್ಟಗೊಂಡಿಲ್ಲ
ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ್‌ರನ್ನು ಉಡುಪಿಯಿಂದ ಕಣಕ್ಕಿಳಿಸಿದರೆ ಆಗಬಹುದೇ ಎಂದು ಜಿಲ್ಲೆಯ ಪ್ರಮುಖರೊಬ್ಬರಿಗೆ ದಿನೇಶ್‌ ಗುಂಡೂ ರಾವ್‌ ಅಭಿಪ್ರಾಯ ಕೇಳಿರುವುದು, ಅನಿವಾಸಿ ಭಾರತೀಯ ಕನ್ನಡಿಗರ ವೇದಿಕೆ ಮಾಜಿ ಉಪಾಧ್ಯಕ್ಷೆ ಡಾ| ಆರತಿ ಕೃಷ್ಣರಿಗೂ ದಿನೇಶ್‌ ಗುಂಡೂರಾವ್‌ ದೂರವಾಣಿಯಲ್ಲಿ ಮಾತನಾಡಿ, “ದೇವೇಗೌಡರಿಂದ ಬರುವ ಪ್ರಸ್ತಾವವನ್ನು ಸಂಪೂರ್ಣ ನಿರಾಕರಿಸಬೇಡಿ’ ಎಂದಿದ್ದಾರೆನ್ನುವುದೂ ವಿಭಿನ್ನ ವಿಶ್ಲೇಷಣೆಗೆ ಕಾರಣವಾಗುತ್ತಿದೆ. ಆದರೆ ಇವೆಲ್ಲದಕ್ಕೂ ಪ್ರಮೋದ್‌ ಮತ್ತು ದೇವೇಗೌಡರ ಭೇಟಿ ಉತ್ತರವಾಗುವ ಸಾಧ್ಯತೆ ಇದೆ.

ಹರಿಪ್ರಸಾದ್‌ ಬಿಲ್ಲವ ಸಮುದಾಯದವರಾಗಿದ್ದು, ಸ್ಪರ್ಧೆಗೆ ಮಹತ್ವ ಬರಬಹುದು. ಇದೇ ರೀತಿ ಅದೇ ಸಮುದಾಯದ ವಿನಯಕುಮಾರ ಸೊರಕೆಯವರು ಸ್ಪರ್ಧಿಸಿದರೂ ಸ್ಪರ್ಧಾಕಣಕ್ಕೆ ರಂಗು ಬರಲಿದೆ. ಪ್ರಮೋದ್‌ ಮಧ್ವರಾಜರು ಯಾವ ಪಕ್ಷದಿಂದ ನಿಂತರೂ ಜಾತಿ ಲೆಕ್ಕಾಚಾರ ಪ್ರಬಲ ಪೈಪೋಟಿಗೆ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ.

ಆಹ್ವಾನಿಸಿದ್ದು ನಿಜ
ಮಾಜಿ ಸಚಿವ, ಕಾಂಗ್ರೆಸ್‌ನ ಪ್ರಮೋದ್‌ ಮಧ್ವರಾಜ್‌ ಅವರನ್ನು ಜೆಡಿಎಸ್‌ನಿಂದ ಸ್ಪರ್ಧಿಸಲು ದೇವೇಗೌಡ ಆಹ್ವಾನಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಜೆಡಿಎಸ್‌ ಬಿಜೆಪಿಗೆ ಪ್ರಬಲ ಸ್ಪರ್ಧೆ ನೀಡುವಷ್ಟು ಶಕ್ತಿ ಹೊಂದಿಲ್ಲ ಎನ್ನುವ ಕಾರಣಕ್ಕೆ ಉಡುಪಿಯ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ನ ಟಿಕೆಟ್‌ಆಕಾಂಕ್ಷಿ ಪ್ರಮೋದ್‌ ಮಧ್ವರಾಜ್‌ ಅವರನ್ನು ಜೆಡಿಎಸ್‌ನಿಂದ ನಿಲ್ಲಿಸುವುದು ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಲೆಕ್ಕಾಚಾರ.

ಇದನ್ನು ಖಚಿತಪಡಿಸಿರುವ ಪ್ರಮೋದ್‌, ಸಮ್ಮಿಶ್ರ ಸರಕಾರ ಇರುವುದರಿಂದ ಈ ಕ್ಷೇತ್ರದಲ್ಲಿ ಯಾರೇ ಅಭ್ಯರ್ಥಿಯಾದರೂ, ಗೆಲುವು ಸಾಧಿಸುವುದೇ ನಮ್ಮ ಗುರಿ. ದೇವೇಗೌಡ ಮತ್ತು ಸಿಎಂ  ಕುಮಾರ ಸ್ವಾಮಿ ಅವರು ಅವರ ಪಕ್ಷದಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ. ಈಗ ಮೈತ್ರಿ ಇರುವುದರಿಂದ ಯಾವ ತೀರ್ಮಾನ ತೆಗೆದುಕೊಳ್ಳಬೇಕೆಂದು ಪಕ್ಷದ ನಾಯಕರ ಜತೆ ಚರ್ಚಿಸಿ ನಿರ್ಧರಿಸುವೆ ಎಂದು ಉದಯವಾಣಿಗೆ ತಿಳಿಸಿದ್ದಾರೆ.

ಆದರೆ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕ್ಷೇತ್ರದಲ್ಲಿ ಅದೇ ಪಕ್ಷದ ಚಿನ್ಹೆಯಿಂದ ಸ್ಪರ್ಧಿಸುವಂತೆ ಜೆಡಿಎಸ್‌ ಕೋರಿರುವ ಕಾರಣ ಪಕ್ಷಾಂತರ ಸಂದರ್ಭವೂ ತಲೆದೋರಬಹುದು ಎನ್ನಲಾಗಿದೆ. 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.