ಏ.7ಕ್ಕೆ ರಾಜ್ಯದಲ್ಲಿ ಪ್ರಧಾನಿ ಮೋದಿ ಸಮಾವೇಶ


Team Udayavani, Mar 29, 2019, 6:59 AM IST

modi-k

ಬೆಂಗಳೂರು : ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಏ.7ರಂದು ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಚುನಾವಣಾ ರ್ಯಾಲಿ ನಡೆಸಲಿದ್ದು, ಸ್ಥಳ, ರ್ಯಾಲಿಯ ವಿವರ ಇನ್ನಷ್ಟೇ ನಿಗದಿಯಾಗಬೇಕಿದೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಬಿಜೆಪಿ
ಚುನಾವಣಾ ಉಸ್ತುವಾರಿ ಮುರಳೀಧರರಾವ್‌, ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಜ್ಯದ ಹಲವೆಡೆ ಸಾರ್ವ ಜನಿಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಏ.7ಕ್ಕೆ ಮೋದಿಯವರು ರಾಜ್ಯದಲ್ಲಿ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದು, ಸ್ಥಳ
ಇನ್ನೂ ನಿಗದಿಯಾಗಿಲ್ಲ. ಆರು ಹೆಚ್ಚು ರ್ಯಾಲಿಗೆ ಚಿಂತಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈಗಾಗಲೇ 25 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು, ಬಾಕಿಯಿರುವ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಸತ್ಯಾಂಶ ಹೊರ ಬರಲಿದೆ

ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ಸಂಸ್ಥೆಯೊಂದರ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರಿಗೆ ಕೋಟ್ಯಂ
ತರ ರೂ. ವಂಚಿಸಲಾಗಿದೆ ಎಂಬ ಆರೋಪದಡಿ ತಮ್ಮ ವಿರುದ್ಧ ಹೈದರಾಬಾದ್‌ನ ಠಾಣೆಯೊಂದರಲ್ಲಿ ಎಫ್ಐಆರ್‌ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಮುರಳೀಧರರಾವ್‌, “ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನನ್ನ ವಿರುದಟಛಿ ವಿನಾಕಾರಣ ಆರೋಪ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವರವಾಗಿ ಪ್ರತಿಕ್ರಿಯಿಸಿದ್ದು, ಸತ್ಯಾಂಶ ಹೊರಗೆ ಬರಲಿದೆ’ ಎಂದು ಹೇಳಿದರು.

ಹಿಂದೆಲ್ಲಾ ಮಹಾಘಟಬಂಧನ್‌ ಮಹಾ ವೈಫ‌ಲ್ಯ ಕಂಡಿದೆ. ಮಹಾಘಟಬಂಧನ್‌ ರಾಜಕೀಯ ಹಾಗೂ ಆಡಳಿತಕ್ಕೆ ಕರ್ನಾಟಕದ ಮೈತ್ರಿ ಆಡಳಿತ ಮಾದರಿ ಎಂದು ಮುರಳೀಧರರಾವ್‌ ಲೇವಡಿ ಮಾಡಿದರು. ರಾಜ್ಯದಲ್ಲಿ ಹಾಲಿ ಬಿಜೆಪಿ ಸಂಸದರಿರುವ
ಕ್ಷೇತ್ರಗಳ ಜತೆಗೆ ಒಟ್ಟು 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರಯತ್ನ
ನಡೆದಿದೆ. ರಾಜ್ಯದ ಜನರಲ್ಲಿ ಪ್ರಧಾನಿ ಮೋದಿ, ಬಿಜೆಪಿ ಪರವಾಗಿ ಒಲವಿದೆ. ಪಕ್ಷಗಳು ಮೈತ್ರಿ ಮಾಡಿ ಕೊಂಡರೂ ಮತಗಳು ವರ್ಗಾವಣೆಯಾಗುವುದಿಲ್ಲ. ಕೇಂದ್ರ ಸರ್ಕಾರದ ಸಾಧನೆ ಹಾಗೂ ರಾಜ್ಯದ ಅಭಿವೃದಿಟಛಿಗೆ ಕೇಂದ್ರ ನೀಡಿದ ಕೊಡುಗೆ, ಕೇಂದ್ರ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು, ಮೈತ್ರಿ ಆಡಳಿತದ ವೈಫ‌ಲ್ಯ ವಿಚಾರಗಳು ಚುನಾವಣೆಯ ಪ್ರಮುಖ ವಿಚಾರಗಳಾಗಿವೆ. ಮೈತ್ರಿ ಸರ್ಕಾರದಲ್ಲಿನ ಅಸ್ಥಿರತೆ, ಆಂತರಿಕ ಕಲಹ, ಬ್ಲಾಕ್‌ವೆುàಲ್‌,ಕಮಿಷನ್‌ ವ್ಯವಹಾರವು ಆಡಳಿತ ವೈಖರಿ ತೋರಿಸುತ್ತದೆ ಎಂದು ಹೇಳಿದರು.

