![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 21, 2019, 3:00 AM IST
ಕಾರಟಗಿ: “ಕಣ್ಣೀರು ಸುರಿಸುವ ಮುಖ್ಯಮಂತ್ರಿಯಿಂದ ದೇಶ ಬದಲಾಗುವುದಿಲ್ಲ. ಬಡ ಹಾಗೂ ಮಧ್ಯಮ ವರ್ಗದವರ ಕಣ್ಣೀರು ಒರೆಸುವ ಪ್ರಧಾನಿ ನರೇಂದ್ರ ಮೋದಿಯಂತಹ ವ್ಯಕ್ತಿ ಮತ್ತೂಮ್ಮೆ ಪ್ರಧಾನಿಯಾಗಬೇಕು ಎನ್ನುತ್ತಾರೆ ದೇಶದ ಜನತೆ’ ಎಂದು ಬಿಜೆಪಿ ರಾಷ್ಟ್ರೀಯ ಸಹಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದರು.
ಬಿಜೆಪಿ “ಯುವಶಕ್ತಿ ಜಾಗೃತಿ ಸಭೆ’ಯಲ್ಲಿ ಮಾತನಾಡಿ, ಮೋದಿ ದೇಶಕ್ಕಾಗಿ ಕುಟುಂಬ ದೂರವಿಟ್ಟಿದ್ದಾರೆ. ಆದರೆ ಕಾಂಗ್ರೆಸ್, ಜೆಡಿಎಸ್ನವರು ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಪಂಚೆ ಕಟ್ಟಿಕೊಂಡು ದೇವಸ್ಥಾನಕ್ಕೆ ಹೋದರೆ ಜೋಕರ್ ಹೋದಂಗೆ ಕಾಣಿಸುತ್ತದೆ ಎಂದರು.
ಕೆಲ ದಿನಗಳ ಹಿಂದಿನ ಫೋಟೋ ನೋಡಿದಾಗ ಪ್ರಿಯಂಕಾ ಗಾಂಧಿ ಗಂಡ ಇದ್ದರೂ ಕೂಡ ಹಣೆ ಮೇಲೆ ಕುಂಕುಮ ಹಚ್ಚಿಕೊಂಡಿರಲಿಲ್ಲ. ಚುನಾವಣೆ ಪ್ರಚಾರಕ್ಕಾಗಿ ಬಂದಾಗ ಹಣೆ ಮೇಲೆ ತಿಲಕ ಕಾಣುತ್ತಿದೆ. ಅಕ್ಕ, ತಮ್ಮ ಚುನಾವಣಾ ಭಕ್ತರು, ಮೋದಿ ಶ್ರೇಷ್ಠ ದೇಶಭಕ್ತ.
ಅಂತಾರಾಷ್ಟ್ರೀಯ ಬಾಂಧವ್ಯ ಬೆಳೆಸುವಲ್ಲಿ ಮೋದಿ ಕೊಡುಗೆ ಅಪಾರ. 2014ರಲ್ಲಿ ಅಧಿ ಕಾರಕ್ಕೆ ಬಂದ ನರೇಂದ್ರ ಮೋದಿ ಪ್ರಧಾನಿಯಾಗಿ ಹೇಗೆ ಆಡಳಿತ ನಡೆಸಬೇಕೆಂಬುದನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಜಗತ್ತು ಕೂಡ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬಯಸುತ್ತಿದೆ ಎಂದರು.
ಬಿಜೆಪಿಯವು ಏನೋ ಹೇಳ್ತಾವೆ, ಸಂತೋಷ್ಗೆ ಬುದ್ಧಿ ಇಲ್ಲ. ಸೋಲಿನ ಹತಾಶೆಯಿಂದ ಏನೇನೊ ಮಾತಾಡ್ತಾವೆ. ಕರ್ನಾಟಕದಲ್ಲಿ ಅವರು ಸಿಂಗಲ್ ಡಿಜಿಟ್ ಅಷ್ಟೇ, ಡಬಲ್ ಡಿಜಿಟ್ ದಾಟಲ್ಲ.
-ಸಿದ್ದರಾಮಯ್ಯ, ಮಾಜಿ ಸಿಎಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.