ಹಿಂದಿನ ಕಾಂಗ್ರೆಸ್‌ ಸರ್ಕಾರ 10 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದ್ದರೆ, ಮೈತ್ರಿ ಸರ್ಕಾರವು 20 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಈರೀತಿಯ ಆಡಳಿತ ಕೇಂದ್ರದಲ್ಲೂ ಬರಬಾರದು ಎಂಬ ಭಾವನೆ ಜನರಲ್ಲಿದೆ. ಹಾಗಾಗಿ, ದೇಶದಲ್ಲಿ
ಮಹಾಘಟಬಂಧನವೇ ಇಲ್ಲದಂತಾಗಿದೆ. ನಾನಾ ಪಕ್ಷಗಳು ಯಾವುದೇ ಸಿದಾಟಛಿಂತ, ಸಾಮಾನ್ಯ ಕನಿಷ್ಠ ಕಾರ್ಯಕ್ರಮವೂ ಇಲ್ಲದೇ ಕೇವಲ ಪ್ರಧಾನಿ ಮೋದಿ, ಬಿಜೆಪಿಯನ್ನು ವಿರೋಧಿಸಲು ಹಾಗೂ ಅವರು ಮತ್ತೆ ಪ್ರಧಾನಿಯಾಗುವುದನ್ನು ತಡೆಯುವ ಸಲುವಾಗಿ ಒಂದುಗೂಡುವ ಪ್ರಯತ್ನ ನಡೆಸಿದ್ದು, ಅದು ವಿಫ‌ಲವಾಗಿದೆ ಎಂದರು.

ನಿಖಿಲ್‌  ಕುಮಾರಸ್ವಾಮಿಯವರು ಸಲ್ಲಿರುವ ನಾಮಪತ್ರದಲ್ಲಿನ ನ್ಯೂನತೆಗಳನ್ನು ಆಕ್ಷೇಪಿಸಿ ಬಿಜೆಪಿ ದೂರು ನೀಡಿತ್ತು. ಪ್ರಮಾಣಪತ್ರದಲ್ಲಿ ನಿಖೀಲ್‌ ಅವರು ತಮ್ಮ ಆಸ್ತಿ ವಿವರ ಸರಿಯಾಗಿ ಸಲ್ಲಿಸಿರಲಿಲ್ಲ. ದೂರು ನೀಡಿರುವುದಕ್ಕೆ ಸ್ವೀಕೃತಿ ಪತ್ರವೂ ಇದೆ. ಆದರೆ, ಅಧಿಕಾರಿಗಳು ದೂರು ನೀಡಿಲ್ಲ ಎನ್ನುತ್ತಿದ್ದಾರೆ. ಇದರಿಂದ ಅಧಿಕಾರಿಗಳ
ಮೇಲೆ ಮುಖ್ಯಮಂತ್ರಿಗಳ ಪ್ರಭಾವ ಎಷ್ಟರ ಮಟ್ಟಿಗಿದೆ ಎಂಬುದು ಗೊತ್ತಾಗುತ್ತದೆ.
● ಮುರಳೀಧರರಾವ್‌

ಟಾಪ್ ನ್ಯೂಸ್

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

3-kushtagi

Kushtagi: ಕಳ್ಳರ ಅಟ್ಟಹಾಸಕ್ಕೆ 13 ಶ್ರೀಗಂಧದ ಮರ ಬಲಿ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.